AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಕೂಡ ಮುಂದೂಡಿಕೆ

SSLC 2024 Exam 2: ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಜೊತೆಗೆ ವಿಶೇಷ ಪರಿಹಾರ ಬೋಧನೆ ತರಗತಿಯನ್ನು ಮಂದೂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಕೂಡ ಮುಂದೂಡಿಕೆ
ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ
Anil Kalkere
| Edited By: |

Updated on:May 17, 2024 | 9:25 PM

Share

ಬೆಂಗಳೂರು, ಮೇ.17: ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ(SSLC) ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್​​ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಕೂಡ ಮುಂದೂಡಲಾಗಿದ್ದು, ಅದನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ. ಇನ್ನು ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ  ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ:SSLC Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಇದೇ ಮೇ.9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ. ಅದರಲ್ಲೂ ಕನ್ನಡ ಮಾಧ್ಯಮದಲ್ಲಿ ಓದಿರೋ ಸಾವಿರಾರು ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಫೇಲ್ ಆಗಿದ್ದರು. ಈ ಹಿನ್ನಲೆ ಅನುತ್ತೀರ್ಣ ಆದವರ ಸಲುವಾಗಿ ವಿಶೇಷ ಪರಿಹಾರ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Fri, 17 May 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು