AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Result 2023: ಪಿಯುಸಿ ಮರು ಮೌಲ್ಯಮಾಪನದಲ್ಲಿ ಅಚ್ಚರಿ ಫಲಿತಾಂಶ: ವಿಶೇಷ ಚೇತನ ವಿದ್ಯಾರ್ಥಿ ರಾಜ್ಯಕ್ಕೆ ಫಸ್ಟ್

ಪಿಯುಸಿ ಮರು ಮೌಲ್ಯಮಾಪನದಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದ್ದು, ಮರು ಮೌಲ್ಯ ಮಾಪನದಲ್ಲಿ ಇಂದು ಪಿಯು ಕಾಲೇಜಿನ ವಿದ್ಯಾರ್ಥಿ ಕುಶು ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಗಂಗಾಧರ​ ಬ. ಸಾಬೋಜಿ
|

Updated on:May 19, 2023 | 1:58 PM

Share

ಬೆಂಗಳೂರು: ಪಿಯುಸಿ ಮರು ಮೌಲ್ಯಮಾಪನ (PUC re-evaluation) ದಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದ್ದು, ಮರು ಮೌಲ್ಯ ಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್​​ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ನನ್ನು ಹಿಂದಿಕ್ಕಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್​ ನಾಯ್ಕ್​ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಸತತ 8 ಬಾರಿ ಪ್ರಥಮ ರ‍್ಯಾಂಕ್‌ ಪಡೆದ ಕುಟ್ಟೂರು

ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಫಸ್ಟ್ ರಾಂಕ್​ ಬಂದಿದ್ದಾರೆ. ಇಂದು ಪಿಯು ಕಾಲೇಜಿನ ಇನೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು 593 ಅಂಕಗಳ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಈ ಮೂಲಕ ಸತತ ಎಂಟನೇ ಬಾರಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿಗೆ ಪ್ರಥಮ ಸ್ಥಾನ ಲಭಿಸಿದೆ.

ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ

ಈ ಬಾರಿ ಶೇ.74.64ರಷ್ಟು ವಿದ್ಯಾರ್ಥಿಗಳು ತೇರ್ಗಡೆ

2022–23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್​ 21 ರಂದು ಪ್ರಕಟವಾಗಿದೆ. ಮಾ. 9ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈ ಬಾರಿ ಶೇ.74.64ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 61.22%, ವಿಜ್ಞಾನ ವಿಭಾಗದಲ್ಲಿ 85.71%, ವಾಣಿಜ್ಯ ವಿಭಾಗದಲ್ಲಿ 75.89% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ

ಮರುಮೌಲ್ಯಮಾಪನಕ್ಕೆ ಅವಕಾಶ

ಈ ಹಿಂದೆ ಮರುಮೌಲ್ಯಮಾಪನದ ನಂತರ ಸುಮಾರು 6 ಅಂಕಗಳು ವ್ಯತ್ಯಾಸವಾಗಿದ್ದರೆ ಮಾತ್ರ ಅದನ್ನು ಪರಿಗಣಿಸಲಾಗುತ್ತಿತ್ತು. ಇದರಿಂದ ಅದೆಷ್ಟೋ ವಿದ್ಯಾರ್ಥಿಗಳು ಒಂದೆರಡು ಅಂಕಗಳ ವ್ಯತ್ಯಾಸದಿಂದ ಡಿಸ್ಟಿಂಕ್ಷನ್ (85% ಗಿಂತ ಮೇಲೆ) ಕಳೆದುಗೊಂಡಿದ್ದರು. ಆದರೆ ಈ ವರ್ಷದಿಂದ ಪಿಯು ವಿದ್ಯಾರ್ಥಿಗಳು 1 ಅಂಕ ಪಡೆಯಬೇಕಾದರೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:56 pm, Fri, 19 May 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!