AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2023: ಪರೀಕ್ಷೆ ಬರೆದು ಹೋರಬಂದು ವಿಡಿಯೋ ಕಾಲ್ ಮೂಲಕ ತಂದೆ ಅಂತ್ಯಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ

ಪ್ರತಿಯೊಬ್ಬರ ಮನ ಕಲಕುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಹೊರಬಂದು ವಿಡಿಯೋ ಕಾಲ್ ಮೂಲಕ ತನ್ನ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿ ಕಣ್ಣೀರಿಟ್ಟಿದ್ದಾಳೆ.

SSLC Exams 2023: ಪರೀಕ್ಷೆ ಬರೆದು ಹೋರಬಂದು ವಿಡಿಯೋ ಕಾಲ್ ಮೂಲಕ ತಂದೆ ಅಂತ್ಯಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on:Apr 06, 2023 | 9:11 PM

Share

ಶಿವಮೊಗ್ಗ: ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams 2023) ಬರೆಯುತ್ತಿರುವ ವಿದ್ಯಾರ್ಥಿನಿಯ ಕರುಣಾಜನಕ ಕಥೆ ಇದು. ಇಂದು ಇಂಗ್ಲಿಷ್ ಪರೀಕ್ಷೆ ಬರೆದ ನಂತರ ಪರೀಕ್ಷಾ ಕೊಠಡಿಯಿಂದ ಹೊರಬಂದು ತನ್ನ ತಂದೆಯ ಅಂತ್ಯಸಂಸ್ಕಾರವನ್ನು (Funeral ) ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ (Indira Gandhi Residential School for Backward Classes) ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆ ಕಳೆದುಕೊಂಡ ದುರ್ದೈವಿಯಾಗಿದ್ದಾಳೆ.

ಕೊಪ್ಪಳ ಮೂಲದ ಅರ್ಶಿಯಾಳ ತಂದೆ ಅಬಿದ್ ಪಾಷಾ ಅವರಿಗೆ ಕಳೆದ ರಾತ್ರಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದ ಶಿಕ್ಷಕರು ತಕ್ಷಣ ಅರ್ಶಿಯಾಳನ್ನು ಕೊಪ್ಪಳಕ್ಕೆ ಕರೆದೊಯ್ದಿದ್ದಾರೆ. ಸುಮಾರು 700 ಕಿಮೀ ದೂರ ಪ್ರಯಾಣಿಸಿ ಅರ್ಶಿಯಾಳಿಗೆ ತನ್ನ ತಂದೆಯ ಮೃತದೇಹದ ದರ್ಶನ ಮಾಡಿಸಿ ಮತ್ತೆ ಪರೀಕ್ಷೆ ಬರೆಯಲು ಶಿಕ್ಷಕರು ಸಹಕರಿಸಿದ್ದಾರೆ.

ಇದನ್ನೂ ಓದಿ: SSLC Exams 2023: ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್

ತನ್ನ ತಂದೆಯ ಪಾರ್ಥಿವ ಶರೀರದ ದರ್ಶನ ಪಡೆದ ನಂತರ ಅರ್ಶಿಯಾ ಇಂಗ್ಲಿಷ್ ಪರೀಕ್ಷೆ ಬರೆಯಲು ಮುಂದಾಗಿದ್ದಾಳೆ. ಪರೀಕ್ಷೆ ಬರೆದು ಹೊರಬಂದ ವಿದ್ಯಾರ್ಥಿನಿಗೆ ಶಿಕ್ಷಕರು ವಿಡಿಯೋ ಕಾಲ್ ಮೂಲಕ ಶವ ಸಂಸ್ಕಾರ ವೀಕ್ಷಣೆಗೆ ಅನುವುಮಾಡಿಕೊಟ್ಟಿದ್ದಾರೆ. ಮೊಬೈಲ್​ನಲ್ಲಿ ತಂದೆಯ ಶವ ಸಂಸ್ಕಾರ ವೀಕ್ಷಿಸಿದ ವಿದ್ಯಾರ್ಥಿನಿ ಕಣ್ಣೀರಿಟ್ಟಿದ್ದಾಳೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Thu, 6 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್