AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭ

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭವಾಗಲಿವೆ. ಈ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದು, ಅದು ಈ ಕೆಳಗಿನಂತಿದೆ.

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರು, ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭ
ಗೃಹ ಸಚಿವ ಆರಗ ಜ್ಞಾನೇಂದ್ರ
ರಮೇಶ್ ಬಿ. ಜವಳಗೇರಾ
|

Updated on:Feb 28, 2023 | 3:05 PM

Share

ಬೆಂಗಳೂರು: ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ(Rashtriya Raksha University) ಮಂಜೂರಾಗಿದ್ದು, ಶಿವಮೊಗ್ಗದಲ್ಲಿ (Shivamogga) ರಕ್ಷಾ  ವಿಶ್ವವಿದ್ಯಾಲಯ ಆರಂಭವಾಗಲಿದೆ.  ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದದಿಂದಲೇ ತರಗತಿ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (araga jnanendra) ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Exam Stress: ಪರೀಕ್ಷೆಯ ಒತ್ತಡವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಸಖತ್ ಟಿಪ್ಸ್

ಈ ಬಗ್ಗೆ ಇಂದು (ಫೆ.28) ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ, ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ. 2 ತಿಂಗಳ ಹಿಂದೆ ಎಸಿಎಸ್ ಅಹಮದಾಬಾದ್ ವಿವಿಗೆ ತೆರಳಿದ್ದೆವು. ನೀವು ಅಪೇಕ್ಷೆಪಟ್ಟರೆ ವಿವಿ ಆರಂಭಿಸುವುದಾಗಿ ಅವರು ಹೇಳಿದ್ದರು. ಅದರಂತೆ ಶಿವಮೊಗ್ಗದಲ್ಲಿ ವಿಶ್ವವಿದ್ಯಾಲಯ ಆರಂಭವಾಗಲಿದೆ ಎಂದರು.

ಈ ಶೈಕ್ಷಣಿಕ ವರ್ಷದಲ್ಲೇ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ತರಗತಿ ಆರಂಭಿಸಲಾಗುವುದು. ಕ್ಯಾಂಪಸ್​ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ನವಿಲೆ ಬಳಿ 8 ಎಕರೆ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ. ಡಿಪ್ಲೊಮಾ, ಡಿಗ್ರಿಗೆ ಪಿಯುಸಿ ಅರ್ಹತೆ ಹೊಂದಿರಬೇಕು. ಇನ್ನು ಪಿಜಿಗೆ ಡಿಗ್ರಿ ಪಡೆದಿರಬೇಕು. ಮಿಲಿಟರಿ, ಆಂತರಿಕ ಭದ್ರತಾ ವಿಭಾಗದ ಕೆಲಸದ ಬಗ್ಗೆ ಬೋಧನೆ ಮಾಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಇಲ್ಲಿ ಪ್ರವೇಶಾತಿ ನಡೆಯಲಿದೆ ಎಂದು ವಿವರಿಸಿದರು.

ಯಾವೆಲ್ಲಾ ಕೋರ್ಸ್​ಗಳು ಲಭ್ಯ?

  • ಡಿಪ್ಲೋಮಾ ಇನ್ ಸೈನ್ಸ್
  • ಕಾರ್ಪೊರೇಟ್ ಸೆಕ್ಯೂರಿಟಿ ಮ್ಯಾನೇಜ್ಮೆಂಟ್
  • ಡಿಪ್ಲೋಮಾ ಇನ್ ಕ್ರಿಮಿನಲ್ ಇನ್ವೆಸ್ಟಿಗೇಶನ್
  • ಪಿಜಿ ಡಿಪ್ಲೋಮಾ ಸೈಬರ್ ಸೆಕ್ಯೂರಿಟಿ, ಸೈಬರ್ ಲಾ
  • ರೋಡ್ ಟ್ರಾಫಿಕ್ ಸೇಫ್ಟಿ ಮ್ಯಾನೇಜ್ಮೆಂಟ್
  • ಫಿಜಿಕಲ್​ ಫಿಟ್​ನೆಸ್ ಮ್ಯಾನೇಜ್ಮೆಂಟ್

ಪೊಲೀಸ್ ಇಲಾಖೆ ಹಾಗೂ ಸಶಸ್ತ್ರ ಪಡೆಗಳ ತರಬೇತಿ ಮತ್ತು ಕರ್ನಾಟಕ ಪೊಲೀಸ್ , ಸರ್ಕಾರಿ ಸಂಶೋಧನೆ ವಿಭಾಗಕ್ಕೆ ಸೇರಲು ಬೇಕಾದ ತರಬೇತಿಯನ್ನು ಯುವಕರಿಗೆ ನೀಡಲಾಗುತ್ತದೆ.

ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮಾಡಲು ಬಯಸುವ ಯುವಕರಿಗೆ ಇದು ಉತ್ತಮವಾಗಿದೆ.

ಇನ್ನಷ್ಟು ಎಜುಕೇಶನ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:59 pm, Tue, 28 February 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ