AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಕರ್ನಾಟಕ ಶಿಕ್ಷಣ ಇಲಾಖೆ!

2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಪೂರಕ ಪರೀಕ್ಷೆಯನ್ನು (Supplementary Exams) ನಡೆಸುವುದಾಗಿ ಮಂಡಳಿಯು ಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಕರ್ನಾಟಕ ಶಿಕ್ಷಣ ಇಲಾಖೆ!
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
| Edited By: |

Updated on:Jul 28, 2023 | 12:16 PM

Share

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ (Karnataka School Examination and Assessment Board) ಇತ್ತೀಚಿನ ನಿರ್ಧಾರವು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂತೋಷಕ್ಕೆ ಕಾರಣವಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು (Supplementary Exams) ನಡೆಸುವುದಾಗಿ ಮಂಡಳಿಯು ಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.

ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ ಪಿಯು ಮಂಡಳಿಯ ನಿರ್ಧಾರವು ಈಗಾಗಗಲೇ ಪೂರಕ ಪರೀಕ್ಷೆಯನ್ನು ಬರೆದ ಮತ್ತು ಹಿಂದಿನ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ  ಯಶಸ್ವಿಯಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಅವಕಾಶವು ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಮತ್ತು ಅವರ ಅಂಕಗಳನ್ನು ಹೆಚ್ಚಿಸಲು ಅನುಕೂಲ ಮಾಡಿಕೊಡುತ್ತದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ

ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ. ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತೇರ್ಗಡೆಯಾಗಲು ಈ ಪೂರಕ ಪರೀಕ್ಷೆಯಲ್ಲಿ ಭಾಗವಹಿಸಬಹುದು.

ಈ ಹಿಂದೆ ಮೇ 23 ರಿಂದ ಜೂನ್ 2 ರವರೆಗೆ ನಡೆದ ಪೂರಕ ಪರೀಕ್ಷೆಗಳಲ್ಲಿ ಒಟ್ಟು 1,57,756 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ, 50,478 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ ಮತ್ತು  ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರೈಸುವ ಅವಕಾಶವನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಕಳೆದ ಪೂರಕ ಪರೀಕ್ಷೆಗಳಲ್ಲಿ ವಿಭಿನ್ನ ರೀತಿಯ ಸ್ಟ್ರೀಮ್‌ಗಳಲ್ಲಿ ವಿಭಿನ್ನ ಉತ್ತೀರ್ಣ ಶೇಕಡಾವಾರುಗಳನ್ನು ಫಲಿತಾಂಶಗಳನ್ನು ಪ್ರಕಟಿಸಿದೆ. ಕಲಾ ವಿಭಾಗದಲ್ಲಿ ಶೇ.32.23ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇ.38.60ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ಸ್ಟ್ರೀಮ್ 32.00% ರಷ್ಟು ತೇರ್ಗಡೆ ಹೊಂದಿದ್ದರು. ಎರಡನೇ ಸಲದ ಪೂರಕ ಪರೀಕ್ಷೆಯ ಘೋಷಣೆಯೊಂದಿಗೆ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಮತ್ತು ಶೈಕ್ಷಣಿಕವಾಗಿ  ಉತ್ತಮ ಸಾಧನೆ ಮಾಡಲು ಈ ಎರಡನೇ ಅವಕಾಶವನ್ನು ಬಳಸಿಕೊಳ್ಳಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:02 pm, Fri, 28 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ