AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ

ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ

4 ವರ್ಷಗಳ ನಂತರ ಪ್ರೌಢಶಾಲೆಗಳ ಖಾಲಿ ಪಿಸಿಎಂ ಹುದ್ದೆಗಳಿಗೆ ಮರು ಹೊಂದಾಣಿಕೆ
ಸಾಂದರ್ಭಿಕ ಚಿತ್ರImage Credit source: Teachers Magazine
TV9 Web
| Edited By: ನಯನಾ ಎಸ್​ಪಿ|

Updated on: Apr 28, 2023 | 1:36 PM

Share

ಬೆಂಗಳೂರು: 4 ವರ್ಷಗಳ ನಂತರ ಪ್ರೌಢಶಾಲೆಗಳ (High School) ಖಾಲಿ ಪಿಸಿಎಂ (PCM) ಹುದ್ದೆಗಳಿಗೆ ಮರು ಹೊಂದಾಣಿಕೆ ಆರಂಭವಾಗಲಿದೆ. ಶಿಕ್ಷಣ ಇಲಾಖೆಯಿಂದ (Education Board) ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (Higher Primary School) ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲೆ ಸಹ ಶಿಕ್ಷಕರ (Teachers) ವೃಂದದ ತರಬೇತಿ ಹೊಂದಿದ ಪದವೀಧರ ಶಿಕ್ಷಕರ ಮರು ಹೊಂದಾಣಿಕೆಗೆ ಸೂಚನೆ ನೀಡಲಾಗಿದೆ. ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ.

4 ವರ್ಷಗಳಿಂದ ಶಿಕ್ಷಕರ ನೇಮಕಾತಿಗೆ ಬ್ರೇಕ್ ಬಿದಿದ್ದು ಇದೀಗ ಈ ಪಕ್ರಿಯೆಗೆ ಚಾಲನೆ ದೊರೆತಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಅನುಕೂಲವಾಗುತ್ತದೆ. ಎಂಟನೇ ತರಗತಿಗೆ ಶೂನ್ಯ ದಾಖಲಾತಿ ಇರುವ ಸರ್ಕಾರಿ ಶಾಲೆಗಳ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನ ಹುದ್ದೆಗಳಿಗೆ ಮರು ಹೊಂದಾಣಿಕೆ ಮಾಡಿ ಸ್ಥಳ ನಿಯುಕ್ತಿಗೊಳಿಸುವಂತೆ ಪ್ರೌಢಶಿಕ್ಷಣ ಇಲಾಖೆ ವತಿಯಿಂದ ಡಿಡಿಪಿಐಗಳು ಮತ್ತು ಬಿಇಒಗಳಿಗೆ ಸೂಚನೆ ನೀಡಲಾಗಿದೆ.

ಆರರಿಂದ ಎಂಟನೇ ತರಗತಿ ಬೋಧನೆಗಾಗಿ ಹೊಸದಾಗಿ ನೇಮಕ ಮಾಡಿಕೊಂಡ 13,151 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹುದ್ದೆ ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: NTA ಇಂದು ಸೆಷನ್ 2 ಫಲಿತಾಂಶವನ್ನು ಬಿಡುಗಡೆ ಮಾಡಲಿದೆ; ಇಲ್ಲಿದೆ ಫಲಿತಾಂಶ ಪರಿಶೀಲಿಸಲು ಲಿಂಕ್

2017 ರಲ್ಲಿ ಕೊರತೆ ಇರುವ ಶಿಕ್ಷಕರ ಸಂಖ್ಯೆಗಿಂತಲೂ ಹೆಚ್ಚು ಮಂದಿಯ ನೇಮಕಕ್ಕೆ ಸರಕಾರ ಅನುಮತಿ ನೀಡಿತ್ತು. ರಾಜ್ಯದ ಎಲ್ಲ ಪ್ರೌಢಶಾಲೆಗಳಿಗೆ 1,500 ಮಂದಿ, ಪ್ರಾಥಮಿಕ ಶಾಲೆಗಳಿಗೆ 15,991 ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿರುವ ಸರಕಾರ, ಜಿಲ್ಲೆಯಲ್ಲೂ ಪ್ರಾಥಮಿಕ ಶಾಲೆಗಳಿಗೆ 349 ಮಂದಿ ಹಾಗೂ ಪ್ರೌಢಶಾಲೆಗಳಿಗೆ 51 ಮಂದಿ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿತ್ತು. ಪ್ರಾಥಮಿಕ ಶಾಲೆಗಳಿಗೆ ನೇಮಕಕ್ಕೆ ಬಾಗೇಪಲ್ಲಿ ತಾಲೂಕಿಗೆ 160, ಚಿಕ್ಕಬಳ್ಳಾಪುರ ತಾಲೂಕಿಗೆ 42, ಚಿಂತಾಮಣಿ ತಾಲೂಕಿಗೆ 54, ಗೌರಿಬಿದನೂರು ತಾಲೂಕಿಗೆ 4, ಗುಡಿಬಂಡೆ ತಾಲೂಕಿಗೆ 42, ಶಿಡ್ಲಘಟ್ಟ ತಾಲೂಕಿಗೆ 47 ಮಂದಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿತ್ತು.

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ