Shikshak Parv 2021: ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತು

| Updated By: Skanda

Updated on: Sep 07, 2021 | 12:33 PM

ಭಾರತದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸಲು ತೆಗೆದುಕೊಳ್ಳುವ ಕ್ರಮದ ಬಗ್ಗೆ ಮಾತನಾಡಿದ ಮೋದಿ, ಹೊಸ ಯೋಜನೆಗಳು ಶಿಕ್ಷಣ ಕ್ಷೇತ್ರದ ವ್ಯಾಪ್ತಿ ಹಾಗೂ ಹಿರಿಮೆಯನ್ನು ಹೆಚ್ಚಿಸುವುದಷ್ಟೇ ಅಲ್ಲದೇ ವಿದ್ಯಾರ್ಥಿಗಳ ಭವಿಷ್ಯಕ್ಕೂ ಸಹಕಾರಿಯಾಗಲಿವೆ ಎಂದು ಬಣ್ಣಿಸಿದ್ದಾರೆ.

Shikshak Parv 2021: ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ
Follow us on

Shikshak Parv 2021: ಶಿಕ್ಷಕ ಪರ್ವ 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂತನ ಯೋಜನೆಗಳನ್ನು ಉದ್ಘಾಟಿಸಲಿರುವ ಅವರು ಕೊರೊನಾ ಸಂದರ್ಭದಲ್ಲೂ ಶ್ರಮಿಸಿದ ಶಿಕ್ಷಕ ವೃಂದಕ್ಕೆ ಹಾಗೂ ಈ ಬಾರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಶಿಕ್ಷಕರಿಗೆ ಅಭಿನಂದನೆ ತಿಳಿಸಿದ್ದಾರೆ.

ಭಾರತದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸಲು ತೆಗೆದುಕೊಳ್ಳುವ ಕ್ರಮದ ಬಗ್ಗೆ ಮಾತನಾಡಿದ ಅವರು ಹೊಸ ಯೋಜನೆಗಳು ಶಿಕ್ಷಣ ಕ್ಷೇತ್ರದ ವ್ಯಾಪ್ತಿ ಹಾಗೂ ಹಿರಿಮೆಯನ್ನು ಹೆಚ್ಚಿಸುವುದಷ್ಟೇ ಅಲ್ಲದೇ ವಿದ್ಯಾರ್ಥಿಗಳ ಭವಿಷ್ಯಕ್ಕೂ ಸಹಕಾರಿಯಾಗಲಿವೆ ಎಂದು ಬಣ್ಣಿಸಿದ್ದಾರೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಮಹತ್ವದ ಕುರಿತು ಇದೇ ವೇಳೆ ಕೆಲ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅಂತೆಯೇ ಖಾಸಗಿ ವಲಯಗಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ರೂಪಿಸಲು ಸಹಕಾರ ನೀಡುವಂತೆ ತಿಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವಿಚಾರದಲ್ಲಿ ನೀವು ಸ್ವಯಂಪ್ರೇರಿತರಾಗಿ ಮುಂದೆ ಬಂದು ಶೈಕ್ಷಣಿಕ ಪದ್ಧತಿಯನ್ನು ಇನ್ನಷ್ಟು ಎತ್ತರಕ್ಕೇರಿಸಲು ಸಹಕರಿಸಬೇಕು ಎಂದಿದ್ದಾರೆ. ಇಂದು ಶಿಕ್ಷಕರ ಉತ್ಸವದಲ್ಲಿ ಹಲವಾರು ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ದೇಶವು ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವುದರಿಂದ ಇದೆಲ್ಲಾ ಅಗತ್ಯವಾಗಿದೆ. ಇಂದು ಆರಂಭಿಸಲಾದ ಯೋಜನೆಗಳು ಭವಿಷ್ಯದ ಭಾರತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ವರ್ಣಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ, ಶಿಕ್ಷಣ ತಜ್ಞರು, ತಜ್ಞರು ಮತ್ತು ಶಿಕ್ಷಕರು ಪ್ರತಿ ಹಂತದಲ್ಲೂ ಕೊಡುಗೆ ನೀಡಿದ್ದಾರೆ. ನೀವೆಲ್ಲರೂ ಆ ಪ್ರಶಂಸೆಗೆ ಅರ್ಹರು. ಈಗ ನಾವು ಈ ಪಾಲುದಾರಿಕೆಯನ್ನು ಹೊಸ ಹಂತಕ್ಕೆ ಕೊಂಡೊಯ್ಯಬೇಕು. ಇದರಲ್ಲಿ ನಾವು ಸಮಾಜವನ್ನು ಸಂಪರ್ಕಿಸಬೇಕು. ಇಂದು ದೇಶದಲ್ಲಿ ಬದಲಾವಣೆಯ ವಾತಾವರಣವಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಂತಹ ಆಧುನಿಕ ಮತ್ತು ಭವಿಷ್ಯದ ನೀತಿಯೂ ಇದೆ. ಆದ್ದರಿಂದ ಕೆಲವು ಸಮಯದಿಂದ ದೇಶವು ಶಿಕ್ಷಣ ಕ್ಷೇತ್ರದಲ್ಲಿ ಒಂದರ ನಂತರ ಒಂದರಂತೆ ಹೊಸ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ವಿದ್ಯಾಂಜಲಿ 2.0, ನಿಷ್ಠಾ 3.0, ಟಾಕಿಂಗ್ ಬುಕ್ಸ್ ಮತ್ತು ಯುಎಲ್ ಡಿ ಬೇಸ್ ಐಎಸ್‌ಎಲ್ ಡಿಕ್ಷನರಿಯಂತಹ ಹೊಸ ಕಾರ್ಯಕ್ರಮಗಳು ಮತ್ತು ವ್ಯವಸ್ಥೆಗಳನ್ನು ಪ್ರಾರಂಭಿಸಲಾಗಿದೆ. ಇದು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕಗೊಳಿಸುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಸಾಮರ್ಥ್ಯವನ್ನು ತೋರಿಸಲು ಸೂಕ್ತ ಸಮಯ ಇದು ಎಂದು ಅಭಿಪ್ರಾಯಪಟ್ಟಿದ್ದಾರೆ.

Published On - 11:32 am, Tue, 7 September 21