AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಲು ಸಿದ್ದರಾಮಯ್ಯ ಆಗ್ರಹ, ಪರೀಕ್ಷೆ ಮುಂದೂಡಲು ಮುಕ್ತ ವಿದ್ಯಾಲಯ ಪತ್ರ

ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗ ಜಲಾವೃತವಾಗಿವೆ. ಜನರ ಸಂವಹನ‌ ಮತ್ತು ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನಾಳೆ ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ರದ್ದುಗೊಳಿಸಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆ-ಸೆಟ್ ಪರೀಕ್ಷೆ ರದ್ದುಗೊಳಿಸಲು ಸಿದ್ದರಾಮಯ್ಯ ಆಗ್ರಹ, ಪರೀಕ್ಷೆ ಮುಂದೂಡಲು ಮುಕ್ತ ವಿದ್ಯಾಲಯ ಪತ್ರ
ಸಿದ್ದರಾಮಯ್ಯ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 24, 2021 | 11:16 PM

Share

ಬೆಂಗಳೂರು: ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಪರಿಸ್ಥಿತಿಯನ್ನು ಗಮನಕ್ಕೆ ತೆಗೆದುಕೊಂಡು, ಕೆ-ಸೆಟ್‌ ಪರೀಕ್ಷೆ ರದ್ದುಗೊಳಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ. ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಭಾಗ ಜಲಾವೃತವಾಗಿವೆ. ಜನರ ಸಂವಹನ‌ ಮತ್ತು ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನಾಳೆ ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ರದ್ದುಗೊಳಿಸಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆ-ಸೆಟ್ ಅಭ್ಯರ್ಥಿಗಳು ಸಹ ಈ ಮೊದಲು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಕೆ-ಸೆಟ್ ಪರೀಕ್ಷೆಗೆ ತೆರಳಲಾಗದೆ ಪರೀಕ್ಷಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ತೀವ್ರ ಮಳೆಯಿಂದ ಹೆದ್ದಾರಿಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲಾಗದೆ ಪರೀಕ್ಷಾರ್ಥಿಗಳು ಪರದಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪರೀಕ್ಷಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಧಾರವಾಡ, ಶಿವಮೊಗ್ಗ ಪರೀಕ್ಷಾ ಕೇಂದ್ರಕ್ಕೆ ಹೋಗಲು ಆಗ್ತಿಲ್ಲ ಎಂದು ಕೆಸೆಟ್ ಪರೀಕ್ಷೆ ಎದುರಿಸಲು ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳ ಅಳಲು ತೋಡಿಕೊಂಡಿದ್ದಾರೆ.

ಭಾರಿ ಮಳೆಯಿಂದ ಎಲ್ಲ ರಸ್ತೆಗಳು ಬಂದ್ ಆಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವುದಕ್ಕೆ ಆಗುತ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮ ಜಲಾವೃತವಾಗಿವೆ. ಪರೀಕ್ಷಾರ್ಥಿಗಳ ಪಠ್ಯಪುಸ್ತಕ, ಪ್ರವೇಶ ಪ್ರತಿ ನೀರುಪಾಲಾಗಿದೆ. ಹೀಗಾಗಿ ಕೆ-ಸೆಟ್ ಪರೀಕ್ಷೆ ಮುಂದೂಡಲು ರಾಜ್ಯ ಸರ್ಕಾರಕ್ಕೆ ಪರೀಕ್ಷಾರ್ಥಿಗಳು ಮನವಿ ಮಾಡಿದ್ದಾರೆ.

ಜುಲೈ 26ರಿಂದ ನಡೆಯಬೇಕಿದ್ದ ಕರ್ನಾಟಕ ಮುಕ್ತ ಶಾಲೆಯ ಪರೀಕ್ಷೆ ಮುಂದೂಡುವಂತೆ ಜೆಎಸ್​ಎಸ್​ ಕರ್ನಾಟಕ ಮುಕ್ತ ವಿದ್ಯಾಲಯ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರಿಗೆ ಪತ್ರ ಬರೆದಿದೆ. ಪ್ರೌಢಶಾಲೆ ವ್ಯಾಸಂಗವನ್ನು ಅರ್ಧಕ್ಕೆ ಬಿಟ್ಟವರಿಗೆ ಮುಕ್ತ ವಿದ್ಯಾಲಯವು ಕಲಿಕೆಗೆ ವ್ಯವಸ್ಥೆ ಮಾಡಿ ಪರೀಕ್ಷೆ ನಡೆಸುತ್ತದೆ. ಈ ವರ್ಷ ಜುಲೈ 26ರಿಂದ ಆಗಸ್ಟ್​ 4ರ ಅವಧಿಯಲ್ಲಿ 2500 ಮಂದಿ ಪರೀಕ್ಷೆ ಬರೆಯಬೇಕಿತ್ತು.

ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲು ಶಿಕ್ಷಣ ಸಚಿವರಿಗೆ ಜೆಎಸ್​ಎಸ್​ ಕರ್ನಾಟಕ ಮುಕ್ತ ವಿದ್ಯಾಲಯ ಪತ್ರ ಬರೆದಿದೆ. ಮಳೆ ಹೆಚ್ಚಾಗಿರುವುದರಿಂದ ರಸ್ತೆಗಳು ಮುಳುಗಡೆಯಾಗಿದ್ದು, ಸಾರಿಗೆ ಸಂಪರ್ಕ ಅಸ್ತವ್ಯಸ್ಥಗೊಂಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗುವುದು ಕಷ್ಟ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಬೇಕು ಎಂದು ಜೆಎಸ್​ಎಸ್​ ಕರ್ನಾಟಕ ಮುಕ್ತ ವಿದ್ಯಾಲಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಎಸ್​ಎಸ್​ಎಲ್​ಸಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಈಚೆಗಷ್ಟೇ ಪರೀಕ್ಷೆ ಮುಗಿದಿದೆ. ಕೇವಲ 2 ದಿನಗಳಲ್ಲಿ ಪರೀಕ್ಷೆ ಮುಕ್ತಾಯಗೊಂಡಿದೆ. ಡ್ರಾಪ್​ಔಟ್ ವಿದ್ಯಾರ್ಥಿಗಳಿಗೂ ಅದೇ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಪರೀಕ್ಷಾರ್ಥಿಗಳು ಶಿಕ್ಷಣ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ.

(Siddaramiah Demands Postpone of K-Set Exams)

ಇದನ್ನೂ ಓದಿ: Karnataka Rains: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ; ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ, ಕಾಂಗ್ರೆಸ್ ನಾಯಕರ ಭೇಟಿ, ಪರಿಶೀಲನೆ

ಇದನ್ನೂ ಓದಿ: Karnataka Rains: ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ; ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ