AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ
ಸಚಿವ ಸುರೇಶ್​ ಕುಮಾರ್​
TV9 Web
| Edited By: |

Updated on:Jul 22, 2021 | 8:48 PM

Share

ಬೆಂಗಳೂರು: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು (SSLC Results 2021) ಘೋಷಿಸಲಾಗುವುದು. ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್​ಗಳು ಲಭ್ಯವಿದೆ. ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಸೀಟ್​ಗಳು ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

ಇವತ್ತು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಸಲಾಯಿತು. ಇಂದು ನಡೆದ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿಯಿತ್ತು. ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 3350 ವಿದ್ಯಾರ್ಥಿಗಳ ಗೈರಾಗಿದ್ದಾರೆ. ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ, ದ್ವಿತೀಯ ಭಾಷೆ ಪರೀಕ್ಷೆಗೆ 8,24,686 ಮಕ್ಕಳು ಹಾಜರಾಗಿದ್ದರು. ದ್ವಿತೀಯ ಭಾಷೆ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತೃತೀಯ ಭಾಷೆಗೆ 8,17,640 ವಿದ್ಯಾರ್ಥಿಗಳು ನೋಂದಣಿ, 8,14,538 ಮಕ್ಕಳು ಹಾಜರು, 3102 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊವಿಡ್​ ಕೇರ್​ ಸೆಂಟರ್​​ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

ಬೆಂಗಳೂರು ಕೇಂದ್ರ ವಿವಿ ಪರೀಕ್ಷೆ ದಿನಾಂಕ ಪ್ರಕಟ: ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ

(SSLC Exam Results 2021 by August 1 says Education Minister Suresh Kumar)

Published On - 6:02 pm, Thu, 22 July 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು