AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Results 2025: ಸಮಾಜ ವಿಜ್ಞಾನದಲ್ಲಿ ಫೇಲ್​​ ಆದ ಟಾಪರ್​​; ಮರುಮೌಲ್ಯಮಾಪನದ ಬಳಿಕ ಬಂತು 96 ಅಂಕ

10ನೇ ತರಗತಿಯ ವಿದ್ಯಾರ್ಥಿನಿ ತೇಜಸ್ವಿನಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರೂ ಕೂಡ, ಸಮಾಜ ವಿಜ್ಞಾನದಲ್ಲಿ 23 ಅಂಕಗಳನ್ನು ಪಡೆದು ಅನುತ್ತೀರ್ಣಳಾಗಿದ್ದಳು. ಇದರಿಂದಾಗಿ ಕುಸಿದು ಹೋಗಿದ್ದ ಬಾಲಕಿಗೆ ಪೋಷಕರು ಧೈರ್ಯ ಹೇಳಿ ಮರುಮೌಲ್ಯಮಾಪನಕ್ಕೆ ಕಳುಹಿಸಿದ್ದಾರೆ. ಇದೀಗ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು 96 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾಳೆ.

SSLC Results 2025: ಸಮಾಜ ವಿಜ್ಞಾನದಲ್ಲಿ ಫೇಲ್​​ ಆದ ಟಾಪರ್​​; ಮರುಮೌಲ್ಯಮಾಪನದ ಬಳಿಕ ಬಂತು 96 ಅಂಕ
Re Evaluation
Follow us
ಅಕ್ಷತಾ ವರ್ಕಾಡಿ
|

Updated on:May 28, 2025 | 10:33 AM

ಆಂಧ್ರಪ್ರದೇಶ: ಕಷ್ಟ ಪಟ್ಟು ಓದಿ ಎಲ್ಲಾ ವಿಷಯಗಳಲ್ಲಿಯೂ ಫುಲ್​​ ಅಂಕ ಪಡೆಯುವ ಮೂಲಕ ಟಾಪರ್​ ಆಗುವ ಕನಸು ಕಂಡಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷಾ ಫಲಿತಾಂಶ ಕಂಡು ಶಾಕ್​ ಆಗಿದೆ. ಟಾಪರ್​ ಆಗಬೇಕಿದ್ದ ಬಾಲಕಿ ಸಮಾಜ ವಿಜ್ಞಾನದಲ್ಲಿ ಫೇಲ್ ಆಗಿದ್ದಾಳೆ. ಬಳಿಕ ಮರುಮೌಲ್ಯಮಾಪನಕ್ಕೆ ಕಳುಹಿಸಿದ್ದು ಇದೀಗ 96 ಅಂಕಗಳನ್ನು ಪಡೆದುಕೊಂಡಿದ್ದಾಳೆ. ಮೌಲ್ಯಮಾಪಕರ ನಿರ್ಲಕ್ಷ್ಯಕ್ಕೆ ಬಾಲಕಿಯ ಪೋಷಕರು ಸೇರಿದಂತೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ತೇಜಸ್ವಿನಿ.

ಐದು ವಿಷಯಗಳಲ್ಲಿ 90 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದ ತೇಜಸ್ವಿನಿ ಸಮಾಜ ವಿಜ್ಞಾನದಲ್ಲಿ ಅನುತ್ತೀರ್ಣಳಾಗಿದ್ದಾಳೆ. ಸಮಾಜ ವಿಜ್ಞಾನದಲ್ಲಿ ಕೇವಲ 23 ಅಂಕಗಳನ್ನು ಕಂಡು ಈಕೆ ಕುಸಿದು ಹೋಗಿದ್ದಾಳೆ. ಮಗಳ ಸ್ಥಿತಿ ಕಂಡು ಪೋಷಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದು, ಬಳಿಕ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಇತ್ತೀಚಿಗಷ್ಟೇ ಮರುಮೌಲ್ಯಮಾಪನದ ಫಲಿತಾಂಶ ಹೊರ ಬಿದಿದ್ದು, ಫೇಲ್​​ ಆದ ತೇಜಸ್ವಿನಿ 96 ಅಂಕಗಳನ್ನು ಪಡೆಯುವ ಮೂಲಕ ಟಾಪರ್​​ ಆಗಿ ಮಿಂಚಿದ್ದಾಳೆ. ಇದೀಗ ಆಕೆಗೆ 575 ಅಂಕಗಳು ಬಂದಿವೆ.

ಇದನ್ನೂ ಓದಿ: ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್​ ಬಂದ ಇಬ್ಬರು ‌ವಿದ್ಯಾರ್ಥಿನಿಯರು: ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ತಪ್ಪಿದ ಅವಕಾಶ:

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ, ಮೊದಲು ಅನುತ್ತೀರ್ಣ ಅಂಕಗಳನ್ನು ನೀಡಲಾಯಿತು, ಮತ್ತು ನಂತರ ಮರುಮೌಲ್ಯಮಾಪನದಲ್ಲಿ 96 ಅಂಕಗಳನ್ನು ನೀಡಲಾಯಿತು. ಈ ಮಧ್ಯೆ, ಟ್ರಿಪಲ್ ಐಟಿಗೆ ಅರ್ಜಿ ಸಲ್ಲಿಸುವ ಗಡುವು ಮುಗಿದಿದೆ ಎಂದು ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈ ಅಂಕಗಳೊಂದಿಗೆ ಅವಳಿಗೆ ಸೀಟು ಸಿಗುವ ಅವಕಾಶವಿದೆ ಎಂದು ನಂಬಿರುವ ಶಿಕ್ಷಕರು, ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Wed, 28 May 25

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ