AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಮೌಲ್ಯಮಾಪನ ಎಡವಟ್ಟು; ಮರು ಮೌಲ್ಯಮಾಪನ ವೇಳೆ ತಾಲೂಕಿಗೆ ಟಾಪರ್, ಇಷ್ಟಪಟ್ಟ ಕಾಲೇಜು ಸಿಗಲಿಲ್ಲವೆಂದು ವಿದ್ಯಾರ್ಥಿನಿ ಅಳಲು

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊಡಗಳ್ಳಿ ಗ್ರಾಮದ ಶ್ರೀನಿವಾಸ್, ಸುಮ ದಂಪತಿ ಪುತ್ರಿ ಶ್ರಾವ್ಯ ಮರು ಮೌಲ್ಯ ಮಾಪನದಲ್ಲಿ 61 ಅಂಕ ಪಡೆದು ತಾಲೂಕಿನ 3 ನೇ ಟಾಪರ್ ಆಗಿದ್ದಾಳೆ. ಆದರೆ ಈ ಹಿಂದೆ ಕಡಿಮೆ ಅಂಕ ಇದ್ದ ಕಾರಣ ಆಕೆ ಬಯಸಿದ ಕಾಲೇಜಿನಲ್ಲಿ ಸೀಟು ಸಿಕ್ಕಿಲ್ಲ. ಈಗ ಒಳ್ಳೆಯ ಅಂಕ ಇದ್ದರೂ ಕಾಲೇಜು ಪ್ರವೇಶಾತಿಗೆ ಸಮಯ ಮುಗಿದಿರುವುದರಿಂದ ಟಾಪ್ ಕಾಲೇಜುಗಳಲ್ಲಿ ಸೀಟು ಸಿಗುತ್ತಿಲ್ಲ.

SSLC ಮೌಲ್ಯಮಾಪನ ಎಡವಟ್ಟು; ಮರು ಮೌಲ್ಯಮಾಪನ ವೇಳೆ ತಾಲೂಕಿಗೆ ಟಾಪರ್, ಇಷ್ಟಪಟ್ಟ ಕಾಲೇಜು ಸಿಗಲಿಲ್ಲವೆಂದು ವಿದ್ಯಾರ್ಥಿನಿ ಅಳಲು
SSLC ಮೌಲ್ಯಮಾಪನ ಎಡವಟ್ಟು; ಮರು ಮೌಲ್ಯಮಾಪನ ವೇಳೆ ತಾಲೂಕಿಗೆ ಟಾಪರ್
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Jun 08, 2024 | 11:16 AM

Share

ಮೈಸೂರು, ಜೂನ್.08: ಪ್ರಸಕ್ತ ಸಾಲಿನಲ್ಲಿ ನಡೆದ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆಯ ಮೌಲ್ಯಮಾಪನದಲ್ಲಿ ಮೌಲ್ಯಮಾಪಕರ ಬೇಜಬ್ದಾರಿತನ ಎದ್ದು ಕಾಣಿಸುತ್ತಿದೆ. ಮೇ.09ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು ಇದರಿಂದ ತೃಪ್ತರಾಗದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ(Revaluation) ಅರ್ಜಿ ಸಲ್ಲಿಸಿದಾಗ ಅವರಿಗೆ ಹೆಚ್ಚಿನ ಅಂಕಗಳು ಸಿಕ್ಕಿರುವ ಅನೇಕ ಘಟನೆಗಳು ನಡೆಯುತ್ತಿವೆ. ಈ ಮೂಲಕ ಮೌಲ್ಯಮಾಪಕರ ಬೇಜಬ್ದಾರಿತನ ಕಂಡು ಬಂದಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಕೊಡಗಳ್ಳಿ ಗ್ರಾಮದ ಶ್ರಾವ್ಯ ಕಡಿಮೆ ಅಂಕ ಬಂದಿದಕ್ಕೆ ಒಳ್ಳೆಯ ಕಾಲೇಜಿನಲ್ಲಿ ಸೀಟು ಸಿಗದೆ ನೊಂದಿದ್ದಳು. ಆದರೆ ಮರು ಮೌಲ್ಯ ಮಾಪನಕ್ಕೆ ಹಾಕಿದಾಗ ಉತ್ತಮ ಅಂಕ ಬಂದಿದೆ. ತಾಲೂಕಿನ 3ನೇ ಟಾಪರ್ ಆಗಿದ್ದಾಳೆ. ಆದರೆ ತಾನು ಬಯಸಿದ ಕಾಲೇಜಿನಲ್ಲಿ ಸೀಟು ಸಿಕ್ಕಿಲ್ಲ.

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊಡಗಳ್ಳಿ ಗ್ರಾಮದ ಶ್ರೀನಿವಾಸ್, ಸುಮ ದಂಪತಿ ಪುತ್ರಿ ಶ್ರಾವ್ಯ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆಯ ಜೀವೋದಯ ಫ್ರೌಡಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮೊದಲು ಪ್ರಕಟಗೊಂಡ ಫಲಿತಾಂಶದಲ್ಲಿ 545 ಅಂಕಗಳೊಂದಿಗೆ ಶೇ 87 ಅಂಕ ಪಡೆದಿದ್ದಳು. ನಿರೀಕ್ಷೆಗೆ ತಕ್ಕಂತೆ ಅಂಕ ಬರದ ಕಾರಣ ತೀವ್ರ ಮನನೊಂದಿದ್ದ ವಿದ್ಯಾರ್ಥಿನಿ ಶ್ರಾವ್ಯ ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ್ದಳು. ಮರು ಮೌಲ್ಯಮಾಪನದಲ್ಲಿ ಬರೋಬ್ಬರಿ 606 ಅಂಕದೊಂದಿಗೆ ಶೇ 97 ಅಂಕ ಪಡೆದಿದ್ದಾಳೆ. ಮರು ಮೌಲ್ಯಮಾಪನದಲ್ಲಿ ಶೇ 10 ರಷ್ಟು ಅಂಕ ಹೆಚ್ಚಾಗಿದೆ. ಮರು ಮೌಲ್ಯ ಮಾಪನದಲ್ಲಿ 61 ಅಂಕ ಪಡೆದು ತಾಲೂಕಿನ 3 ನೇ ಟಾಪರ್ ಆಗಿದ್ದಾಳೆ.

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಂಕಿತಾಳನ್ನು ಸನ್ಮಾನಿಸಿ ರೂ. 5 ಲಕ್ಷ ಬಹುಮಾನ ನೀಡಿದ ಡಿಕೆ ಶಿವಕುಮಾರ್

ಈ ಹಿಂದೆ ಗಣಿತದಲ್ಲಿ 53 ಅಂಕ ಬಂದಿತ್ತು. ಮರು ಮೌಲ್ಯ ಮಾಪನದ ನಂತರ 94 ಅಂಕ ಬಂದಿದೆ. ವಿಜ್ಞಾನ ವಿಷಯದಲ್ಲಿ ಹಿಂದೆ 75 ಅಂಕ ಈಗ 95 ಅಂಕ ಬಂದಿದೆ. ಈ‌ ಮೊದಲು ಕಡಿಮೆ ಅಂಕ ಬಂದಿದ್ದರಿಂದ ಬಯಸಿದ ಕಾಲೇಜಿನಲ್ಲಿ ಸೀಟು ಸಿಕ್ಕಿಲ್ಲ. ಇದೀಗ ಹೆಚ್ಚು ಅಂಕ ಬಂದಿದ್ದರೂ ಕಾಲೇಜು ಪ್ರವೇಶಾತಿಗೆ ಸಮಯ ಮುಗಿದಿರುವುದರಿಂದ ವಿದ್ಯಾರ್ಥಿನಿ ಕಂಗಾಲಾಗಿದ್ದಾಳೆ.

ಯಾರದೋ ತಪ್ಪಿನಿಂದಾಗಿ ಅತಿ ಕಡಿಮೆ ಅಂಕ ಬಂದಿತೆಂದು ತಮ್ಮ ಪುತ್ರಿ ಅನುಭವಿಸಿದ ಮಾನಸಿಕ ನೋವಿಗೆ ಬೆಲೆ ಕಟ್ಟಲು ಸಾಧ್ಯವೇ ಎಂದು ಶ್ರಾವ್ಯ ತಾಯಿ ಸುಮಾ ಶ್ರೀನಿವಾಸ್ ಅವರು ಮನನೊಂದುಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ