ಯುವತಿಯರಿಗೆ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ -‘ರಾಹ್‌ ಸೂಪರ್ 30’ಗೆ ಚಾಲನೆ

'ರಾಹ್‌ ಅಕಾಡೆಮಿ' ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ರಾಜ್ಯದ 30 ಪ್ರತಿಭಾನ್ವಿತ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜತೆಗೆ, ಗ್ರಂಥಾಲಯದ ವ್ಯವಸ್ಥೆ, ಪರಿಣಿತರ ಮಾರ್ಗದರ್ಶನ ಸೇರಿದಂತೆ ಅಧ್ಯಯನಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು.

ಯುವತಿಯರಿಗೆ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ -'ರಾಹ್‌ ಸೂಪರ್ 30'ಗೆ ಚಾಲನೆ
ರಾಹ್ ಸೂಪರ್ 30
Follow us
| Updated By: ನಯನಾ ಎಸ್​ಪಿ

Updated on: Nov 11, 2023 | 1:25 PM

ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಅವಕಾಶ ವಂಚಿತ ಪ್ರತಿಭಾನ್ವಿತ ಯುವತಿಯರಿಗೆ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರಕ್ಕೆ ಪ್ರವೇಶ ಪಡೆಯುವ ‘ರಾಹ್ ಸೂಪರ್‌ 30’ (Raah Super 30) ಕಾರ್ಯಕ್ರಮಕ್ಕೆ ರಾಷ್ಟ್ರೀಯ ಶಿಕ್ಷಣ ದಿನದಂದು ಚಾಲನೆ ದೊರೆತಿದೆ.

‘ರಾಹ್‌ ಅಕಾಡೆಮಿ’ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ರಾಜ್ಯದ 30 ಪ್ರತಿಭಾನ್ವಿತ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜತೆಗೆ, ಗ್ರಂಥಾಲಯದ ವ್ಯವಸ್ಥೆ, ಪರಿಣಿತರ ಮಾರ್ಗದರ್ಶನ ಸೇರಿದಂತೆ ಅಧ್ಯಯನಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು.

ಪದವಿ ಪೂರ್ಣಗೊಳಿಸಿರುವ ಪ್ರತಿಭಾನ್ವಿತ ಯುವತಿಯರು ವೆಬ್‌ಸೈಟ್‌ raahsuper30.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಹಲವು ಸುತ್ತಿನ ಪರೀಕ್ಷೆ ನಂತರ ಕಾರ್ಯಕ್ರಮಕ್ಕೆ ಆಯ್ದ 30 ಅಭ್ಯರ್ಥಿಗಳನ್ನು ಸೇರ್ಪಡೆಗೊಳಿಸಲಾಗುವುದು.

Raah Academy

ರಾಹ್ ಅಕಾಡೆಮಿ

“ಭಾರತದ ಮೊದಲ ಶಿಕ್ಷಣ ಸಚಿವ, ಭಾರತ ರತ್ನ ಡಾ. ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮದಿನವಾದ ನವೆಂಬರ್ 11 ರಂದು ಆಚರಿಸಲಾಗುವ ‘ರಾಷ್ಟ್ರೀಯ ಶಿಕ್ಷಣ ದಿನ’ದಂದು ‘ರಾಹ್‌ ಸೂಪರ್‌ 30’ಕಾರ್ಯಕ್ರಮ ಆರಂಭಿಸಲಾಗುತ್ತಿದೆ. ಅಜಾದ್ ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೆ ತಂದು, ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರ ಫಲವಾಗಿ ದೇಶದಲ್ಲಿಂದು ಸಾಕ್ಷರರ ಸಂಖ್ಯೆ ಹೆಚ್ಚಿ, ಶಿಕ್ಷಣ ಕ್ಷೇತ್ರದಲ್ಲಿ ನಾವು ಈ ಮಟ್ಟದ ಸಾಧನೆ ಮಾಡಲು ಸಾಧ್ಯವಾಗಿದೆ. ಅವರ ಹಾದಿಯಲ್ಲಿ ನಾವು ಇಂದು ಸಣ್ಣ ಹೆಜ್ಜೆ ಇಟ್ಟಿದ್ದೇವೆ,”ಎಂದು ರಾಹ್‌ ಸಂಸ್ಥೆಯ ಟ್ರಸ್ಟಿ ಹುಸೇನ್ ಪ್ರಕಟಣೆಯಲ್ಲಿ ಕೋರಿದ್ದಾರೆ.

“ಐಎಎಸ್‌, ಐಪಿಎಎಸ್, ಕೆಎಎಎಸ್‌ ಅಧಿಕಾರಿಯಾಗುವ ಕನಸು ಹೊತ್ತ ಎಲ್ಲ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಸುಲಭದ ಮಾತಲ್ಲ. ಹಣಕಾಸಿನ ಅಡಚಣೆ, ಸಾಮಾಜಿಕ ಕಟ್ಟುಪಾಡು, ಮಾರ್ಗದರ್ಶನದ ಕೊರತೆಯಿಂದಾಗಿ ಮರೆಯಲ್ಲೇ ಉಳಿದು ಬಿಡುತ್ತಾರೆ. ಅಂತಹ ಹೆಣ್ಣು ಮಕ್ಕಳಿಗೆ ಪುಸ್ತಕ ಕೊಟ್ಟರಷ್ಟೇ ಸಾಲದು. ಅಧ್ಯಯನಕ್ಕೆ ಪೂರಕ ವಾತಾರವಣವೂ ಬೇಕು. ಅದಕ್ಕಾಗಿಯೇ ಈ ಕಾರ್ಯಕ್ರಮ ರೂಪಿಸಿದ್ದೇವೆ. ಈ ಸಂಬಂಧ ವೆಬ್‌ಸೈಟ್‌ನಲ್ಲಿ ಎಲ್ಲ ಮಾಹಿತಿ ಲಭ್ಯವಿದ್ದು, ಅರ್ಹ ಯುವತಿಯರು ಇದರ ಸದುಪಯೋಗ ಪಡದುಕೊಳ್ಳಬೇಕು,”ಎಂದಿದ್ದಾರೆ.

ಇದನ್ನೂ ಓದಿ: ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಏಕೆ ಆಚರಿಸಲಾಗುತ್ತದೆ ಎಂದು ತಿಳಿಯಿರಿ

“ಶಿಕ್ಷಣದಲ್ಲಿ ಲಿಂಗ ಸಮಾನತೆ ಇಂದಿನ ಅಗತ್ಯ. ಸ್ವಾತಂತ್ರ್ಯದ ನಂತರ ನಮ್ಮ ರಾಷ್ಟ್ರದ ಸಾಕ್ಷರತೆ ಪ್ರಮಾಣ ಹೆಚ್ಚಿದ್ದರೂ, ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಲಿಂಗ ಸಮಾನತೆಯನ್ನು ಸಾಧಿಸಲಾಗಿಲ್ಲ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ರಾಹ್ ಸೂಪರ್ 30’ ಉಚಿತ ವಸತಿ, ಅಧ್ಯಯನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ,” ಎಂದು ಎಸ್‌.ಎ. ಹುಸೇನ್‌ ಹೇಳಿದ್ದಾರೆ.

“ಸಮಾಜ ಮತ್ತು ಸಮುದಾಯದ ಕಲ್ಯಾಣದಲ್ಲಿ ಮಹಿಳೆಯರ ಶಿಕ್ಷಣವು ಬಹಳ ಮುಖ್ಯವಾದ ಹೆಜ್ಜೆ. ಮಹಿಳೆಯರು ಸಮಾನ ಪಾತ್ರ ನಿರ್ವಹಿಸಿದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ, ಇದನ್ನು ಶಿಕ್ಷಣದಿಂದ ಮಾತ್ರ ಸಾಧಿಸಬಹುದು,”ಎಂದು ರಾಹ್‌ ಅಕಾಡೆಮಿಯ ಅಧ್ಯಕ್ಷರಾದ ರೆಹಾನಾ ಶಮೀಮ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ವಿವರ:

  • ಪದವಿ ನಂತರದ ಈ ಶೈಕ್ಷಣಿಕ ಕಾರ್ಯಕ್ರಮಕ್ಕೆ ಪ್ರತಿ ವರ್ಷ 30 ಯುವತಿಯರಿಗೆ ಮಾತ್ರ ಅವಕಾಶ
  • ಆಯ್ದ ವಿದ್ಯಾರ್ಥಿನಿಯರಿಗೆ 12 ತಿಂಗಳ (1 ವರ್ಷ) ಉಚಿತ ವಸತಿ, ಅಧ್ಯಯನಕ್ಕೆ ನೆರವು
  • ಗ್ರಂಥಾಲಯ, ವಸತಿ ನಿಲಯ ಜತೆಗೆ ಪರಿಣಿತರು, ಹಿರಿಯ ಅಧಿಕಾರಿಗಳು, ವಿಷಯ ತಜ್ಞರಿಂದ ಮಾರ್ಗದರ್ಶನ

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ