AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School Reopen: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ

School Reopening: ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

School Reopen: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 18, 2021 | 5:14 PM

Share

ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಈ ಬಗ್ಗೆ ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ಬಳಿಕ ಶಾಲೆ ಆರಂಭಿಸುವುದಾಗಿ ನಾವು ಹೇಳಿದ್ದೆವು. ಅದರಂತೆ ಶಾಲೆ ಆರಂಭ ಆಗಲಿದೆ. ಆದರೆ, ಮಕ್ಕಳಿಗೆ ಹಾಜರಾತಿ ಕಡ್ಡಾಯ ಇರುವುದಿಲ್ಲ. ಶಾಲೆಗೆ ಹಾಜರಾಗಲು ಮಕ್ಕಳಿಗೆ ಒತ್ತಾಯ ಇರುವುದಿಲ್ಲ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಒಪ್ಪಿಗೆ ಬೇಕು. ಜಾಗದ ಕೊರತೆ ಇರುವಲ್ಲಿ ಶೇ.50ರಷ್ಟು ಮಕ್ಕಳು ಮಾತ್ರ ಹಾಜರಾಗಬೇಕು ಎಂದು ನಾಗೇಶ್ ತಿಳಿಸಿದ್ದಾರೆ.

ಸದ್ಯಕ್ಕೆ LKG, UKG ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 21 ಅಥವಾ 25ರಂದು ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಫೀಸ್​ ಬಗ್ಗೆ ಕೋರ್ಟ್​​ನಿಂದ ಆದೇಶ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ ಕೊವಿಡ್ ಹೊಸ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ಈಜುಕೊಳ ಕಾರ್ಯಾಚರಣೆಗೆ ಕೆಲವು ನಿರ್ಬಂಧಗಳ ಅನುಸಾರ ಅವಕಾಶ ನೀಡಲಾಗಿದೆ. ನೂತನ ಮಾರ್ಗಸೂಚಿಯಲ್ಲಿ ಶಾಲಾ ಮರು ಪ್ರಾರಂಭದ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಈಜುಕೊಳಗಳಲ್ಲಿ ಶೇಕಡಾ 50 ರಷ್ಟು ಕಾರ್ಯಚಾರಣೆಗೆ ಅವಕಾಶ ನೀಡಲಾಗಿದೆ. ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ರಿಲ್ಯಾಕ್ಸೇಷನ್ ನೀಡಲಾಗಿದೆ. ಆದರೆ, ಯು.ಕೆ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ಮುಂದುವರಿಕೆ ಮಾಡಲಾಗಿದೆ.

ಇದನ್ನೂ ಓದಿ: Coronavirus Cases in India: 230 ದಿನಗಳಲ್ಲೇ ಅತಿಕಡಿಮೆ ಕೊರೊನಾ ಸೋಂಕಿನ ಕೇಸ್​ಗಳು ದಾಖಲು; ದೇಶದಲ್ಲಿ ತಗ್ಗುತ್ತಿದೆ ಸಾಂಕ್ರಾಮಿಕದ ಅಬ್ಬರ

ಇದನ್ನೂ ಓದಿ: ಬೆಳಗಾವಿ: ಅಕ್ಟೋಬರ್ 23, 24 ರಂದು ಕಿತ್ತೂರು ಉತ್ಸವ; ಕೊವಿಡ್ ಮಾರ್ಗಸೂಚಿ ಅನುಸಾರ ಆಚರಣೆ

Published On - 4:44 pm, Mon, 18 October 21

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ