ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

II PU 2nd Supplementary Exam: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯೂ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ನಿಗದಿಯಂತೆ ಆಗಸ್ಟ್​ 21ರಿಂದ ಸೆಪ್ಟೆಂಬರ್​ 2ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್​​ಟಿಸಿ ನಿಗಮವು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 12, 2023 | 5:33 PM

ಬೆಂಗಳೂರು, ಆಗಸ್ಟ್​ 12: ಆಗಸ್ಟ್​ 21ರಿಂದ ಸೆಪ್ಟೆಂಬರ್​ 2ರವರೆಗೆ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ (II PU 2nd Supplementary Exam) ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್​​ಟಿಸಿ ನಿಗಮವು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಕುರಿತಾಗಿ ಕೆಎಸ್​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶಪತ್ರ ತೋರಿಸು ಮೂಲಕ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 17 2023 ರಂದು ನಡೆಸಲಾಗಿತ್ತು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್​ ಆಗಸ್ಟ್ 01 ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 12 ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತ್ತು.

ಇದನ್ನೂ ಓದಿ: CBSE 12th Supplementary Result: ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ 2023 ಪ್ರಕಟ; ಪರಿಶೀಲಿಸಲು ನೇರ ಲಿಂಕ್

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹತೆ ಪಡೆದಿರುತ್ತಾರೆ.

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.  

  • ಆ. 21ರಂದು ಕನ್ನಡ, ಅರೇಬಿಕ್
  • ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್
  • ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  • ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್
  • ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್
  • ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್
  • ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್
  • ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್
  • ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್
  • ಆ. 31 ಹಿಂದಿ
  • ಸೆಪ್ಟೆಂಬರ್.​ 1ರಂದು ಎಕನಾಮಿಕ್ಸ್, ಬಯಾಲಜಿ
  • ಸೆ. 2ರಂದು ತಮಿಳ್, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?