AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿವಿಗಳ ವಿದ್ಯಾರ್ಥಿಗಳಿಗೆ ಲಂಡನ್ ಭಾಗ್ಯ: ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ

ಇತ್ತೀಚಿನ ದಿನಗಳಲ್ಲಿ ನಗರಗಳಿಗೆ ತೆರಳಿ ಉನ್ನತ ಶಿಕ್ಷಣ ಪಡಯುವುದೇ ಸವಾಲು ಎನ್ನುವಂತಾಗಿದೆ. ಇನ್ನು ಬಡ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಶಿಕ್ಷಣ ಪಡೆಯುವುದಂತೂ ಮರಿಚೀಕೆ. ಆದರೆ, ಇನ್ನುಮುಂದೆ ಬಡ ಮಕ್ಕಳ ಕನಸು ನನಸು ಮಾಡಲು ಸರ್ಕಾರ ಮುಂದಾಗಿದೆ. ಅದ್ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ವಿವಿಗಳ ವಿದ್ಯಾರ್ಥಿಗಳಿಗೆ ಲಂಡನ್ ಭಾಗ್ಯ: ಸರ್ಕಾರದ ವತಿಯಿಂದ ಈಸ್ಟ್ ಲಂಡನ್ ವಿವಿಗೆ ಶೈಕ್ಷಣಿಕ ಪ್ರವಾಸ
ಲಂಡನ್ ಪ್ರವಾಸ ತೆರಳುವುದಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸಚಿವ ಡಾ. ಎಂಸಿ ಸುಧಾಕರ್ ಜತೆಗೆ
Vinay Kashappanavar
| Edited By: |

Updated on: Nov 09, 2024 | 11:04 AM

Share

ಬೆಂಗಳೂರು, ನವೆಂಬರ್ 9: ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಹಾಗೂ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಬ್ರಿಟಿಷ್ ಕೌನ್ಸಿಲ್​ನೊಂದಿಗೆ ಮಾಡಿಕೊಂಡಿರುವ ಶೈಕ್ಷಣಿಕ ಒಪ್ಪಂದದ ಹಿನ್ನೆಲೆಯಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಅಲ್ಲಿನ ಕಲಿಕೆ, ಬೊಧನ ಶೈಲಿ ಹಾಗೂ ಹೊಸ ಕಲಿಕಾ ಮಾದರಿಗಳ ಪರಿಚಯ ಪಡೆಯುವುದರೊಂದಿಗೆ ಹೆಚ್ಚುವರಿ ಶಿಕ್ಷಣ ಪಡೆದಕೊಳ್ಳಲಿದ್ದಾರೆ.

ಅಷ್ಟೇ ಅಲ್ಲದೆ, ಕರ್ನಾಟಕದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕೂಡಾ ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ ಪ್ರವಾಸ ಯಶಸ್ವಿಯಾದರೆ ಮುಂದಿನ ವರ್ಷದಿಂದ ರಾಜ್ಯದ ವಿವಿಗಳಿಗೆ ಪ್ರತಿ ವರ್ಷ ವಿದೇಶಿ ಪ್ರವಾಸ ಹಾಗೂ ಕಲಿಕಾ ಚಟುವಟಿ ಖಾತರಿಯಾಗಲಿದೆ.

ವಿವಿ ವಿದ್ಯಾರ್ಥಿಗಳ ಭವಿಷ್ಯದ ಕಲಿಕೆಯ ದೃಷ್ಟಿಯಿಂದ ಈ ಅಂತಾರಾಷ್ಟ್ರೀಯ ಪ್ರವಾಸ ಹಾಗೂ ಕಲಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಈಸ್ಟ್ ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯ ವಿವರಗಳ ಕುರಿತು ಉನ್ನತ ಶಿಕ್ಷಣ ಸಚಿವರಾದ ಡಾ. ಎಂಸಿ ಸುಧಾಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಆರು ವಿಶ್ವವಿದ್ಯಾಲಯಗಳ 30 ವಿದ್ಯಾರ್ಥಿಗಳು ಹಾಗೂ ಆರು ಮಂದಿ ಆಧ್ಯಾಪಕರು ಯುನೈಟೆಡ್ ಕಿಂಗ್​ಡಂನ ಈಸ್ಟ್ ಲಂಡನ್ ವಿಶ್ವವಿದ್ಯಾಲಯ ತೆರಳಿರುವುದು ವಿದ್ಯಾರ್ಥಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಈ ಬಗ್ಗೆ ವಿದ್ಯಾರ್ಥಿನಿ ನಂದಿನಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ವಿನೂತನ ಕೆಲಸ

ಒಟ್ಟಿನಲ್ಲಿ ರಾಜ್ಯದ ಸರ್ಕಾರಿ ವಿವಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಈ ವಿದೇಶಿ ಪ್ರವಾಸ ಹಾಗೂ ಹೆಚ್ಚುವರಿ ಕಲಿಕೆ ಸಾಕಷ್ಟು ಮಹತ್ವವನ್ನ ಪಡೆದುಕೊಂಡಿದೆ. ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vinay Kashappanavar
Vinay Kashappanavar
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು