ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗಿಲ್ಲ. ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಕಂಪನಿ ಮೀನಾಮೇಷ ಎಣಿಸುತ್ತಿದೆ.

ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2024 | 6:28 PM

ಬೆಂಗಳೂರು, ಅಕ್ಟೋಬರ್​ 18: ಸದಾ ಒಂದಿಲ್ಲೊಂದು ಸಮಸ್ಯೆಯಿಂದ ಸದ್ದು ಮಾಡುತ್ತಿರುವ ಬಿಬಿಎಂಪಿ, ಇದೀಗ ಬಿಬಿಎಂಪಿಯ (BBMP) ಶಾಲಾ ಮಕ್ಕಳಿಗೆ ಕೊಡುವ ಶೂ ನಲ್ಲೂ ನಿರ್ಲಕ್ಷ್ಯ ವಹಿಸಿದ್ದು ಕಂಡುಬಂದಿದೆ. ಸದ್ಯ ಶಾಲೆಗಳು ಆರಂಭವಾಗಿ ಐದಾರು ತಿಂಗಳು ಕಳೆದರೂ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಸಿಗದಂತಾಗಿದೆ. ಅತ್ತ ಶೂ ಕೊಡುವುದಕ್ಕೂ ವಿಳಂಬ ಮಾಡುತ್ತಿರುವ ಕಂಪನಿಗೆ ಪಾಲಿಕೆಯ ವಿಶೇಷ ಆಯುಕ್ತರು ನೋಟಿಸ್ ನೀಡಿದ್ದು ದಂಡ ಹಾಕುವ ಎಚ್ಚರಿಕೆ ಕೊಟ್ಟಿದ್ದಾರೆ. ಇತ್ತ ಪಾಲಿಕೆ ಆಯುಕ್ತರು ಪ್ರತಿವರ್ಷ ಇದು ಕಾಮನ್​ ಅಂತಾ ಬೇಜವಾಬ್ದಾರಿಯ ಉತ್ತರ ನೀಡಿ ಸೈಲೆಂಟ್ ಆಗಿದ್ದಾರೆ.

ಬಿಬಿಎಂಪಿ ಶಾಲೆಗಳ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ

ರಾಜ್ಯ ರಾಜಧಾನಿಯ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೂ ಶೂ ಭಾಗ್ಯ ಸಿಗದಂತಾಗಿದೆ. ಬೆಂಗಳೂರಿನ ಬಿಬಿಎಂಪಿಯ ಶಾಲೆಗಳಲ್ಲಿ ಓದುತ್ತಿರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಶೂ ಹಂಚಿಕೆಯಾಗದ ಹಿನ್ನಲೆ ಶಾಲಾ ಮಕ್ಕಳು ಚಪ್ಪಲಿ, ಹಳೇ ಶೂಗಳನ್ನೇ ಹಾಕೊಂಡು ಶಾಲೆಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಜೂನ್​ನಲ್ಲೇ ಶೂ ತಯಾರಿಕೆ ಕಂಪನಿಗೆ ಸರಬರಾಜು ಆದೇಶ ಕೊಡಲಾಗಿತ್ತು, ಅಲ್ಲದೇ ಅಕ್ಟೋಬರ್ 4ನೇ ತಾರೀಕಿನ ಒಳಗೆ ಶೂ ಪೂರೈಸಬೇಕಿದ್ದ ಸುದರ್ಶನ್ ಆಂಡ್ ಕೋ ಕಂಪನಿ ಇದೀಗ ಡೆಡ್ ಲೈನ್ ಮುಗಿದರೂ ಶೂ ಪೂರೈಸದೇ ಮೀನಾಮೇಷ ಎಣಿಸುತ್ತಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಅಕ್ಟೋಬರ್ 4ಕ್ಕೆ ಶೂ ಪೂರೈಸಬೇಕಿದ್ದ ಕಂಪನಿ ಇದೀಗ ಇನ್ನೂ ಕೂಡ ಶೂ ಪೂರೈಕೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಶೂ ಇಲ್ಲದೇ ಪರದಾಡುವಂತಾಗಿದೆ. ಸದ್ಯ ಈ ಬಗ್ಗೆ ಪಾಲಿಕೆಯ ವಿಶೇಷ ಆಯುಕ್ತರು ಶೂ ಪೂರೈಸಬೇಕಿದ್ದ ಕಂಪನಿಗೆ ನೋಟಿಸ್ ನೀಡಿದ್ದು, ಸೂಕ್ತ ಕಾರಣ ಕೊಡುವ ಜೊತೆಗೆ ತಡವಾದ ದಿನಗಳಿಗೆ ಆದೇಶದಲ್ಲಿರುವ ಹಣದ 2% ರಷ್ಟು ದಂಡ ವಿಧಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಒಂದೆಡೆ ಬಿಬಿಎಂಪಿಯ ವಿಶೇಷ ಆಯುಕ್ತರು ಕಂಪನಿಗೆ ನೋಟಿಸ್ ನೀಡಿದರೆ ಇತ್ತ ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್, ಪರೋಕ್ಷವಾಗಿ ಕಂಪನಿ ಪರವಾಗಿ ಬ್ಯಾಟ್ ಬೀಸಿದ್ದಾರೆ. ಕಳೆದ ವರ್ಷ ಕೂಡ ಶೂ, ಸಾಕ್ಸ್ ಕೊಡೋದು ತಡವಾಗಿತ್ತು. ಲಿಡ್ ಕರ್ ಪೂರೈಕೆ ಮಾಡಲ್ಲ ಅಂದಿದ್ದಕ್ಕೆ ಖಾಸಗಿ ಕಂಪನಿಗೆ ನೀಡಿದ್ದೇವೆ. ಇನ್ನೂ ವರ್ಷ ಮುಗಿದಿಲ್ಲ ನೋಡೋಣ ಅಂತಾ ಜಾರಿಕೊಂಡಿದ್ದಾರೆ.

ಇದನ್ನೂ ಓದಿ: ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅ.16ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಪಾಲಿಕೆ ಹಾಗೂ ಕಂಪನಿ ನಡುವಿನ ಸಮನ್ವಯತೆ ಕೊರತೆ ಹಾಗೂ ವಿಳಂಬನೀತಿಯಿಂದ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೂ ಸಿಗದಂತಾಗಿದೆ. ಸದ್ಯ ಪಾಲಿಕೆ ನೋಟಿಸ್ ಪಡೆದಿರುವ ಕಂಪನಿ ಈಗಲಾದರೂ ಶೀಘ್ರವಾಗಿ ಶೂ, ಸಾಕ್ಸ್ ಪೂರೈಸುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Fri, 18 October 24

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ