AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ

ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಖಾಸಗಿ ಶಾಲೆಗಳನ್ನು ಬಂದ್​ ಮಾಡಲು ನಿರ್ಧರಿಸಿವೆ. ಹೀಗಾಗಿ ಸರ್ಕಾರಕ್ಕೆ ರುಪ್ಸಾ 15 ದಿನಗಳ ಕಾಲ ಡೆಡ್ ಲೈನ್​ ನೀಡಿದ್ದು, ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ ನೀಡಲಾಗಿದೆ.

ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ
ಸರ್ಕಾರಕ್ಕೆ ರುಪ್ಸಾ ಡೆಡ್ ಲೈನ್: ಆಗಸ್ಟ್ 21ರ ನಂತರ ಖಾಸಗಿ ಶಾಲೆ ಬಂದ್ ಎಚ್ಚರಿಕೆ
Vinay Kashappanavar
| Edited By: |

Updated on:Aug 05, 2024 | 4:41 PM

Share

ಬೆಂಗಳೂರು, ಆಗಸ್ಟ್​​ 05: ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ (RUPSA) ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನ ಬಂದ್ (bandh) ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಇಂದು ರುಪ್ಸಾ (ಖಾಸಗಿ ಶಾಲೆಗಳ ಒಕ್ಕೂಟ) ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆಗೆ ಮುಂದಿನ ಹದಿನೈದು ದಿನ ಡೆಡ್​ಲೈನ್​ ನೀಡಲಾಗಿದೆ.

ಆಗಸ್ಟ್ 21 ರವರೆಗೆ ಗಡುವು ಎಂದ ಹಾಲನೂರು ಲೇಪಾಕ್ಷಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಾಲನೂರು ಲೇಪಾಕ್ಷಿ, 15 ದಿನದಲ್ಲಿ ಇಲಾಖೆ ನಡೆಸುತ್ತಿರುವ ಕ್ರಮಗಳಿಂದ ಹಿಂದೆ ಸರಿಯಬೇಕು. ಶಾಲೆಗಳ ನವೀಕರಣಕ್ಕೆ ಇಲಾಖೆಯ 64 ಅಂಶಗಳನ್ನ ನಿಗದಿಪಡಿಸಿ ದಾಖಲೆ ಪಡೆಯುತ್ತಿದೆ. ಇದರಿಂದ ಶಾಲೆಗಳ ನವೀಕರಣ ಪಡೆಯುವುದು ಕಷ್ಟವಾಗಿದೆ. ಶಾಲಾ ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ತೆರಿಗೆ ಬಾಕಿ ವಸೂಲಿ ಕೈ ಬಿಡಬೇಕು. ಈ ವಿಚಾರಗಳ ಬಗ್ಗೆ ಹದಿನೈದು ದಿನ ಅಂದರೆ ಆಗಸ್ಟ್ 21 ರವರೆಗೆ ಗಡುವು ನೀಡದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶುಲ್ಕ ವಿವರ ಘೋಷಿಸದೆ ಖಾಸಗಿ ಶಾಲೆಗಳ ಉದ್ಧಟತನ: ಶಿಕ್ಷಣ ಇಲಾಖೆಯ ಆದೇಶಕ್ಕೂ ಡೋಂಟ್ ಕೇರ್

ರುಪ್ಸಾ ಸೇರಿದ್ದಂತೆ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ಸರ್ಕಾರ ಸಭೆ ಮಾಡಬೇಕು. ಇಲಾಖೆಯಿಂದ ಆಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಸರ್ಕಾರ ಇದಕ್ಕೆಲ್ಲ ಕಡಿವಾಣ ಹಾಕದೆಯಿದ್ದರೆ ಶಾಲೆ ಬಂದ್ ಮಾಡಿ ಬೆಂಗಳೂರು ಚಲೋ ಮಾಡುತ್ತೇವೆ ಅಂತಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 10, 12ನೇ ತರಗತಿಯಲ್ಲಿ ಫೇಲಾದ್ರೂ ಮತ್ತೆ ಶಾಲೆಗೆ ಹೋಗಬಹುದು: ಮಧು ಬಂಗಾರಪ್ಪ

ಕಳೆದ ನಾಲ್ಕು ವರ್ಷಗಳಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಕಾನೂನು ಬಾಹಿರವಾಗಿ ಟ್ಯಾಕ್ಸ್ ವಸೂಲಿ ಮಾಡುತ್ತಿದೆ. ಆರ್​ಆರ್​ ವಿಚಾರದಲ್ಲಿ ಅಧಿಕಾರಿಗಳ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಡೆಸುತ್ತಿರುವ ಸುಲಿಗೆ ಸೇರಿದ್ದಂತೆ ಅನೇಕ ವಿಷಯಗಳಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಈ ಪ್ರತಿಭಟನೆಗೆ ಸಾಥ್ ನೀಡಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:31 pm, Mon, 5 August 24

Follow Us
Vinay Kashappanavar
Vinay Kashappanavar
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್