AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಕರ್ನಾಟಕ ಶಿಕ್ಷಣ ಇಲಾಖೆ!

2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಪೂರಕ ಪರೀಕ್ಷೆಯನ್ನು (Supplementary Exams) ನಡೆಸುವುದಾಗಿ ಮಂಡಳಿಯು ಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಕರ್ನಾಟಕ ಶಿಕ್ಷಣ ಇಲಾಖೆ!
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
ನಯನಾ ಎಸ್​ಪಿ| Edited By: |

Updated on:Jul 28, 2023 | 12:16 PM

Share

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ (Karnataka School Examination and Assessment Board) ಇತ್ತೀಚಿನ ನಿರ್ಧಾರವು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂತೋಷಕ್ಕೆ ಕಾರಣವಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು (Supplementary Exams) ನಡೆಸುವುದಾಗಿ ಮಂಡಳಿಯು ಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.

ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ ಪಿಯು ಮಂಡಳಿಯ ನಿರ್ಧಾರವು ಈಗಾಗಗಲೇ ಪೂರಕ ಪರೀಕ್ಷೆಯನ್ನು ಬರೆದ ಮತ್ತು ಹಿಂದಿನ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ  ಯಶಸ್ವಿಯಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಅವಕಾಶವು ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಮತ್ತು ಅವರ ಅಂಕಗಳನ್ನು ಹೆಚ್ಚಿಸಲು ಅನುಕೂಲ ಮಾಡಿಕೊಡುತ್ತದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ

ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ. ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತೇರ್ಗಡೆಯಾಗಲು ಈ ಪೂರಕ ಪರೀಕ್ಷೆಯಲ್ಲಿ ಭಾಗವಹಿಸಬಹುದು.

ಈ ಹಿಂದೆ ಮೇ 23 ರಿಂದ ಜೂನ್ 2 ರವರೆಗೆ ನಡೆದ ಪೂರಕ ಪರೀಕ್ಷೆಗಳಲ್ಲಿ ಒಟ್ಟು 1,57,756 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ, 50,478 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ ಮತ್ತು  ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರೈಸುವ ಅವಕಾಶವನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಕಳೆದ ಪೂರಕ ಪರೀಕ್ಷೆಗಳಲ್ಲಿ ವಿಭಿನ್ನ ರೀತಿಯ ಸ್ಟ್ರೀಮ್‌ಗಳಲ್ಲಿ ವಿಭಿನ್ನ ಉತ್ತೀರ್ಣ ಶೇಕಡಾವಾರುಗಳನ್ನು ಫಲಿತಾಂಶಗಳನ್ನು ಪ್ರಕಟಿಸಿದೆ. ಕಲಾ ವಿಭಾಗದಲ್ಲಿ ಶೇ.32.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇ.38.60ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ಸ್ಟ್ರೀಮ್ 32.00% ರಷ್ಟು ತೇರ್ಗಡೆ ಹೊಂದಿದ್ದರು. ಎರಡನೇ ಸಲದ ಪೂರಕ ಪರೀಕ್ಷೆಯ ಘೋಷಣೆಯೊಂದಿಗೆ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಮತ್ತು ಶೈಕ್ಷಣಿಕವಾಗಿ  ಉತ್ತಮ ಸಾಧನೆ ಮಾಡಲು ಈ ಎರಡನೇ ಅವಕಾಶವನ್ನು ಬಳಸಿಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:02 pm, Fri, 28 July 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ