AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2023: ಪರೀಕ್ಷೆ ಬರೆದು ಹೋರಬಂದು ವಿಡಿಯೋ ಕಾಲ್ ಮೂಲಕ ತಂದೆ ಅಂತ್ಯಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ

ಪ್ರತಿಯೊಬ್ಬರ ಮನ ಕಲಕುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಹೊರಬಂದು ವಿಡಿಯೋ ಕಾಲ್ ಮೂಲಕ ತನ್ನ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿ ಕಣ್ಣೀರಿಟ್ಟಿದ್ದಾಳೆ.

SSLC Exams 2023: ಪರೀಕ್ಷೆ ಬರೆದು ಹೋರಬಂದು ವಿಡಿಯೋ ಕಾಲ್ ಮೂಲಕ ತಂದೆ ಅಂತ್ಯಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on:Apr 06, 2023 | 9:11 PM

Share

ಶಿವಮೊಗ್ಗ: ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams 2023) ಬರೆಯುತ್ತಿರುವ ವಿದ್ಯಾರ್ಥಿನಿಯ ಕರುಣಾಜನಕ ಕಥೆ ಇದು. ಇಂದು ಇಂಗ್ಲಿಷ್ ಪರೀಕ್ಷೆ ಬರೆದ ನಂತರ ಪರೀಕ್ಷಾ ಕೊಠಡಿಯಿಂದ ಹೊರಬಂದು ತನ್ನ ತಂದೆಯ ಅಂತ್ಯಸಂಸ್ಕಾರವನ್ನು (Funeral ) ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ (Indira Gandhi Residential School for Backward Classes) ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆ ಕಳೆದುಕೊಂಡ ದುರ್ದೈವಿಯಾಗಿದ್ದಾಳೆ.

ಕೊಪ್ಪಳ ಮೂಲದ ಅರ್ಶಿಯಾಳ ತಂದೆ ಅಬಿದ್ ಪಾಷಾ ಅವರಿಗೆ ಕಳೆದ ರಾತ್ರಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದ ಶಿಕ್ಷಕರು ತಕ್ಷಣ ಅರ್ಶಿಯಾಳನ್ನು ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ. ಸುಮಾರು 700 ಕಿಮೀ ದೂರ ಪ್ರಯಾಣಿಸಿ ಅರ್ಶಿಯಾಳಿಗೆ ತನ್ನ ತಂದೆಯ ಮೃತದೇಹದ ದರ್ಶನ ಮಾಡಿಸಿ ಮತ್ತೆ ಪರೀಕ್ಷೆ ಬರೆಯಲು ಶಿಕ್ಷಕರು ಸಹಕರಿಸಿದ್ದಾರೆ.

ಇದನ್ನೂ ಓದಿ: SSLC Exams 2023: ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್

ತನ್ನ ತಂದೆಯ ಪಾರ್ಥಿವ ಶರೀರದ ದರ್ಶನ ಪಡೆದ ನಂತರ ಅರ್ಶಿಯಾ ಇಂಗ್ಲಿಷ್ ಪರೀಕ್ಷೆ ಬರೆಯಲು ಮುಂದಾಗಿದ್ದಾಳೆ. ಪರೀಕ್ಷೆ ಬರೆದು ಹೊರಬಂದ ವಿದ್ಯಾರ್ಥಿನಿಗೆ ಶಿಕ್ಷಕರು ವಿಡಿಯೋ ಕಾಲ್ ಮೂಲಕ ಶವ ಸಂಸ್ಕಾರ ವೀಕ್ಷಣೆಗೆ ಅನುವುಮಾಡಿಕೊಟ್ಟಿದ್ದಾರೆ. ಮೊಬೈಲ್​ನಲ್ಲಿ ತಂದೆಯ ಶವ ಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ ಕಣ್ಣೀರಿಟ್ಟಿದ್ದಾಳೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Thu, 6 April 23

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು