AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್, ಚೀನಾ MBBS ವಿದ್ಯಾರ್ಥಿಗಳಿಗೆ 2 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಒಂದು ಬಾರಿ ಕ್ರಮವಾಗಿ ಕೇವಲ ಒಂದು ಪ್ರಯತ್ನಕ್ಕೆ ಅವಕಾಶ ನೀಡುವ ಕೇಂದ್ರದ ಸಲಹೆಯನ್ನು ಮಾರ್ಪಡಿಸಿದೆ.

ಉಕ್ರೇನ್, ಚೀನಾ MBBS ವಿದ್ಯಾರ್ಥಿಗಳಿಗೆ 2 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್
SC allows Ukraine, China returned MBBS students to clear exam in 2 attempts
ನಯನಾ ಎಸ್​ಪಿ
|

Updated on: Mar 29, 2023 | 12:19 PM

Share

ಒಂದೆಡೆ ಕೋವಿಡ್ (COVID 19) ಜಗತ್ತನ್ನೇ ತಲೆಕೆಳಗೆ ಮಾಡಿದರೆ ಮತ್ತೊಂದೆಡೆ ರಷ್ಯಾ-ಉಕ್ರೇನ್ ಯುದ್ದದಿಂದ (Russia-Ukraine war) ಹಲವರು ಸಂಕಷ್ಟದಲ್ಲಿದ್ದರು. ಯುದ್ಧ ಪೀಡಿತ ಉಕ್ರೇನ್ ಪ್ರದೇಶದಿಂದ ಎಲ್ಲ ಭಾರತದ ವಿದ್ಯಾರ್ಥಿಗಳು ವಾಪಸ್ಸಾದರು. ಈ ವಿದ್ಯಾರ್ಥಿಗಳು ತನ್ನ ಮುಂದಿನ ಭವಿಷ್ಯದ ಕುರಿತು ಬಹಳಷ್ಟು ಗೊಂದಲದಲ್ಲಿದ್ದರು. ಇದೀಗ ಇಂತಹ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಸಂತೋಷದ ಸುದ್ದಿಯನ್ನು ನೀಡಿದೆ. ಚೀನಾ, ಉಕ್ರೇನ್ ಮತ್ತು ಫಿಲಿಫೈನ್ಸ್ ವೈದ್ಯಕೀಯ ವಿದ್ಯಾರ್ಥಿಗಳು (Medical Students) ಈಗ ಭಾರತದಲ್ಲಿ ಎರಡು ಬಾರಿ ಪರೀಕ್ಷೆ ಬರೆಯಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

COVID-19 ಸಾಂಕ್ರಾಮಿಕ ಮತ್ತು ಯುದ್ಧದ ಕಾರಣದಿಂದಾಗಿ ಉಕ್ರೇನ್, ಚೀನಾ ಮತ್ತು ಫಿಲಿಪೈನ್ಸ್‌ನಿಂದ ಹಿಂದಿರುಗಿದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಸ್ತಿತ್ವದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಪಠ್ಯಕ್ರಮಕ್ಕೆ ಅನುಗುಣವಾಗಿ ಎರಡು ಪ್ರಯತ್ನಗಳಲ್ಲಿ ಎಂಬಿಬಿಎಸ್ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 28) ಅನುಮತಿ ನೀಡಿದೆ. ಭಾರತದ ಯಾವುದೇ ವೈದ್ಯಕೀಯ ಕಾಲೇಜಿಗೆ ದಾಖಲಾಗದೆಯೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠ ಕೇವಲ ಒಂದು ಪ್ರಯತ್ನಕ್ಕೆ ಅವಕಾಶ ನೀಡುವ ಕೇಂದ್ರದ ಸಲಹೆಯನ್ನು ಮಾರ್ಪಡಿಸಿತು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿದೆ.

ಇದನ್ನೂ ಓದಿ: NEET PG 2023 ಟಾಪರ್ ಮೂರು ಹಂತದ ತಯಾರಿ ತಂತ್ರವನ್ನು ಹಂಚಿಕೊಂಡಿದ್ದಾರೆ

ಒಂದು ಬಾರಿಯ ಅಸಾಧಾರಣ ಕ್ರಮವಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಅಂತಿಮ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂದು ಕೇಂದ್ರವು ತಜ್ಞರ ಸಮಿತಿಯ ವರದಿಯನ್ನು ಸಲ್ಲಿಸಿದೆ. ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಸರ್ಕಾರವು ಈ ವಿಷಯದ ಬಗ್ಗೆ ಸಮಿತಿಯನ್ನು ರಚಿಸಿದೆ ಎಂದು ಹೇಳಿದರು.

ಕೋವಿಡ್ ಮತ್ತು ಉಕ್ರೇನ್ ಯುದ್ಧದ ಕಾರಣ ವ್ಯಾಸಂಗ ಮುಂದುವರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರ ಒಮ್ಮೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಹೇಳಿತ್ತು. ಆದರೆ ನ್ಯಾಯಪೀಠ ಇದನ್ನು ಎರಡು ಪ್ರಯತ್ನಕ್ಕೆ ಹೆಚ್ಚಿಸಿದೆ.