AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG 2021: ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನೀಟ್ ಯುಜಿ 2021: 7.5 ಲಕ್ಷದಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿರುವ ಪರೀಕ್ಷೆಯ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ಐದು ಎಫ್​ಐಆರ್​ಗಳನ್ನು ಪರಿಗಣಿಸಿ ಈ ಅರ್ಜಿ ಪರಿಗಣಿಸಲು ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

NEET UG 2021: ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್​
TV9 Web
| Updated By: ganapathi bhat|

Updated on: Oct 04, 2021 | 5:18 PM

Share

ದೆಹಲಿ: ಈ ಬಾರಿಯ ನೀಟ್ ಯುಜಿ (National Eligibility cum Entrance Test undergraduate exam -NEET UG) ಪರೀಕ್ಷೆಯನ್ನು ರದ್ದುಗೊಳಿಸುವ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. 2021ರ ಸಪ್ಟೆಂಬರ್ 12 ರಂದು ನಡೆದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ನ್ಯಾ. ಎಲ್. ನಾಗೇಶ್ವರ ರಾವ್ ಹಾಗೂ ಬಿಆರ್ ಗವಾಯ್ ಅವರ ನ್ಯಾಯಪೀಠ ತಿರಸ್ಕರಿಸಿದೆ. ಈ ಅರ್ಜಿ ಸಲ್ಲಿಸಿರುವ ಬಗ್ಗೆ ನ್ಯಾಯವಾದಿಗಳನ್ನು ಪ್ರಶ್ನಿಸಿದೆ.

ಯಾವ ರೀತಿಯ ರಿಟ್ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ? ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ. 7.5 ಲಕ್ಷದಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿರುವ ಪರೀಕ್ಷೆಯ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ಐದು ಎಫ್​ಐಆರ್​ಗಳನ್ನು ಪರಿಗಣಿಸಿ ಈ ಅರ್ಜಿ ಪರಿಗಣಿಸಲು ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಪರೀಕ್ಷೆ ನಕಲು, ವಂಚನೆ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಸಿ ನೀಟ್ ಪರೀಕ್ಷಾರ್ಥಿ ಸಲೋನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕೂಡಲೇ ಸುಪ್ರೀಂ ಕೋರ್ಟ್ ಅಸಮ್ಮತಿಯನ್ನು ತೋರಿದೆ. ಈ ಅರ್ಜಿ ಸಲ್ಲಿಸಲು ಸಲಹೆ ನೀಡಿರುವ ನ್ಯಾಯವಾದಿಗೆ ಕೂಡ ದಂಡ ವಿಧಿಸುವುದಾಗಿ ಕೋರ್ಟ್ ಹೇಳಿದೆ. 5 ಲಕ್ಷ ರೂಪಾಯಿ ದಂಡ ವಿಧಿಸಿರುವ ಕೋರ್ಟ್, ಅದನ್ನು ಅರ್ಜಿದಾರನಿಂದ ಅಲ್ಲ, ಬದಲಾಗಿ ನ್ಯಾಯವಾದಿಗಳಿಂದ ಭರಿಸಬೇಕು ಎಂದೂ ಹೇಳಿದೆ.

ಅರ್ಜಿದಾರನನ್ನು ಪ್ರತಿನಿಧಿಸಿದ ವಕೀಲ ನಿನಾದ್ ಡೊಗ್ರ, ದಂಡ ವಿಧಿಸಬಾರದು ಎಂದು ಕೇಳಿಕೊಂಡಿದ್ದಾರೆ. ಆ ಬಳಿಕ, ಕೋರ್ಟ್ ದಂಡವನ್ನು ಹಿಂತೆಗೆದುಕೊಂಡಿದೆ. ಈ ಬಾರಿ ದಂಡ ಹಿಂತೆಗೆದುಕೊಳ್ಳಲಾಗಿದೆ. ಆದರೆ, ಮುಂದೆ ಇಂತಹ ಪ್ರಕರಣಗಳು ಇದ್ದರೆ ಖಂಡಿತಾ ದಂಡ ಹಾಕುತ್ತೇವೆ ಎಂದು ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಯಾರ ವಿರುದ್ಧ ನಿಮ್ಮ ಪ್ರತಿಭಟನೆ: ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆಯ ಔಚಿತ್ಯವನ್ನೇ ಪ್ರಶ್ನಿಸಿದ ಸುಪ್ರೀಂಕೋರ್ಟ್

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ