AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 3ರಂದು ಬೆಂಗಳೂರಿನಲ್ಲಿ 2023 ಎಜುಕೇಶನ್‌ಯುಎಸ್‌ಎ ವಿಶ್ವವಿದ್ಯಾಲಯ ಶಿಕ್ಷಣ ಮೇಳ

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಉನ್ನತ ಶಿಕ್ಷಣವನ್ನು ಮುಂದುವರೆಸುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುವರ್ಣಾವಕಾಶ ಕಾದಿದೆ. ಈ ಕುರಿತಾಗಿ ಅವಕಾಶಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಎಜುಕೇಶನ್‌ಯುಎಸ್‌ಎ ಶಿಕ್ಷಣ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಸೆ. 3ರಂದು ಬೆಂಗಳೂರಿನಲ್ಲಿ 2023 ಎಜುಕೇಶನ್‌ಯುಎಸ್‌ಎ ವಿಶ್ವವಿದ್ಯಾಲಯ ಶಿಕ್ಷಣ ಮೇಳ
ಎಜುಕೇಶನ್‌ಯುಎಸ್‌ಎ ವಿಶ್ವವಿದ್ಯಾಲಯ ಮೇಳ
ಗಂಗಾಧರ​ ಬ. ಸಾಬೋಜಿ
|

Updated on:Aug 24, 2023 | 9:49 PM

Share

ಬೆಂಗಳೂರು, ಆಗಸ್ಟ್​ 24: ಯುನೈಟೆಡ್ ಸ್ಟೇಟ್ಸ್‌ನಲ್ಲಿ ಉನ್ನತ ಶಿಕ್ಷಣವನ್ನು ಮುಂದುವರೆಸುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುವರ್ಣಾವಕಾಶ ಕಾದಿದೆ. ಈ ಕುರಿತಾಗಿ ಅವಕಾಶಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಎಜುಕೇಶನ್‌ಯುಎಸ್‌ಎ ಶಿಕ್ಷಣ ಮೇಳದಲ್ಲಿ (EducationUSA University Fair) ಭಾಗವಹಿಸುವ ಮೂಲಕ ಯುಎಸ್​ ವಿಶ್ವವಿದ್ಯಾನಿಲಯದ  ಪ್ರತಿನಿಧಿಗಳೊಂದಿಗೆ ವೈಯಕ್ತಿಕವಾಗಿ ಸಮಾಲೋಚನೆ ನಡೆಸಬಹುದಾಗಿದೆ. ಬೆಂಗಳೂರಿನ ಯಶನಾ ಟ್ರಸ್ಟ್‌ ಮತ್ತು ಯುಎಸ್ ಕಾನ್ಸುಲೇಟ್ ಜನರಲ್ ಚೆನ್ನೈನ ಸಹಯೋಗದಲ್ಲಿ ಸೆಪ್ಟೆಂಬರ್ 3 ರಂದು ಬೆಂಗಳೂರಿನ ತಾಜ್​ ಎಂಜಿ ರೋಡ್ ಹೋಟೆಲ್‌ನಲ್ಲಿ ಮಧ್ಯಾಹ್ನ 2:00 ರಿಂದ ಸಂಜೆ 5ರ ವರೆಗೆ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ಯುನೈಟೆಡ್ ಸ್ಟೇಟ್ಸ್‌ನ 36 ವಿವಿಧ ಭಾಗಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಒಳಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆಯಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳನ್ನು ಭೇಟಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.

ಇದನ್ನೂ ಓದಿ: TV9 Big Impact: ಪಿಯು ವಿದ್ಯಾರ್ಥಿಗಳಿಗೆ ಗೂಡ್ ನ್ಯೂಸ್; ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಶೇ.10 ದಾಖಲಾತಿ ಹೆಚ್ಚಿಸಲು ಸರ್ಕಾರದ ಯೋಜನೆ

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪದವಿ, ಸ್ನಾತಕೋತ್ತರ ಅಥವಾ ಪಿಎಚ್‌ಡಿ ಮಾಡಬಯಸುವ ವಿದ್ಯಾರ್ಥಿಗಳಿಗೆ ಈ ಮೇಳವು ಸಹಕಾರಿಯಾಗಲಿದೆ. ಇನ್ನು ಈ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ವಿಧಿಸಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ನೋಂದಣಿ ಅಗತ್ಯವಿದೆ. (ಈ ಲಿಂಕ್​ ಮೂಲಕ ನೋದಣಿ ಮಾಡಿಕೊಳ್ಳಬಹುದು https://bit.ly/EdUSAFair23PR)

ಯುನೈಟೆಡ್ ಸ್ಟೇಟ್ಸ್ ಭಾರತೀಯ ವಿದ್ಯಾರ್ಥಿಗಳಿಗೆ ಅತ್ಯಂತ ಜನಪ್ರಿಯ ಅಂತರರಾಷ್ಟ್ರೀಯ ಅಧ್ಯಯನ ಕೇಂದ್ರವಾಗಿದೆ. ಪ್ರತಿ ವರ್ಷ ಎಜುಕೇಶನ್‌ಯುಎಸ್‌ಎ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿಯೂ ಆರಂಭವಾಗಲಿವೆ ಎಲ್​​ಕೆಜಿ, ಯುಕೆಜಿ; 262 ಶಾಲೆಗಳಲ್ಲಿ ಆರಂಭಕ್ಕೆ ಸಿಕ್ತು ಗ್ರೀನ್ ಸಿಗ್ನಲ್

ಎಜುಕೇಶನ್‌ಯುಎಸ್‌ಎ ಕೇಂದ್ರಗಳು ಶಿಕ್ಷಣ ಮೇಳಗಳು ಮತ್ತು ಶಾಲೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಇತರೆ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ನಿರೀಕ್ಷಿತ ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಮತ್ತು ಆನ್‌ಲೈನ್ ಸೆಷನ್‌ಗಳ ಮೂಲಕ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅಧ್ಯಯನ ಮಾಡುವ ಬಗ್ಗೆ ನಿಖರವಾದ, ಸಮಗ್ರವಾದ ಮತ್ತು ಪ್ರಸ್ತುತ ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಒದಗಿಸುತ್ತದೆ.

ಹೈದರಾಬಾದ್, ಮುಂಬೈ, ಪುಣೆ, ನವದೆಹಲಿ, ಅಹಮದಾಬಾದ್, ಕೋಲ್ಕತ್ತಾ, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಈ ವೈಯಕ್ತಿಕ ಮೇಳಗಳನ್ನು ಯುಎಸ್-ಇಂಡಿಯಾ ಎಜುಕೇಷನಲ್ ಫೌಂಡೇಶನ್ (ಯುಎಸ್‌ಐಇಎಫ್), ಯುಎಸ್ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಆಯೋಜಿಸಿದೆ. ಹೆಚ್ಚಿನ ಮಾಹಿತಿಗಾಗಿ https://www.facebook.com/EducationUSAIndia, +91-9880041115 ನಂಬರ್​​ಗೆ ಕರೆ ಮಾಡಬಹುದಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 9:49 pm, Thu, 24 August 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ