AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪಿಜಿ ಸೀಟು ಹಂಚಿಕೆ ಆಪ್ಶನ್ ಎಂಟ್ರಿಗೆ ತಾಂತ್ರಿಕ ದೋಷ; ಅವಧಿ ವಿಸ್ತರಣೆ ಮಾಡುವಂತೆ ವೈದ್ಯಕೀಯ ವಿದ್ಯಾರ್ಥಿಗಳ ಪಟ್ಟು

ಈ ಬಾರಿ ಸರ್ವರ್ ಸಮಸ್ಯೆಯಿದ್ದರೂ ಕಾಲಾವಕಾಶ ನೀಡುತ್ತಿಲ್ಲ. ಹೀಗಾಗಿ ಅವಧಿ ವಿಸ್ತರಣೆ ಮಾಡುವಂತೆ ವೈದ್ಯಕೀಯ ವಿದ್ಯಾರ್ಥಿಗಳು ಪಟ್ಟು ಹಿಡಿದ್ದಾರೆ. ಆದರೆ ದಿನಾಂಕ ವಿಸ್ತರಣೆ ಸಾಧ್ಯವೇ ಇಲ್ಲ ಎಂದು ಕೆಇಎ ತಿಳಿಸಿದೆ.

ನೀಟ್ ಪಿಜಿ ಸೀಟು ಹಂಚಿಕೆ ಆಪ್ಶನ್ ಎಂಟ್ರಿಗೆ ತಾಂತ್ರಿಕ ದೋಷ; ಅವಧಿ ವಿಸ್ತರಣೆ ಮಾಡುವಂತೆ ವೈದ್ಯಕೀಯ ವಿದ್ಯಾರ್ಥಿಗಳ ಪಟ್ಟು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 24, 2022 | 10:10 PM

Share

ಬೆಂಗಳೂರು: ನೀಟ್( NEET)​ ಪಿಜಿ ಸೀಟು ಹಂಚಿಕೆ​ ಆಪ್ಶನ್​​ ಎಂಟ್ರಿಗೆ ತಾಂತ್ರಿಕ ದೋಷ ಎದುರಾಗಿದೆ. ಹೀಗಿದ್ದರೂ ಕಾಲಾವಕಾಶ ವಿಸ್ತರಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examinations Authority) ವಿರುದ್ಧ ಸದ್ಯ ವಿದ್ಯಾರ್ಥಿಗಳು(Students) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋರ್ಸ್, ಮೆಡಿಕಲ್ ಕಾಲೇಜು ಆಯ್ಕೆಗೆ ಕೆಇಎ ಕೇವಲ ಒಂದು ದಿನ ಮಾತ್ರ ಕಾಲಾವಕಾಶ ನೀಡಿದೆ. 24 ಗಂಟೆ ಅವಕಾಶ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡೆಗೆ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಅದರಂತೆ ಇಂದು ಬೆಳಿಗ್ಗೆ 11 ರಿಂದ ನಾಳೆ (ಜನವರಿ 25) ಬೆಳಗ್ಗೆ 11 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲಾವಕಾಶ ವಿಸ್ತರಿಸುವಂತೆ ಕೆಇಎಗೆ ವಿದ್ಯಾರ್ಥಿಗಳ ಮನವಿ

ಪುನಃ ನಾಳೆ ಸಂಜೆಯಿಂದ ಅಣುಕು ಸೀಟು ಹಂಚಿಕೆಯ ಫಲಿತಾಂಶ ಬರಲಿದೆ. ಇದರಿಂದಾಗಿ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆಯ ಬದಲಾವಣೆಗೂ ಒಂದೇ ದಿನ ಅವಕಾಶ ಇರಲಿದೆ. ಜನವರಿ 27 ರಂದು ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. ಪ್ರತಿ ವರ್ಷ ಕನಿಷ್ಠ 3 ದಿನಗಳ ಅಂತರ ಇರುತ್ತಿತ್ತು. ಈ ಬಾರಿ ಸರ್ವರ್ ಸಮಸ್ಯೆಯಿದ್ದರೂ ಕಾಲಾವಕಾಶ ನೀಡುತ್ತಿಲ್ಲ. ಹೀಗಾಗಿ ಅವಧಿ ವಿಸ್ತರಣೆ ಮಾಡುವಂತೆ ವೈದ್ಯಕೀಯ ವಿದ್ಯಾರ್ಥಿಗಳು ಪಟ್ಟು ಹಿಡಿದ್ದಾರೆ. ಆದರೆ ದಿನಾಂಕ ವಿಸ್ತರಣೆ ಸಾಧ್ಯವೇ ಇಲ್ಲ ಎಂದು ಕೆಇಎ ತಿಳಿಸಿದೆ. ಒಟ್ಟಾರೆ ಅತಂತ್ರ ಸ್ಥಿತಿಗೆ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ತಲುಪಿದೆ.

ಪಿಜಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

  • ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ – kea.kar.nic.in
  • ಅಲ್ಲಿ ಲಭ್ಯವಿರುವ Karnataka PGCET Counseling 2021 Round 1 allotment result ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಲಾಗಿನ್ ವಿವರಗಳನ್ನು ಸಲ್ಲಿಸಿ ಸಬ್​ಮಿಟ್ ಆಯ್ಕೆ ಕ್ಲಿಕ್ ಮಾಡಿ
  • ನಿಮ್ಮ ಫಲಿತಾಂಶವು ಪ್ರದರ್ಶಿತಗೊಳ್ಳುತ್ತದೆ
  • ಫಲಿತಾಂಶ ಪರಿಶೀಲಿಸಿ ಆ ಪುಟವನ್ನು ಡೌನ್​ಲೋಡ್ ಮಾಡಿಕೊಳ್ಳಿ
  • ಮುಂದಿನ ಹಂತಗಳಿಗಾಗಿ ಫಲಿತಾಂಶದ ಹಾರ್ಡ್ ಕಾಪಿ ಇಟ್ಟುಕೊಳ್ಳಿರಿ

ಪಿಜಿಸಿಇಟಿ ಫಲಿತಾಂಶ ಹಾಗೂ ಸೀಟು ಹಂಚಿಕೆಯನ್ನು ಪಿಜಿಸಿಇಟಿ ರ್ಯಾಂಕ್ ಆಧರಿಸಿ ನೀಡಲಾಗಿದೆ. ಹಾಗೂ ಆನ್​ಲೈನ್ Karnataka PGCET round 1 counselling application ನಲ್ಲಿ ನೀಡಿರುವ ಆಯ್ಕೆಯ ಅನ್ವಯಿಸಿಯೂ ಸೀಟು ಹಂಚಿಕೆ ಆಗಿದೆ. ಮತ್ತು ನಿಗದಿತ ಶಿಕ್ಷಣ ಸಂಸ್ತೆಗಳ ಸೀಟು ಲಭ್ಯತೆ ಹಾಗೂ ಕೋರ್ಸ್ ಅವಕಾಶ ಆಧರಿಸಿ ಸೀಟ್ ಲಭಿಸಲಿದೆ.

ಇದನ್ನೂ ಓದಿ:

NEET PG Counselling 2021: ನೀಟ್​ ಪಿಜಿ ಕೌನ್ಸಿಲಿಂಗ್ ರಿಜಿಸ್ಟ್ರೇಶನ್​ ಪ್ರಾರಂಭ​; ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ವಿಧಾನ ಹೀಗಿದೆ

Karnataka PGCET Counseling 2021: ಪಿಜಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Mon, 24 January 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ