AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗಿಲ್ಲ. ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಕಂಪನಿ ಮೀನಾಮೇಷ ಎಣಿಸುತ್ತಿದೆ.

ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on:Oct 18, 2024 | 6:28 PM

Share

ಬೆಂಗಳೂರು, ಅಕ್ಟೋಬರ್​ 18: ಸದಾ ಒಂದಿಲ್ಲೊಂದು ಸಮಸ್ಯೆಯಿಂದ ಸದ್ದು ಮಾಡುತ್ತಿರುವ ಬಿಬಿಎಂಪಿ, ಇದೀಗ ಬಿಬಿಎಂಪಿಯ (BBMP) ಶಾಲಾ ಮಕ್ಕಳಿಗೆ ಕೊಡುವ ಶೂ ನಲ್ಲೂ ನಿರ್ಲಕ್ಷ್ಯ ವಹಿಸಿದ್ದು ಕಂಡುಬಂದಿದೆ. ಸದ್ಯ ಶಾಲೆಗಳು ಆರಂಭವಾಗಿ ಐದಾರು ತಿಂಗಳು ಕಳೆದರೂ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಸಿಗದಂತಾಗಿದೆ. ಅತ್ತ ಶೂ ಕೊಡುವುದಕ್ಕೂ ವಿಳಂಬ ಮಾಡುತ್ತಿರುವ ಕಂಪನಿಗೆ ಪಾಲಿಕೆಯ ವಿಶೇಷ ಆಯುಕ್ತರು ನೋಟಿಸ್ ನೀಡಿದ್ದು ದಂಡ ಹಾಕುವ ಎಚ್ಚರಿಕೆ ಕೊಟ್ಟಿದ್ದಾರೆ. ಇತ್ತ ಪಾಲಿಕೆ ಆಯುಕ್ತರು ಪ್ರತಿವರ್ಷ ಇದು ಕಾಮನ್​ ಅಂತಾ ಬೇಜವಾಬ್ದಾರಿಯ ಉತ್ತರ ನೀಡಿ ಸೈಲೆಂಟ್ ಆಗಿದ್ದಾರೆ.

ಬಿಬಿಎಂಪಿ ಶಾಲೆಗಳ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗದ ಹಿನ್ನಲೆ ಶಾಲಾ ಮಕ್ಕಳು ಚಪ್ಪಲಿ, ಹಳೇ ಶೂಗಳನ್ನೇ ಹಾಕೊಂಡು ಶಾಲೆಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಜೂನ್​ನಲ್ಲೇ ಶೂ ತಯಾರಿಕೆ ಕಂಪನಿಗೆ ಸರಬರಾಜು ಆದೇಶ ಕೊಡಲಾಗಿತ್ತು, ಅಲ್ಲದೇ ಅಕ್ಟೋಬರ್ 4ನೇ ತಾರೀಕಿನ ಒಳಗೆ ಶೂ ಪೂರೈಸಬೇಕಿದ್ದ ಸುದರ್ಶನ್ ಆಂಡ್ ಕೋ ಕಂಪನಿ ಇದೀಗ ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಮೀನಾಮೇಷ ಎಣಿಸುತ್ತಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಅಕ್ಟೋಬರ್ 4ಕ್ಕೆ ಶೂ ಪೂರೈಸಬೇಕಿದ್ದ ಕಂಪನಿ ಇದೀಗ ಇನ್ನೂ ಕೂಡ ಶೂ ಪೂರೈಕೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಶೂ ಇಲ್ಲದೇ ಪರದಾಡುವಂತಾಗಿದೆ. ಸದ್ಯ ಈ ಬಗ್ಗೆ ಪಾಲಿಕೆಯ ವಿಶೇಷ ಆಯುಕ್ತರು ಶೂ ಪೂರೈಸಬೇಕಿದ್ದ ಕಂಪನಿಗೆ ನೋಟಿಸ್ ನೀಡಿದ್ದು, ಸೂಕ್ತ ಕಾರಣ ಕೊಡುವ ಜೊತೆಗೆ ತಡವಾದ ದಿನಗಳಿಗೆ ಆದೇಶದಲ್ಲಿರುವ ಹಣದ 2% ರಷ್ಟು ದಂಡ ವಿಧಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಒಂದೆಡೆ ಬಿಬಿಎಂಪಿಯ ವಿಶೇಷ ಆಯುಕ್ತರು ಕಂಪನಿಗೆ ನೋಟಿಸ್ ನೀಡಿದರೆ ಇತ್ತ ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್, ಪರೋಕ್ಷವಾಗಿ ಕಂಪನಿ ಪರವಾಗಿ ಬ್ಯಾಟ್ ಬೀಸಿದ್ದಾರೆ. ಕಳೆದ ವರ್ಷ ಕೂಡ ಶೂ, ಸಾಕ್ಸ್ ಕೊಡೋದು ತಡವಾಗಿತ್ತು. ಲಿಡ್ ಕರ್ ಪೂರೈಕೆ ಮಾಡಲ್ಲ ಅಂದಿದ್ದಕ್ಕೆ ಖಾಸಗಿ ಕಂಪನಿಗೆ ನೀಡಿದ್ದೇವೆ. ಇನ್ನೂ ವರ್ಷ ಮುಗಿದಿಲ್ಲ ನೋಡೋಣ ಅಂತಾ ಜಾರಿಕೊಂಡಿದ್ದಾರೆ.

ಇದನ್ನೂ ಓದಿ: ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಪಾಲಿಕೆ ಹಾಗೂ ಕಂಪನಿ ನಡುವಿನ ಸಮನ್ವಯತೆ ಕೊರತೆ ಹಾಗೂ ವಿಳಂಬನೀತಿಯಿಂದ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಸಿಗದಂತಾಗಿದೆ. ಸದ್ಯ ಪಾಲಿಕೆ ನೋಟಿಸ್ ಪಡೆದಿರುವ ಕಂಪನಿ ಈಗಲಾದರೂ ಶೀಘ್ರವಾಗಿ ಶೂ, ಸಾಕ್ಸ್ ಪೂರೈಸುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Fri, 18 October 24

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​