ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ. ಹಾಗಾದ್ರೆ, ಯಾವೆಲ್ಲ ಪಠ್ಯಗಳಿಗೆ ಕತ್ತರಿ ಬೀಳಲಿದೆ ಎನ್ನುವ ವಿವರ ಇಲ್ಲಿದೆ.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?
Follow us
|

Updated on: Jun 15, 2023 | 9:31 AM

ಬೆಂಗಳೂರು: ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ(textbook revision) ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಪರಿಷ್ಕೃತಗೊಂಡ ಪಠ್ಯದಲ್ಲಿ ಸೇರ್ಪಡೆ ಮಾಡಲಾದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ್ ಹೆಗಡೆವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ವಿದ್ವಾಂಸರಾದ ಬನ್ನಂಜೆ ಗೋಂವಿದಾಚಾರ್ಯ ಅವರ ವಿಚಾರದ ಪಠ್ಯವನ್ನು ಸೇರಿದಂತೆ ಹಲವು ಪಠ್ಯಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಸಭೆಗಳನ್ನು ಮಾಡಿ ಶಿಕ್ಷಣ ಇಲಾಖೆ ಅಂತಿಮ ವರದಿಯನ್ನು ತಯಾರು ಮಾಡಿದೆ. ಹೀಗಾಗಿ ಸೂಲಿಬೆಲೆ, ಬನ್ನಂಜೆ ಗೋಂವಿದಾಚಾರ್ಯ ಮತ್ತು ಬಲಿರಾಮ್ ಹೆಗಡೆವಾರ್ ಪಠ್ಯಗಳಿಗೆ ಕತ್ತರಿ ಬೀಳುವ ಎಲ್ಲಾ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ. ಎನ್‌ಸಿಇಆರ್‌ಟಿ ಸೂಚನೆ ಮೇರೆಗೆ ನಾವು ಹಿಂದೆ ಬದಲಾವಣೆ ಮಾಡಿದ್ದೆವು. ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಒತ್ತಾಯಿಸಿದ್ದಾರೆ.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ