AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಪಾವತಿಸಿಲ್ಲ ಎಂದು ಪರೀಕ್ಷೆ ಬರೆಯಲು ಅನುಮತಿ ಇಲ್ಲ; ಖಾಸಗಿ ಶಾಲೆಗಳ ಮಕ್ಕಳಿಗೆ ತಪ್ಪದ ಸಂಕಷ್ಟ

ಶುಲ್ಕ ಕಟ್ಟದ ಮಕ್ಕಳನ್ನು ಕೆಲವು ಶಾಲೆಗಳಲ್ಲಿ ಹೊರಗೆ ನಿಲ್ಲಿಸಲಾಗಿದೆ. ಶುಲ್ಕ ಕಟ್ಟದ ವಿದ್ಯಾರ್ಥಿಗಳನ್ನ ಹೊರಗೆ ಕೂರಿಸಿದ ಆರೋಪ ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಳಿಬಂದಿದೆ. ಪರೀಕ್ಷೆ ಆರಂಭವಾಗುತ್ತಿದ್ದಂತೆ ಖಾಸಗಿ ಶಾಲೆಗಳಿಂದ ಶುಲ್ಕ ಸುಲಿಗೆ ಎಂಬ ಬಗ್ಗೆ ಆರೋಪ ವ್ಯಕ್ತವಾಗಿದೆ.

ಶುಲ್ಕ ಪಾವತಿಸಿಲ್ಲ ಎಂದು ಪರೀಕ್ಷೆ ಬರೆಯಲು ಅನುಮತಿ ಇಲ್ಲ; ಖಾಸಗಿ ಶಾಲೆಗಳ ಮಕ್ಕಳಿಗೆ ತಪ್ಪದ ಸಂಕಷ್ಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 14, 2022 | 4:12 PM

Share

ಬೆಂಗಳೂರು: ಪರೀಕ್ಷೆಗಳು ಶುರುವಾಗ್ತಿದ್ದಂತೆ ಖಾಸಗಿ ಶಾಲೆಗಳಿಂದ ಸುಲಿಗೆಯ ಆರ್ಭಟ ಜೋರಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಎಕ್ಸಾಂ ಬೇಕು, ಹಾಲ್ ಟಿಕೆಟ್ ಬೇಕು ಅಂದ್ರೆ ಕಂಪ್ಲೀಟ್ ಫೀಸ್ ಕಟ್ಟುವಂತೆ ಮಕ್ಕಳಿಗೆ ಖಾಸಗಿ ಶಾಲೆಗಳು ಒತ್ತಡ ಹಾಕುತ್ತಿವೆ. ಶುಲ್ಕ ಕಟ್ಟದ ಮಕ್ಕಳನ್ನು ಕೆಲವು ಶಾಲೆಗಳಲ್ಲಿ ಹೊರಗೆ ನಿಲ್ಲಿಸಲಾಗಿದೆ. ಶುಲ್ಕ ಕಟ್ಟದ ವಿದ್ಯಾರ್ಥಿಗಳನ್ನ ಹೊರಗೆ ಕೂರಿಸಿದ ಆರೋಪ ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಳಿಬಂದಿದೆ. ಪರೀಕ್ಷೆ ಆರಂಭವಾಗುತ್ತಿದ್ದಂತೆ ಖಾಸಗಿ ಶಾಲೆಗಳಿಂದ ಶುಲ್ಕ ಸುಲಿಗೆ ಎಂಬ ಬಗ್ಗೆ ಆರೋಪ ವ್ಯಕ್ತವಾಗಿದೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ಕಾವೇರಿ ಶಾಲೆಯಲ್ಲಿ ಶುಲ್ಕ ಪಾವತಿ ಮಾಡಿಲ್ಲವೆಂದು ಪರೀಕ್ಷೆ ಬರೆಯಲು ಅವಕಾಶವಿಲ್ಲದ ಘಟನೆ ನಡೆದಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಕೂಡಿಹಾಕಿದೆ. ಪರೀಕ್ಷೆ ಬರೆಯಲು ಅವಕಾಶ ನೀಡದೆ ಕೂಡಿಹಾಕಿದೆ. ಕಾವೇರಿ ಶಾಲಾ ಆಡಳಿತ ಮಂಡಳಿ ನಡೆಗೆ ಪೋಷಕರ ಆಕ್ರೋಶ ವ್ಯಕ್ತವಾಗಿದೆ.

ಮತ್ತೊಂದೆಡೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿರುವ ಖಾಸಗಿ ಶಾಲೆ ವಾಸವಿ ಶಿಕ್ಷಣ ಸಂಸ್ಥೆ ವಿರುದ್ಧ ಆರೋಪ ಕೇಳಿಬಂದಿದೆ. ಶಾಲಾ ಶುಲ್ಕ ಪಾವತಿಸದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಅನುಮತಿ ನೀಡದೆ ಹೊರಗೆ ಕೂರಿಸಿದ ಆರೋಪ ಕೇಳಿಬಂದಿದೆ. 1 ರಿಂದ 7ನೇ ತರಗತಿ ಶಾಲಾ ಶುಲ್ಕ ಕಟ್ಟದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅನುಮತಿ ನೀಡದೆ ಹೊರಗೆ ಕೂರಿಸಲಾಗಿದೆ. ವಿದ್ಯಾರ್ಥಿಗಳನ್ನು ಹೊರಗೆ ಕೂರಿಸಿರುವ ಆಡಳಿತ ಮಂಡಳಿ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ

ಇದನ್ನೂ ಓದಿ: ಪರೀಕ್ಷೆ ಬರೆಯಲು ಹೋಗುವಾಗ ಆತ್ಮವಿಶ್ವಾಸಕ್ಕಿಂತ ದೊಡ್ಡ ಸಂಗತಿ ಮತ್ತೊಂದಿಲ್ಲ: ಡಾ ಸೌಜನ್ಯ ವಸಿಷ್ಠ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!