AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foreign Universities: ಭಾರತದಲ್ಲಿ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಂದು ಹೆಜ್ಜೆ ಮುಂದಿಟ್ಟ ಪ್ರಧಾನಿ ಮೋದಿ

ಭಾರತದಲ್ಲಿ ಆಕ್ಸ್​ಫರ್ಡ್​, ಯೇಲ್​, ಸ್ಟ್ಯಾನ್‌ಫೋರ್ಡ್‌ನಂತಹ ಪ್ರತಿಷ್ಠಿತ ವಿದೇಶಿ  ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಒಂದು ಹೆಜ್ಜೆ ಮುಂದಿರಿಸಿದ್ದಾರೆ.

Foreign Universities: ಭಾರತದಲ್ಲಿ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಂದು ಹೆಜ್ಜೆ ಮುಂದಿಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ನಯನಾ ರಾಜೀವ್

Updated on: Jan 06, 2023 | 2:22 PM

ಭಾರತದಲ್ಲಿ ಆಕ್ಸ್​ಫರ್ಡ್​, ಯೇಲ್​, ಸ್ಟ್ಯಾನ್‌ಫೋರ್ಡ್‌ನಂತಹ ಪ್ರತಿಷ್ಠಿತ ವಿದೇಶಿ  ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಒಂದು ಹೆಜ್ಜೆ ಮುಂದಿರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಕ್ಯಾಂಪಸ್‌ಗಳನ್ನು ತೆರೆಯಲು ವಿಶ್ವವಿಖ್ಯಾತ ವಿಶ್ವವಿದ್ಯಾಲಯಗಳನ್ನು ಆಕರ್ಷಿಸಲು ಪ್ರಯತ್ನಿಸುತ್ತಿದೆ. ಯೇಲ್, ಆಕ್ಸ್‌ಫರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಂತಹ ಪ್ರಮುಖ ವಿದೇಶಿ ವಿಶ್ವವಿದ್ಯಾಲಯಗಳಿಗೆ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ಮತ್ತು ಪದವಿಗಳನ್ನು ನೀಡಲು ಭಾರತವು ಒಂದು ಹೆಜ್ಜೆ ಮುಂದಿಟ್ಟಿದೆ.

ಭಾರತವು ತನ್ನ ವಿಶ್ವವಿದ್ಯಾನಿಲಯಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸಲು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳ ತರಲು ಪ್ರಯತ್ನ ನಡೆಸುತ್ತಿದೆ. ಭಾರತೀಯ ವಿದ್ಯಾರ್ಥಿಗಳು ಕೈಗೆಟುಕುವ ವೆಚ್ಚದಲ್ಲಿ ವಿದೇಶಿ ವಿದ್ಯಾರ್ಹತೆಗಳನ್ನು ಪಡೆಯಲು ಮತ್ತು ಭಾರತವನ್ನು ಆಕರ್ಷಕ ಜಾಗತಿಕ ಅಧ್ಯಯನ ತಾಣವನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಪ್ರಯತ್ನಿಸುತ್ತಿದೆ.

ಭಾರತದ ವಿಶ್ವವಿದ್ಯಾನಿಲಯಗಳಿಂದ, ಮೈಕ್ರೋಸಾಫ್ಟ್‌ನಿಂದ ಗೂಗಲ್‌ನ ಸಿಇಒವರೆಗೆ ಹೊರಬಂದಿದ್ದಾರೆ. ಈಗ ಪ್ರಧಾನಿ ಮೋದಿ ಅವರು ಯೇಲ್, ಆಕ್ಸ್‌ಫರ್ಡ್ ಮತ್ತು ಸ್ಟ್ಯಾನ್‌ಫೋರ್ಡ್‌ನಂತಹ ವಿಶ್ವದ ಪ್ರಸಿದ್ಧ ವಿಶ್ವವಿದ್ಯಾಲಯಗಳು ಭಾರತದಲ್ಲಿ ತಮ್ಮ ಕ್ಯಾಂಪಸ್‌ಗಳನ್ನು ತೆರೆಯಬೇಕು, ಇದರಿಂದ ಭಾರತೀಯ ವಿಶ್ವವಿದ್ಯಾಲಯಗಳು ಅವರೊಂದಿಗೆ ಸ್ಪರ್ಧಿಸಬಹುದು ಎನ್ನುವ ಆಲೋಚನೆ ಮಾಡಿದೆ.

ಕೆಲವು ವಿದೇಶಿ ವಿಶ್ವವಿದ್ಯಾಲಯಗಳು ಈಗಾಗಲೇ ಭಾರತೀಯ ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದಿವೆ. ಕೆಲವು ವಿಶ್ವವಿದ್ಯಾನಿಲಯಗಳು ಈಗಾಗಲೇ ಭಾರತೀಯ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಹೊಂದಿವೆ, ವಿದ್ಯಾರ್ಥಿಗಳು ಭಾರತದಲ್ಲಿ ಭಾಗಶಃ ಅಧ್ಯಯನ ಮಾಡಲು ಮತ್ತು ವಿದೇಶದಲ್ಲಿ ಮುಖ್ಯ ಕ್ಯಾಂಪಸ್‌ನಲ್ಲಿ ತಮ್ಮ ಪದವಿಗಳನ್ನು ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ ಕ್ರಮವು ಈ ಸಾಗರೋತ್ತರ ಸಂಸ್ಥೆಗಳನ್ನು ಸ್ಥಳೀಯ ಪಾಲುದಾರರಿಲ್ಲದೆ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸುತ್ತದೆ.

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಅಂತಿಮ ಕರಡನ್ನು ಕಾನೂನಾಗುವ ಮೊದಲು ಅದರ ಅನುಮೋದನೆಗಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು. ಈಗ ಈ ವಿದೇಶಿ ಸಂಸ್ಥೆಗಳು ಉತ್ಸುಕವಾಗಿವೆ ಮತ್ತು ಯಾವುದೇ ಸ್ಥಳೀಯ ಪಾಲುದಾರರಿಲ್ಲದೆ ಭಾರತದಲ್ಲಿ ತಮ್ಮ ಕ್ಯಾಂಪಸ್‌ಗಳನ್ನು ತೆರೆಯಲು ಬಯಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ