AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 22, 2021 | 9:55 PM

Share

ಬೆಂಗಳೂರು: ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಹೆಲ್ತ್​​ಸೈನ್ಸ್​​ಗೆ ಕೌನ್ಸೆಲಿಂಗ್ ದಾಖಲೆ ಪರಿಶೀಲನೆ ದಿನಾಂಕ ದಿಢೀರ್ ಬದಲಾವಣೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಕಚೇರಿಯ ಮುಂದೆ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಿಇಟಿ ಬೋರ್ಡ್ ಕಚೇರಿ ಮುಂದೆ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಧರಣಿ ಹಿನ್ನೆಲೆ ಕಚೇರಿ ಬಳಿ ಪೊಲೀಸ್ ಭದ್ರತೆ ನೀಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

ಇಂದು ದಾಖಲೆಗಳ ಪರಿಶೀಲನೆ ಕರೆಯಲಾಗಿತ್ತು. ಎಲ್ಲ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕಷ್ಟ ಸಾಧ್ಯ ಆಗಿದೆ. ಮುಂಜಾನೆ 6 ಗಂಟೆಯಿಂದ ಕಾಯುತ್ತಿದ್ದರೂ ಪರಿಶೀಲನೆ ಕಾರ್ಯ ಆಗಿಲ್ಲ. ಕೊನೆಗೆ ವಿದ್ಯಾರ್ಥಿಗಳ ಪ್ರತಿಭಟನೆ ಮಣಿದು ನಿರ್ಧಾರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರತಿಭಟನೆ ಹಿನ್ನೆಲೆ ಎಡವಟ್ಟಿನ ನಿರ್ಧಾರ ಕೈಬಿಟ್ಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಆಯಾ ಜಿಲ್ಲಾ ಕೇಂದ್ರಗಳಲ್ಲೇ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸಲು ತೀರ್ಮಾನಿಸಿದೆ.

ನಾಳೆಯಿಂದ ಮೂರು ದಿನಗಳ ಕಾಲ ದಾಖಲೆಗಳ‌ ಪರಿಶೀಲನೆ ನಡೆಸಲಾಗುತ್ತದೆ. ಸ್ಥಳದ ಕುರಿತು ಸದ್ಯದಲ್ಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಪರೀಕ್ಷಾ ಪ್ರಾಧಿಕಾರ ನಿರ್ವಹಣಾ ನಿರ್ದೇಶಕಿ ರಮ್ಯಾ ಹೇಳಿಕೆ ನೀಡಿದ್ದಾರೆ. ಊರುಗಳಿಗೆ ತೆರಳಿ ಅಂತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸೂಚನೆ ಕೊಟ್ಟಿದ್ದಾರೆ. ದಾಖಲೆ ಪರಿಶೀಲನೆಗೆ ಏಕಕಾಲಕ್ಕೆ ಆಹ್ವಾನಿಸಿದ್ದ ಕೆಇಎ ಈಗ ನಿರ್ಧಾರ ಬದಲಾಯಿಸಿದೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಪ್ರತಿಭಟನೆ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಕೋಲಾರ ನಗರದ ಕಾಲೇಜು ಸರ್ಕಲ್​ನಲ್ಲಿ ವಿಭಿನ್ನ ಧರಣಿ ಮಾಡಲಾಗಿದೆ. ಬೂಟ್ ಪಾಲಿಷ್, ಬಜ್ಜಿ ಬೋಂಡಾ, ಟೀ ಮಾರಿ ಪ್ರತಿಭಟನೆ ನಡೆಸಲಾಗಿದೆ. ಕಾಯಂಗೊಳಿಸಿ ಅಥವಾ ವಜಾಮಾಡಿ ಎಂದು ಪ್ರತಿಭಟನೆ ಮಾಡಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ‌ ಅತಿಥಿ ಉಪನ್ಯಾಸಕರು ಆಕ್ರೋಶ ಹೊರಹಾಕಿದ್ದಾರೆ.

ಕುಣಿಗಲ್​ನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರನ್ನು ನೇಮಿಸುವಂತೆ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್​​ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರನ್ನ ನೇಮಿಸುವಂತೆ ವಿದ್ಯಾರ್ಥಿಗಳೇ ಒತ್ತಾಯ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು

ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕಿ ಅಸ್ವಸ್ಥ

Published On - 8:54 pm, Wed, 22 December 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ