AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ

SSLC ಪರೀಕ್ಷೆಯಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ದ 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು ಆತಂಕ ಮೂಡಿಸಿದೆ. ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಮಿತಿಯು, ಪಠ್ಯಕ್ರಮದ ಕೊರತೆ, ಭಾಷಾ ಶಿಕ್ಷಕರ ಅಭಾವ ಮತ್ತು ಪ್ರೋತ್ಸಾಹದ ಕೊರತೆಯನ್ನು ಗುರುತಿಸಿದೆ. ಅಲ್ಲದೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉದ್ಯೋಗ ಮೀಸಲಾತಿ ಸೇರಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ.

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ
ಸಾಂದರ್ಭಿಕ ಚಿತ್ರImage Credit source: AI Image
ಪ್ರಸನ್ನ ಹೆಗಡೆ
|

Updated on: May 01, 2026 | 3:33 PM

Share

ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ.

ವಿದ್ಯಾರ್ಥಿಗಳ ಅನುತ್ತೀರ್ಣಕ್ಕೆ ಕಾರಣವೇನು?

ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮಗಳ ನಡುವಿನ ಏಕರೂಪತೆಯ ಕೊರತೆ, ಶಿಕ್ಷಣದ ವಿವಿಧ ಹಂತಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಿರುವುದು, ಪ್ರಾಥಮಿಕ ಹಂತದಿಂದಲೇ ಕಲಿಕೆ ಫಲಿತಾಂಶ ಅಳೆಯುವ ಪರೀಕ್ಷೆಗಳ ಕೊರತೆ, ಕನ್ನಡದಲ್ಲಿ ಸಾಧನೆ ಮಾಡುವವರಿಗೆ ಪ್ರೋತ್ಸಾಹ ಸಿಗದಿರುವುದು, ಭಾಷಾ ಕಲಿಕೆಗೆ ಅನುಕೂಲಕರವಲ್ಲದ ಪಠ್ಯಪುಸ್ತಕಗಳೇ ವಿದ್ಯಾರ್ಥಿಗಳ ಅನುತ್ತೀರ್ಣತೆಗೆ ಪ್ರಮುಖ ಕಾರಣಗಳೆಂದು ವರದಿ ಹೇಳಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ!

ಸಮಿತಿಯ ಶಿಫಾರಸುಗಳೇನು?

  • ತ್ರಿ ಭಾಷಾ ನೀತಿ ರದ್ದುಗೊಳಿಸಿ ದ್ವಿಭಾಷಾ ನೀತಿ ಅನುಸರಿಸುವುದು
  • ಪ್ರಾಥಮಿಕ ಹಂತದಿಂದಲೇ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪಾರಂಗತತೆ ಕಲ್ಪಿಸುವುದು
  • ಭಾಷಾ ಪರಿಣತಿ, ತರಬೇತಿ ಹೊಂದಿದ ಶಿಕ್ಷಕರ ನೇಮಕ
  • ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಆದ್ಯತೆ
  • ವಿಷಯಾಧಾರಿತ ಪಠ್ಯಗಳ ಬದಲು ಭಾಷಾ ಕಲಿಕೆಗೆ ಒತ್ತು ನೀಡುವ ಪಠ್ಯಪುಸ್ತಕ ರಚನೆ

ಡಾ. ನಿರಂಜನಾರಾಧ್ಯ ವಿ.ಪಿ ನೇತೃತ್ವದ ಸಮಿತಿ ಕಳೆದ 10 ವರ್ಷಗಳ ಅಂಕಿ-ಅಂಶಗಳನ್ನು ಪರಿಶೀಲಿಸಿ, ರಾಜ್ಯದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸ್ಥಿತಿಯನ್ನು ಅಧ್ಯಯನ ಮಾಡಿ ಈ ಶಿಫಾರಸುಗಳನ್ನು ನೀಡಿದೆ. ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ‘ಕನ್ನಡದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿರುವ ಕಾರಣಗಳು ಮತ್ತು ಅಗತ್ಯ ಸುಧಾರಣೆಗಳು’ ಕುರಿತ ವರದಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ