AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ

4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ
ಸಾಂದರ್ಭಿಕ ಚಿತ್ರImage Credit source: Teachers Magazine
TV9 Web
| Updated By: ನಯನಾ ಎಸ್​ಪಿ|

Updated on: Apr 28, 2023 | 1:36 PM

Share

ಬೆಂಗಳೂರು: 4 ವರ್ಷಗಳ ನಂತರ ಪ್ರೌಢಶಾಲೆಗಳ (High School) ಖಾಲಿ ಪಿಸಿಎಂ (PCM) ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ (Education Board) ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (Higher Primary School) ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲೆ ಸಹ ಶಿಕ್ಷಕರ (Teachers) ವೃಂದದ ತರಬೇತಿ ಹೊಂದಿದ ಪದವೀಧರ ಶಿಕ್ಷಕರ ಮರು ಹೊಂದಾಣಿಕೆಗೆ ಸೂಚನೆ ನೀಡಲಾಗಿದೆ. ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ.

4 ವರ್ಷಗಳಿಂದ ಶಿಕ್ಷಕರ ನೇಮಕಾತಿಗೆ ಬ್ರೇಕ್ ಬಿದಿದ್ದು ಇದೀಗ ಈ ಪಕ್ರಿಯೆಗೆ ಚಾಲನೆ ದೊರೆತಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಅನುಕೂಲವಾಗುತ್ತದೆ. ಎಂಟನೇ ತರಗತಿಗೆ ಶೂನ್ಯ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನ ಹುದ್ದೆಗಳಿಗೆ ಮರು ಹೊಂದಾಣಿಕೆ ಮಾಡಿ ಸ್ಥಳ ನಿಯುಕ್ತಿಗೊಳಿಸುವಂತೆ ಪ್ರೌಢಶಿಕ್ಷಣ ಇಲಾಖೆ ವತಿಯಿಂದ ಡಿಡಿಪಿಐಗಳು ಮತ್ತು ಬಿಇಒಗಳಿಗೆ ಸೂಚನೆ ನೀಡಲಾಗಿದೆ.

ಆರರಿಂದ ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: NTA ಇಂದು ಸೆಷನ್ 2 ಫಲಿತಾಂಶವನ್ನು ಬಿಡುಗಡೆ ಮಾಡಲಿದೆ; ಇಲ್ಲಿದೆ ಫಲಿತಾಂಶ ಪರಿಶೀಲಿಸಲು ಲಿಂಕ್

2017 ರಲ್ಲಿ ಕೊರತೆ ಇರುವ ಶಿಕ್ಷಕರ ಸಂಖ್ಯೆಗಿಂತಲೂ ಹೆಚ್ಚು ಮಂದಿಯ ನೇಮಕಕ್ಕೆ ಸರಕಾರ ಅನುಮತಿ ನೀಡಿತ್ತು. ರಾಜ್ಯದ ಎಲ್ಲ ಪ್ರೌಢಶಾಲೆಗಳಿಗೆ 1,500 ಮಂದಿ, ಪ್ರಾಥಮಿಕ ಶಾಲೆಗಳಿಗೆ 15,991 ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿರುವ ಸರಕಾರ, ಜಿಲ್ಲೆಯಲ್ಲೂ ಪ್ರಾಥಮಿಕ ಶಾಲೆಗಳಿಗೆ 349 ಮಂದಿ ಹಾಗೂ ಪ್ರೌಢಶಾಲೆಗಳಿಗೆ 51 ಮಂದಿ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿತ್ತು. ಪ್ರಾಥಮಿಕ ಶಾಲೆಗಳಿಗೆ ನೇಮಕಕ್ಕೆ ಬಾಗೇಪಲ್ಲಿ ತಾಲೂಕಿಗೆ 160, ಚಿಕ್ಕಬಳ್ಳಾಪುರ ತಾಲೂಕಿಗೆ 42, ಚಿಂತಾಮಣಿ ತಾಲೂಕಿಗೆ 54, ಗೌರಿಬಿದನೂರು ತಾಲೂಕಿಗೆ 4, ಗುಡಿಬಂಡೆ ತಾಲೂಕಿಗೆ 42, ಶಿಡ್ಲಘಟ್ಟ ತಾಲೂಕಿಗೆ 47 ಮಂದಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿತ್ತು.

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?