AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET Ranking: ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ ರ್ಯಾಂಕಿಂಗ್​ ಪ್ರಕಟ

ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ ರ್ಯಾಂಕಿಂಗ್​ ಪ್ರಕಟ ವಾಗಲಿದ್ದು, ಅಕ್ಟೋಬರ್ 3ರಿಂದ ಕೌನ್ಸೆಲಿಂಗ್​ ಪ್ರಕ್ರಿಯೆ ಆರಂಭವಾಗಲಿವೆ ಎಂದು ರಾಜ್ಯ ಸರ್ಕಾರ ಹೇಳಿದೆ.

CET Ranking: ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ ರ್ಯಾಂಕಿಂಗ್​ ಪ್ರಕಟ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: ವಿವೇಕ ಬಿರಾದಾರ|

Updated on:Sep 23, 2022 | 9:57 PM

Share

ಬೆಂಗಳೂರು: ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ (CET) ರ್ಯಾಂಕಿಂಗ್​ ಪ್ರಕಟ ವಾಗಲಿದ್ದು, ಅಕ್ಟೋಬರ್ 3ರಿಂದ ಕೌನ್ಸೆಲಿಂಗ್​ ಪ್ರಕ್ರಿಯೆ ಆರಂಭವಾಗಲಿವೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಸಿಇಟಿ ರ್ಯಾಂಕಿಂಗ್​ ಬಿಕ್ಕಟ್ಟು ಹಿನ್ನೆಲೆ

ಪುನಾರಾವರ್ತಿತರ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆ ಉದ್ಭವಿಸಿತ್ತು.  ಈ ಕುರಿತು ಸಿಇಟಿ ರ್ಯಾಂಕಿಗ್​ನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣಿಸಲ್ಲವೆಂದು ಜುಲೈ 30ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ರಿಟ್  ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು  ಪರಿಗಣಿಸುವಂತೆ ಆದೇಶ ನೀಡಿತ್ತು.

ಹೈಕೋರ್ಟ್​ 2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದ, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್​ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್​ ಆದೇಶ ನೀಡಿತ್ತು.

ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್​ ಮೇಲ್ಮನವಿ ಸಲ್ಲಿಸಲು ಮುಂದಾಗಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಶಿಕ್ಷಣ ಇಲಾಖೆ ನೀಡಿದ ಪಿಯು ಬೋರ್ಡ್ ಅಂಕಪಟ್ಟಿಯನ್ನೇ ಪರಿಗಣಿಸೊಲ್ಲ ಅಂದರೆ ಹೇಗೆ? ಒಂದು ವರ್ಷ ಮಕ್ಕಳಿಗೆ ಪ್ಲೇಸ್ಮೆಂಟ್ ಇಲ್ಲದಂತಾಗುತ್ತೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನೇರ ಹೊಣೆಯಾಗುತ್ತೆ ಎಂದು  ಎಚ್ಚರಿಕೆ ನೀಡಿದರು.

ಒಂದು ವರ್ಷ ಮಕ್ಕಳ ಭವಿಷ್ಯ ಹಾಳಾಗುತ್ತೆ. ಕೋರ್ಟ್ ಆದೇಶವನ್ನ ಪಾಲಿಸದೆ ಮೇಲ್ಮನವಿ ಸಲ್ಲಿಸಿದರೆ ಕೋರ್ಟ್ ಆದೇಶಕ್ಕೂ ಬೆಲೆ ಇಲ್ವಾ ? ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ.  ನಾವೂ ಕಾನೂನಾತ್ಮಕವಾಗಿ ಹೋರಾಟಕ್ಕೆ ಮುಂದಾಗುತ್ತೇವೆ. ಯಾವ ಮಕ್ಕಳಿಗೂ ಅನ್ಯಾಯವಾಗದಂತೆ ಸಮಿತಿ ರಚಿಸಿ   ಎಂದು ಆಗ್ರಹಿಸಿದ್ದರು.

ಈ ಸಂಬಂಧ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿತ್ತು.  ಸಮಿತಿ ವರದಿಯನ್ನು ಸಿದ್ದಪಡಿಸಿತ್ತು. ವರದಿಯನ್ನು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್​ ಜನರಲ್ ಧ್ಯಾನ್​ ಚಿನ್ನಪ್ಪ  ಮುಚ್ಚಿದ ಲಗೋಟೆಯಲ್ಲಿ ಇಂದು ಹೈಕೋರ್ಟ್​ಗೆ  ವರದಿಯನ್ನು ನೀಡಿದರು.

ರಾಜ್ಯದ ಮತ್ತಷ್ಟು  ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Fri, 23 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ