AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗಿಲ್ಲ. ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಕಂಪನಿ ಮೀನಾಮೇಷ ಎಣಿಸುತ್ತಿದೆ.

ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on:Oct 18, 2024 | 6:28 PM

Share

ಬೆಂಗಳೂರು, ಅಕ್ಟೋಬರ್​ 18: ಸದಾ ಒಂದಿಲ್ಲೊಂದು ಸಮಸ್ಯೆಯಿಂದ ಸದ್ದು ಮಾಡುತ್ತಿರುವ ಬಿಬಿಎಂಪಿ, ಇದೀಗ ಬಿಬಿಎಂಪಿಯ (BBMP) ಶಾಲಾ ಮಕ್ಕಳಿಗೆ ಕೊಡುವ ಶೂ ನಲ್ಲೂ ನಿರ್ಲಕ್ಷ್ಯ ವಹಿಸಿದ್ದು ಕಂಡುಬಂದಿದೆ. ಸದ್ಯ ಶಾಲೆಗಳು ಆರಂಭವಾಗಿ ಐದಾರು ತಿಂಗಳು ಕಳೆದರೂ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಸಿಗದಂತಾಗಿದೆ. ಅತ್ತ ಶೂ ಕೊಡುವುದಕ್ಕೂ ವಿಳಂಬ ಮಾಡುತ್ತಿರುವ ಕಂಪನಿಗೆ ಪಾಲಿಕೆಯ ವಿಶೇಷ ಆಯುಕ್ತರು ನೋಟಿಸ್ ನೀಡಿದ್ದು ದಂಡ ಹಾಕುವ ಎಚ್ಚರಿಕೆ ಕೊಟ್ಟಿದ್ದಾರೆ. ಇತ್ತ ಪಾಲಿಕೆ ಆಯುಕ್ತರು ಪ್ರತಿವರ್ಷ ಇದು ಕಾಮನ್​ ಅಂತಾ ಬೇಜವಾಬ್ದಾರಿಯ ಉತ್ತರ ನೀಡಿ ಸೈಲೆಂಟ್ ಆಗಿದ್ದಾರೆ.

ಬಿಬಿಎಂಪಿ ಶಾಲೆಗಳ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗದ ಹಿನ್ನಲೆ ಶಾಲಾ ಮಕ್ಕಳು ಚಪ್ಪಲಿ, ಹಳೇ ಶೂಗಳನ್ನೇ ಹಾಕೊಂಡು ಶಾಲೆಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಜೂನ್​ನಲ್ಲೇ ಶೂ ತಯಾರಿಕೆ ಕಂಪನಿಗೆ ಸರಬರಾಜು ಆದೇಶ ಕೊಡಲಾಗಿತ್ತು, ಅಲ್ಲದೇ ಅಕ್ಟೋಬರ್ 4ನೇ ತಾರೀಕಿನ ಒಳಗೆ ಶೂ ಪೂರೈಸಬೇಕಿದ್ದ ಸುದರ್ಶನ್ ಆಂಡ್ ಕೋ ಕಂಪನಿ ಇದೀಗ ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಮೀನಾಮೇಷ ಎಣಿಸುತ್ತಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಅಕ್ಟೋಬರ್ 4ಕ್ಕೆ ಶೂ ಪೂರೈಸಬೇಕಿದ್ದ ಕಂಪನಿ ಇದೀಗ ಇನ್ನೂ ಕೂಡ ಶೂ ಪೂರೈಕೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಶೂ ಇಲ್ಲದೇ ಪರದಾಡುವಂತಾಗಿದೆ. ಸದ್ಯ ಈ ಬಗ್ಗೆ ಪಾಲಿಕೆಯ ವಿಶೇಷ ಆಯುಕ್ತರು ಶೂ ಪೂರೈಸಬೇಕಿದ್ದ ಕಂಪನಿಗೆ ನೋಟಿಸ್ ನೀಡಿದ್ದು, ಸೂಕ್ತ ಕಾರಣ ಕೊಡುವ ಜೊತೆಗೆ ತಡವಾದ ದಿನಗಳಿಗೆ ಆದೇಶದಲ್ಲಿರುವ ಹಣದ 2% ರಷ್ಟು ದಂಡ ವಿಧಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಒಂದೆಡೆ ಬಿಬಿಎಂಪಿಯ ವಿಶೇಷ ಆಯುಕ್ತರು ಕಂಪನಿಗೆ ನೋಟಿಸ್ ನೀಡಿದರೆ ಇತ್ತ ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್, ಪರೋಕ್ಷವಾಗಿ ಕಂಪನಿ ಪರವಾಗಿ ಬ್ಯಾಟ್ ಬೀಸಿದ್ದಾರೆ. ಕಳೆದ ವರ್ಷ ಕೂಡ ಶೂ, ಸಾಕ್ಸ್ ಕೊಡೋದು ತಡವಾಗಿತ್ತು. ಲಿಡ್ ಕರ್ ಪೂರೈಕೆ ಮಾಡಲ್ಲ ಅಂದಿದ್ದಕ್ಕೆ ಖಾಸಗಿ ಕಂಪನಿಗೆ ನೀಡಿದ್ದೇವೆ. ಇನ್ನೂ ವರ್ಷ ಮುಗಿದಿಲ್ಲ ನೋಡೋಣ ಅಂತಾ ಜಾರಿಕೊಂಡಿದ್ದಾರೆ.

ಇದನ್ನೂ ಓದಿ: ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಪಾಲಿಕೆ ಹಾಗೂ ಕಂಪನಿ ನಡುವಿನ ಸಮನ್ವಯತೆ ಕೊರತೆ ಹಾಗೂ ವಿಳಂಬನೀತಿಯಿಂದ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಸಿಗದಂತಾಗಿದೆ. ಸದ್ಯ ಪಾಲಿಕೆ ನೋಟಿಸ್ ಪಡೆದಿರುವ ಕಂಪನಿ ಈಗಲಾದರೂ ಶೀಘ್ರವಾಗಿ ಶೂ, ಸಾಕ್ಸ್ ಪೂರೈಸುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Fri, 18 October 24

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ