AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Time Table 2024: ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ವೇಳಾ ಪಟ್ಟಿ ಪ್ರಕಟ

Karnataka 2nd PUC Exam Time Table 2024: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ.

Karnataka 2nd PUC Time Table 2024: ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ವೇಳಾ ಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
| Edited By: |

Updated on:Feb 14, 2024 | 2:59 PM

Share

ಬೆಂಗಳೂರು, ಜನವರಿ 17: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ್ಟಿಸಿತ್ತು, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ, ದಿನಾಂಕ ಹೀಗಿದೆ 

  • 01-03-2024: ಕನ್ನಡ ಹಾಗೂ ಅರೇಬಿಕ್
  • 04-03-2024: ಗಣಿತ
  • 05-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
  • 06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
  • 07-03-2024: ಇತಿಹಾಸ ಹಾಗೂ ಭೌತಶಾಸ್ತ್ರ
  • 09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
  • 11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 13-03-2024: ಇಂಗ್ಲಿಷ್
  • 15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
  • 16-03-2024: ಅರ್ಥಶಾಸ್ತ್ರ
  • 18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
  • 20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 22-03-2024: ಹಿಂದಿ

ನೀವೀಗ ಅಭ್ಯಾಸ ಆರಂಭಿಸಲೇ ಬೇಕು

ಪರೀಕ್ಷೆ ದಿನಕ್ಕೆ ಯಾವುದೆಲ್ಲಾ ತಯಾರಿ ಬೇಕು ಅದನ್ನು ಇಂದಿನಿಂದಲೇ ಆರಂಭಿಸಿ. ಉತ್ತಮ ಅಂಕಗಳಿಸಿ. ಮುಖ್ಯವಾಗಿ ಪರೀಕ್ಷೆ ಬಂತೆಂದು ಭಯಪಡಬೇಡಿ. ರಾಜ್ಯದಲ್ಲಿ 2024ರ PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದ್ದು, ನೀವೀಗ ಅಭ್ಯಾಸ ಆರಂಭಿಸಲೇ ಬೇಕು. ಅದಕ್ಕಾಗಿ ನೀವು ಕೆಲವೊಂದು ಟಿಪ್ಸ್​ ಪಾಲೋ ಮಾಡಿದರೆ ಹೆಚ್ಚಿನ ಅಂಕ ಬರುವುದು ಗ್ಯಾರಂಟಿ. ಎಲ್ಲಕ್ಕಿಂತ ಮುಖ್ಯವಾಗಿ ನೀವು ಹೆದರದೆ ಈಗಿನಿಂದಲೇ ದಿನಕ್ಕೊಂದು ವಿಷಯದಂತೆ ಓದುತ್ತಾ ಹೋದರೆ ಸಾಕು. 80ಕ್ಕಿಂತ ಹೆಚ್ಚಿನ ಅಂಕ ಗಳಿಸಬಹುದು ಇದು ನಿಖರ

ಇಲ್ಲಿ ನೀಡಿರುವ ದಿನಾಂಕದ ಪ್ರಕಾರ ಪರೀಕ್ಷೆ ನಡೆಯಲಿದೆ

ಮೇಲೆ ಕ್ರಮವಾಗಿ ಪರೀಕ್ಷಾ ದಿನಾಂಕಗಳನ್ನು ನೀಡಲಾಗಿದೆ. ಇಲ್ಲಿ ನೀಡಿರುವ ದಿನಾಂಕದ ಪ್ರಕಾರ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಸಿದ್ಧತೆ ನಡೆಸಬೇಕು. ವೇಳಾಪಟ್ಟಿಗೆ ಅನುಗುಣವಾಗಿ ಸಿದ್ಧತೆ ನಡೆಸುತ್ತಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನವದ ಅತಿ ಮುಖ್ಯ ಘಟ್ಟ ಇದರ ನಂತರ ತಾವೂ ಯಾವ ಕ್ಷೇತ್ರವನ್ನು ಆಯ್ಕೆ ಮಾಡಬೇಕು ಎಂಬ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ.

ಶೈಕ್ಷಣಿಕ ವರ್ಷದ ಆರಂಭದಿಂದಲೇ ಅಭ್ಯಾಸ ಮಾಡಿ

ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಪ್ರಾರಂಭಿಸಬೇಕು. ತರಗತಿಯ ವಿಷಯಗಳೊಂದಿಗೆ ಏಕಕಾಲದಲ್ಲಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಹಾಯವಾಗುತ್ತದೆ.

ಓದಿದ ವಿಷಯವನ್ನು ಇನ್ನೊಮ್ಮೆ ಓದಿ ಅಭ್ಯಾಸ ಮಾಡಲು ಸಾಕಷ್ಟು ಸಮಯವನ್ನು ಹೊಂದಿರುವುದು ಮತ್ತು ಇತರೆ ವಿಷಯಗಳಲ್ಲಿನ ಸಂಶಯಗಳನ್ನು ಉಪನ್ಯಾಸಕರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಲು ನೆರವಾಗುತ್ತದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Wed, 17 January 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು