AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ

5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್; ಪರೀಕ್ಷೆಗಳು ಮುಂದೂಡಿಕೆ
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಬ್ರೇಕ್
TV9 Web
| Edited By: Rakesh Nayak Manchi|

Updated on: Mar 12, 2024 | 6:30 PM

Share

ಬೆಂಗಳೂರು, ಮಾ.12: 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ (Board exam) ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು.

ಇದನ್ನೂ ಓದಿ: ಬೇಕೆ ಬೇಕು ಗ್ರೇಸ್​ ಮಾರ್ಕ್ಸ್​! ಫಿಸಿಕ್ಸ್ ಪರೀಕ್ಷೆಯಲ್ಲಿ ಪಿಯುಸಿ ಬೋರ್ಡ್ ಎಡವಿತಾ? ವಿದ್ಯಾರ್ಥಿಗಳು, ವಿಷಯ ತಜ್ಞರು ಹೇಳುವುದೇನು?

ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ, ವಾದ ಪ್ರತಿವಾದ ಆಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಪರೀಕ್ಷೆಗಳನ್ನು ಮುಂದೂಡಿದ ಶಿಕ್ಷಣ ಇಲಾಖೆ

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ