AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳೇ ಪರೀಕ್ಷೆಯ ದಿನ ಈ ಕೆಲವು ವಿಚಾರಗಳು ನಿಮಗೆ ತಿಳಿದಿರಲಿ!

ಶಾಲಾ ಮಕ್ಕಳಿಗೆ ಇನ್ನೇನು ಕೆಲವೇ ತಿಂಗಳಿನಲ್ಲಿಯೇ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳು ಹತ್ತಿರ ಬರುತ್ತಿದ್ದಂತೆ ಪೋಷಕರ ಜವಾಬ್ದಾರಿಯು ಹೆಚ್ಚಾಗುತ್ತದೆ. ಕೆಲವೊಮ್ಮೆ ಮಕ್ಕಳು ಸ್ವಇಚ್ಛೆಯಿಂದ ಓದದೇ ಇರಬಹುದು. ಈ ಸಮಯದಲ್ಲಿ ಫೋಷಕರೆ ಮಕ್ಕಳ ಹಿಂದೆ ಬಿದ್ದು ಓದಿಸಬೇಕಾಗುತ್ತದೆ. ಓದಿನ ಪೂರ್ವ ತಯಾರಿಗೆ ಸಂಬಂಧ ಪಟ್ಟ ಟೈಮ್ ಟೇಬಲ್ ಜೊತೆಗೆ ಪರೀಕ್ಷಾ ಸಮಯದಲ್ಲಿ ಒತ್ತಡಕ್ಕೆ ಬೀಳದೆ ಎಲ್ಲವನ್ನು ಆರಾಮದಾಯಕವಾಗಿ ನಿಭಾಯಿಸುವುದು ಮುಖ್ಯ.

ವಿದ್ಯಾರ್ಥಿಗಳೇ ಪರೀಕ್ಷೆಯ ದಿನ ಈ ಕೆಲವು ವಿಚಾರಗಳು ನಿಮಗೆ ತಿಳಿದಿರಲಿ!
Few tips on exam dayImage Credit source: Pinterest
ಸಾಯಿನಂದಾ
| Edited By: |

Updated on: Feb 13, 2024 | 7:55 PM

Share

ಎಕ್ಸಾಂ ಎಂದರೆ ಎಲ್ಲಾ ಮಕ್ಕಳಿಗೆ ಭಯ ಸಹಜ. ಎಷ್ಟೇ ಓದಿದ್ದರೂ ಹೇಗೆ ಇರುತ್ತದೆಯೋ ಎನ್ನುವ ಭಯವೊಂದು ಕಾಡುತ್ತಿರುತ್ತದೆ. ಮಕ್ಕಳಿಗೆ ಧೈರ್ಯತುಂಬುವ ಬದಲು ಅದಕ್ಕಿಂತ ಹೆಚ್ಚು ಪೋಷಕರು ಹೆದರಿಕೊಳ್ಳುತ್ತಾರೆ. ಈ ಬಾರಿಯ ಪರೀಕ್ಷೆಯಲ್ಲಿಯಾದರೂ ಒಳ್ಳೆಯ ಅಂಕ ಗಳಿಸಲಿ ಎಂದು ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ. ಆದರೆ ಪೋಷಕರು ಮಕ್ಕಳ ಮೇಲೆ ಒತ್ತಡವನ್ನು ಹಾಕದೇ, ಆ ಸಮಯದಲ್ಲಿ ಅವರ ಜೊತೆಗೆ ನಿಲ್ಲಬೇಕಾಗುತ್ತದೆ. ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನ ನೀಡುವುದರ ಮಕ್ಕಳಿಗೆ ಆರಾಮದಾಯಕವಾಗಿ ಪರೀಕ್ಷೆಯನ್ನು ಬರೆಯಲು ಸಿದ್ಧಗೊಳಿಸಬೇಕು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಂಪಲ್ ಟಿಪ್ಸ್:

  1. ಪರೀಕ್ಷೆಯ ದಿನದಂದು ಹಾಲ್ ಟಿಕೆಟ್, ಕಾಲೇಜ್ ಐಡಿ ಕಾರ್ಡ್ ನೆನಪಿನಲ್ಲಿ ತೆಗೆದುಕೊಂಡು ಹೋಗುವುದು ಮುಖ್ಯ.
  2. ಪರೀಕ್ಷೆ ಬರೆಯಲು ಬೇಕಾದ ಪೆನ್ಸಿಲ್, ರಬ್ಬರ್, ಪೆನ್ ಸೇರಿದಂತೆ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಿಕೊಳ್ಳಿ.
  3. ಪರೀಕ್ಷೆಯ ದಿನ ರಿಜಿಸ್ಟರ್ ನಂಬರ್ ಬರೆದ ಜಾಗವನ್ನು ಪರೀಕ್ಷೆ ಆರಂಭವಾಗುವ ಮೊದಲೇ ಪರಿಶೀಲಿಸಿಕೊಳ್ಳಿ. ಬೆಲ್ ಆದ ಕೂಡಲೇ ಪರೀಕ್ಷಾ ಕೊಠಡಿಯೊಳಗೆ ಹೋಗಿ.
  4. ಉತ್ತರ ಪತ್ರಿಕೆಯ ಮೇಲೆ ನಿಮ್ಮ ಹಾಲ್ ಟಿಕೆಟ್ ನಂಬರನ್ನು ತಪ್ಪಿಲ್ಲದೇ ಬರೆಯಿರಿ.
  5. ಪ್ರಶ್ನೆ ಪ್ರತ್ರಿಕೆಯನ್ನು ನೋಡಿ ಗಾಬರಿಯಾಗಬೇಡಿ. ಎಲ್ಲಾ ಪ್ರಶ್ನೆಗಳನ್ನು ಓದಿಕೊಂಡು, ಆ ಬಳಿಕ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸುವ ಅಭ್ಯಾಸವಿರಲಿ.
  6. ಗಡಿಬಿಡಿಯಲ್ಲಿ ಪ್ರಶ್ನೆಗಳನ್ನು ಸರಿಯಾಗಿ ಓದದೇ ಯಾವುದೋ ಉತ್ತರವನ್ನು ಬರೆಯಬೇಡಿ. ಒತ್ತಡವಿಲ್ಲದೇ ಆರಾಮದಾಯಕವಾಗಿ ಮೂರು ಗಂಟೆಗಳ ಪರೀಕ್ಷೆಯನ್ನು ಚೆನ್ನಾಗಿಯೇ ಬರೆಯಿರಿ.
  7. ಉತ್ತರ ಬರೆಯುವಾಗ ಪ್ರಶ್ನೆಗಳ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆಯಿರಿ. ಪ್ರಶ್ನೆಗಳ ಸಂಖ್ಯೆಯು ತಪ್ಪಾದರೆ ಅಂಕಗಳನ್ನು ಕಡಿತಗೊಳ್ಳಬಹುದು.
  8. ಉತ್ತರ ಗೊತ್ತಿದೆ ಎಂದು ಕಡಿಮೆ ಅಂಕದ ಪ್ರಶ್ನೆಗಳಿಗೆ ಪುಟಗಟ್ಟಲೇ ಉತ್ತರ ಬೇಡ. ಇದರಿಂದ ಸಮಯ ವ್ಯರ್ಥವಾಗಿ ಬೇರೆ ಪ್ರಶ್ನೆಗಳಿಗೆ ಉತ್ತರ ಬರೆಯಲು ಸಮಯವಿಲ್ಲದಂತಾಗುತ್ತದೆ.
  9. ಉತ್ತರ ಬರೆದ ಬಳಿಕ ರಿಜಿಸ್ಟರ್ ನಂಬರ್, ಹಾಗೂ ಪ್ರಶ್ನೆಗಳ ಸಂಖ್ಯೆಯೂ ಸರಿಯಾಗಿದೆ ಎಂದು ಖಾತರಿಪಡಿಸಿಕೊಳ್ಳಿ.
  10. ಪರೀಕ್ಷಾ ಕೊಠಡಿಯಿಂದ ಹೊರ ಬಂದ ಬಳಿಕ ಪರೀಕ್ಷೆಯಲ್ಲಿ ಬರೆದ ಉತ್ತರ ಬಗ್ಗೆ ಚರ್ಚೆ ಮಾಡಬೇಡಿ. ಮುಂದಿನ ಪರೀಕ್ಷೆಗೆ ತಯಾರಿ ನಡೆಸಿದರೆ ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ