AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ

5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್
TV9 Web
| Edited By: Rakesh Nayak Manchi|

Updated on: Mar 12, 2024 | 6:30 PM

Share

ಬೆಂಗಳೂರು, ಮಾ.12: 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ (Board exam) ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಇದನ್ನೂ ಓದಿ: ಬೇಕೆ ಬೇಕು ಗ್ರೇಸ್​ ಮಾರ್ಕ್ಸ್​! ಫಿಸಿಕ್ಸ್ ಪರೀಕ್ಷೆಯಲ್ಲಿ ಪಿಯುಸಿ ಬೋರ್ಡ್ ಎಡವಿತಾ? ವಿದ್ಯಾರ್ಥಿಗಳು, ವಿಷಯ ತಜ್ಞರು ಹೇಳುವುದೇನು?

ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ, ವಾದ ಪ್ರತಿವಾದ ಆಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಪರೀಕ್ಷೆಗಳನ್ನು ಮುಂದೂಡಿದ ಶಿಕ್ಷಣ ಇಲಾಖೆ

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು