AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​

ಕರ್ನಾಟಕದಲ್ಲಿ ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆಗೆ ಹಿಂದೂಪರ ಸಂಘಟನೆಗಳಿಂದ ವಿರೋಧ ಕೇಳಿಬಂದಿದೆ. ಹಿಂದೂ ಹಬ್ಬಗಳಿಗೆ ಇದೇ ರೀತಿಯ ಬದಲಾವಣೆ ಇಲ್ಲದಿರುವುದು ಕಾನೂನು ಸಮಾನತೆಯ ಉಲ್ಲಂಘನೆ ಎಂದು ಆರೋಪಿಸಲಾಗಿದ್ದು,ಸುತ್ತೋಲೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಲಾಗಿದೆ. ಈ ನಿರ್ಧಾರ ವ್ಯಾಪಕ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​
ಸಾಂದರ್ಭಿಕ ಚಿತ್ರImage Credit source: Google
ವಿನಯ್​ ಕಾಶಪ್ಪನವರ್​
| Edited By: |

Updated on:Feb 03, 2026 | 7:21 PM

Share

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ ಬಂದಿದೆ.

ರಂಜಾನ್ ಹಿನ್ನೆಲೆ ರಾಜ್ಯದ ಉರ್ದು ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಅವಧಿ ಬದಲಾವಣೆ ಮಾಡಿ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿತ್ತು. ಈ ಅವಧಿಯಲ್ಲಿ ಬೆಳಿಗ್ಗೆ 8ಕ್ಕೆ ಶಾಲೆ ಆರಂಭ ಮಾಡಿ ಮಧ್ಯಾಹ್ನ 12:45ಕ್ಕೆ ಶಾಲೆ ಅವಧಿ ಮುಕ್ತಾಯಕ್ಕೆ ಸೂಚಿಸಿತ್ತು. 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ 2026ರ ಮಾರ್ಚ್​​ 20ರವರೆಗೆ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿತ್ತು. ಈ ನಿರ್ಧಾರವೀಗ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು?

ಸುತ್ತೋಲೆ ಬಗ್ಗೆ ಶಾಸಕ ಯತ್ನಾಳ್​​ ಕಿಡಿ

ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರಿಗೆ ಸುಮ್ಮನೆ ಒಂದು ತಿಂಗಳು ರಜಾ ಕೊಟ್ಟು ಬಿಡುವುದು ಒಳ್ಳೆಯದು. ರಂಜಾನ್, ದೀಪಾವಳಿ, ಗಣೇಶ ಚತುರ್ಥಿ ಬೇರೆ ಅಂತಾ ಕಾಂಗ್ರೆಸ್ ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿದೆ. ಸಿದ್ದರಾಮಯ್ಯ ಸರ್ಕಾರ ಎಲ್ಲಿ ಅವಕಾಶ ಸಿಗುತ್ತದೋ ಅಲ್ಲಿ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ. ಕೊಡಗಿನ ಶಾಸಕ ಹಿಂದೂ ಸಮಾಜೋತ್ಸವ ಹಿನ್ನೆಲೆ ರಸ್ತೆಯಲ್ಲಿ ಹೋಗುವಾಗ ಹಿಂದೂ ಕಾರ್ಯಕರ್ತರು ಕರೆದಿದ್ದಕ್ಕೆ ಹೋಗಿ ಶಾಲು ಹಾಕಿಸಿಕೊಂಡಿದ್ದಕ್ಕೂ ಹೈಕಮಾಂಡ್​​ನಲ್ಲಿ ಚರ್ಚೆಯಾಗುತ್ತಿದೆ. ಸಮಾನತೆ ಶಬ್ದಕ್ಕೆ ಅರ್ಥವಿಲ್ಲದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಇದು ಅತ್ಯಂತ ಹೇಯ ಕೆಲಸ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:21 pm, Tue, 3 February 26

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ