AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದೆ. ಜನವರಿ 27 ರಿಂದ ಫೆಬ್ರವರಿ 2ರ ವರೆಗೆ ನಡೆಯುವ ದ್ವಿತೀಯ ಪೂರ್ವಸಿದ್ಧತಾ ಪರೀಕ್ಷೆಗಳು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿವೆ. ಪ್ರಶ್ನೆಪತ್ರಿಕೆ ಡೌನ್‌ಲೋಡ್, ಮುದ್ರಣ ಮತ್ತು ವಿತರಣೆಗೆ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸೋರಿಕೆ ಪ್ರಕರಣಗಳಲ್ಲಿ ಮುಖ್ಯಶಿಕ್ಷಕರು ಸೇರಿದಂತೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on: Jan 20, 2026 | 12:55 PM

Share

ಬೆಂಗಳೂರು, ಜನವರಿ 20: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಎಚ್ಚೆತ್ತ ಶಿಕ್ಷಣ ಇಲಾಖೆ ಮುಂದಿನ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ಇನ್ನು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್‌ನಿಂದ ಬೆಳಿಗ್ಗೆ 9.30ಕ್ಕೆ ಡೌನ್‌ಲೋಡ್ ಮಾಡಬೇಕು. ಬಳಿಕ 10 ಗಂಟೆಯೊಳಗೆ ಅವನ್ನು ಮುದ್ರಿಸಬೇಕು. ಅಲ್ಲದೆ ಬೆಳಿಗ್ಗೆ 10.50ಕ್ಕಿಂತ ಮುಂಚಿತವಾಗಿ ಪರೀಕ್ಷಾ ಹಾಲ್‌ಗೆ ಕಳುಹಿಸಬಾರದು ಎಂದು ಸೂಚಿಸಲಾಗಿದೆ. ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯ ಘಟನೆ ನಡೆದರೆ, ಸಂಬಂಧಿತ ಶಾಲೆಯ ಮುಖ್ಯಶಿಕ್ಷಕ, ನೋಡಲ್ ಶಿಕ್ಷಕ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್‌ಐಆರ್ ದಾಖಲಾಗಲಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಇದನ್ನೂ ಓದಿ: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್; ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್

ಕಳೆದ ವಾರ ನಡೆದ SSLC ಪೂರ್ವಭಾವಿ ಪರೀಕ್ಷೆಯಲ್ಲಿ ಗಣಿತ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು. ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಪ್ರಶ್ನೆಪತ್ರಿಕೆ ವೈರಲ್ ಆಗಿದ್ದು, ಕೃತ್ಯವನ್ನು ಹಲವು ಶಾಲೆಗಳೇ ಎಸಗಿದ್ದವು. ಪರೀಕ್ಷೆಗೆ ಮೂರು ಗಂಟೆಗಳಿಗೂ ಮುನ್ನ ಪ್ರಶ್ನೆ ಪತ್ರಿಕೆಗಳ ಫೋಟೋ ಪ್ರತಿಯನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು. ಅಲ್ಲದೆ ಪ್ರಶ್ನೆ ಪತ್ರಿಕೆ ಮಾರಾಟಕ್ಕಾಗಿ ಇನ್‌ಸ್ಟಾಗ್ರಾಂನಲ್ಲಿ ‘ಡೆಲ್ಟಾ ಹ್ಯಾಕರ್‌ 32’ ಹಾಗೂ ‘ಡೆಲ್ಟಾ ಹ್ಯಾಕರ್‌’ ಸೇರಿದಂತೆ 8ಕ್ಕೂ ಅಧಿಕ ಖಾತೆಗಳನ್ನು ತೆರೆದಿರೋದು ಕೂಡ ಬೆಳಕಿಗೆ ಬಂದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್