AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 22, 2021 | 9:55 PM

Share

ಬೆಂಗಳೂರು: ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಹೆಲ್ತ್​​ಸೈನ್ಸ್​​ಗೆ ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಕಚೇರಿಯ ಮುಂದೆ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಇಂದು ದಾಖಲೆಗಳ ಪರಿಶೀಲನೆ ಕರೆಯಲಾಗಿತ್ತು. ಎಲ್ಲ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕಷ್ಟ ಸಾಧ್ಯ ಆಗಿದೆ. ಮುಂಜಾನೆ 6 ಗಂಟೆಯಿಂದ ಕಾಯುತ್ತಿದ್ದರೂ ಪರಿಶೀಲನೆ ಕಾರ್ಯ ಆಗಿಲ್ಲ. ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆ ಮಣಿದು ನಿರ್ಧಾರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆ ಹಿನ್ನೆಲೆ ಎಡವಟ್ಟಿನ ನಿರ್ಧಾರ ಕೈಬಿಟ್ಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಆಯಾ ಜಿಲ್ಲಾ ಕೇಂದ್ರಗಳಲ್ಲೇ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಲು ತೀರ್ಮಾನಿಸಿದೆ.

ನಾಳೆಯಿಂದ ಮೂರು ದಿನಗಳ ಕಾಲ ದಾಖಲೆಗಳ‌ ಪರಿಶೀಲನೆ ನಡೆಸಲಾಗುತ್ತದೆ. ಸ್ಥಳದ ಕುರಿತು ಸದ್ಯದಲ್ಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಪ್ರಾಧಿಕಾರ ನಿರ್ವಹಣಾ ನಿರ್ದೇಶಕಿ ರಮ್ಯಾ ಹೇಳಿಕೆ ನೀಡಿದ್ದಾರೆ. ಊರುಗಳಿಗೆ ತೆರಳಿ ಅಂತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸೂಚನೆ ಕೊಟ್ಟಿದ್ದಾರೆ. ದಾಖಲೆ ಪರಿಶೀಲನೆಗೆ ಏಕಕಾಲಕ್ಕೆ ಆಹ್ವಾನಿಸಿದ್ದ ಕೆಇಎ ಈಗ ನಿರ್ಧಾರ ಬದಲಾಯಿಸಿದೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಪ್ರತಿಭಟನೆ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಕೋಲಾರ ನಗರದ ಕಾಲೇಜು ಸರ್ಕಲ್​ನಲ್ಲಿ ವಿಭಿನ್ನ ಧರಣಿ ಮಾಡಲಾಗಿದೆ. ಬೂಟ್ ಪಾಲಿಷ್, ಬಜ್ಜಿ ಬೋಂಡಾ, ಟೀ ಮಾರಿ ಪ್ರತಿಭಟನೆ ನಡೆಸಲಾಗಿದೆ. ಕಾಯಂಗೊಳಿಸಿ ಅಥವಾ ವಜಾಮಾಡಿ ಎಂದು ಪ್ರತಿಭಟನೆ ಮಾಡಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ‌ ಅತಿಥಿ ಉಪನ್ಯಾಸಕರು ಆಕ್ರೋಶ ಹೊರಹಾಕಿದ್ದಾರೆ.

ಕುಣಿಗಲ್​ನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್​​ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರನ್ನ ನೇಮಿಸುವಂತೆ ವಿದ್ಯಾರ್ಥಿಗಳೇ ಒತ್ತಾಯ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕಿ ಅಸ್ವಸ್ಥ

Published On - 8:54 pm, Wed, 22 December 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​