AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಓದಿದ್ದೆಲ್ಲವೂ ಮರೆತು ಬಿಡಲು ಈ ರೀತಿಯ ಅಭ್ಯಾಸವೇ ಕಾರಣ, ಹೆತ್ತವರೇ ಒಮ್ಮೆ ಗಮನಿಸಿ

ಈಗಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಗ್ನಿಪರೀಕ್ಷೆ. ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದಂತೆ ಮಕ್ಕಳ ಪರೀಕ್ಷೆ ತಯಾರಿಯು ಜೋರಾಗಿಯೇ ಇರುತ್ತದೆ. ಈ ಸಮಯದಲ್ಲಿ ತಾಯಂದಿರು ಓದು ಓದು ಎಂದು ಮಕ್ಕಳ ಹಿಂದೆಯೇ ಸುತ್ತುತ್ತಿರುತ್ತಾರೆ. ಆದರೆ ಕೆಲವು ಮಕ್ಕಳಿಗೆ ಎಷ್ಟು ಓದಿದರೂ ನೆನಪಿನಲ್ಲಿ ಉಳಿಯುವುದೇ ಇಲ್ಲ. ಕೆಲ ಮಕ್ಕಳಂತೂ ಚೆನ್ನಾಗಿ ಓದಿಕೊಂಡಿದ್ದರೂ ಪ್ರಶ್ನೆ ಪತ್ರಿಕೆ ನೋಡಿದ ತಕ್ಷಣವೇ ಬ್ಲಾಂಕ್ ಆಗಿ ಬಿಡುತ್ತಾರೆ. ಓದಿದ್ದೆಲ್ಲವು ಮರೆತು ಹೋಗಲು ಕಾರಣಗಳು ಹಲವಾರಾಗಿದ್ದರೂ, ಆರಾಮದಾಯಕವಾಗಿ ಪರೀಕ್ಷೆ ಎದುರಿಸುವತ್ತ ಗಮನ ಹರಿಸಬೇಕು.

ಮಕ್ಕಳು ಓದಿದ್ದೆಲ್ಲವೂ ಮರೆತು ಬಿಡಲು ಈ ರೀತಿಯ ಅಭ್ಯಾಸವೇ ಕಾರಣ, ಹೆತ್ತವರೇ ಒಮ್ಮೆ ಗಮನಿಸಿ
ಸಾಯಿನಂದಾ
| Edited By: |

Updated on: Feb 22, 2024 | 6:00 PM

Share

ಮಾರ್ಚ್ ತಿಂಗಳು ಆರಂಭವಾಗುತ್ತಿದ್ದಂತೆ ಸಣ್ಣ ಮಕ್ಕಳಿಂದ ಹಿಡಿದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುತ್ತದೆ. ಈ ಸಮಯದಲ್ಲಿ ಪೂರ್ವ ತಯಾರಿಯು ಚೆನ್ನಾಗಿ ನಡೆಸಿದರೆ ಪರೀಕ್ಷೆಗೆ ಭಯ ಪಡಬೇಕಾದ ಅಗತ್ಯವಿಲ್ಲ. ಆದರೆ ಇತ್ತೀಚೆಗಿನ ದಿನಗಳಲ್ಲಿ ಪರೀಕ್ಷೆ ಎಂದರೆ ಹೆತ್ತವರ ಒತ್ತಡ ಹಾಗೂ ಸಂಬಂಧಿಕರು ಭಯ ಪಡಿಸುವುದು ಹೆಚ್ಚಾಗಿದೆ. ಒತ್ತಡದಿಂದ ಮಕ್ಕಳು ತಯಾರಿಯ ವೇಳೆ ಹಾಗೂ ಪರೀಕ್ಷೆ ಸಮಯದಲ್ಲಿ ಹೆದರಿಕೊಳ್ಳುತ್ತಾರೆ. ಕೆಲವರೂ ಚೆನ್ನಾಗಿ ಓದಿ ಕೊಂಡಿದ್ದರೂ ಪರೀಕ್ಷೆಯನ್ನು ಒಂದೆರಡು ಘಂಟೆಗಳ ಮುಂಚೆ ಓದಿದ ವಿಷಯಗಳು ನೆನಪಿಗೆ ಬರುವುದೇ ಇಲ್ಲ.

ಓದಿದ್ದೆಲ್ಲವೂ ಮರೆತು ಹೋಗಲು ಕಾರಣಗಳಿವು

* ಭಯ ಪಡುವುದು : ಪರೀಕ್ಷೆ ಎಂದರೇನೇ ಭಯ. ಈ ಸಮಯದಲ್ಲಿ ಕಡಿಮೆ ಅಂಕ ಬಂದರೆ, ಫೇಲ್ ಆದರೆ ಹೀಗೆ ನಾನಾ ರೀತಿಯ ಆಲೋಚನೆಗಳು ಓದುವ ಸಮಯದಲ್ಲಿ ಬರುತ್ತದೆ. ಹೀಗಾದಾಗ ಓದಿದ್ದೆಲ್ಲವು ನೆನಪಿನಲ್ಲಿ ಉಳಿಯುವುದೇ ಇಲ್ಲ. ಪರೀಕ್ಷೆ ಕೊಠಡಿಗೊಳಗೇ ಹೋದಾಗಲು ಮಕ್ಕಳಲ್ಲಿ ಭಯವೇ ಇದ್ದರೆ ಓದಿದ್ದೆಲ್ಲವು ನೆನಪಿಲ್ಲದ್ದಂತಾಗುತ್ತದೆ.

* ಬಾಯಿಪಾಠ ಮಾಡುವ ಅಭ್ಯಾಸ: ಹೆಚ್ಚಿನ ಮಕ್ಕಳು ವಿಷಯವು ಅರ್ಥವಾಗುವುದಿಲ್ಲ ಎಂದು ಇಲ್ಲವಾದರೆ ಓದಿದ್ದೆಲ್ಲವೂ ನೆನಪಿನಲ್ಲಿ ಉಳಿಯಬೇಕು ಎಂದು ಬಾಯಿಪಾಠ ಮಾಡುತ್ತಾರೆ. ಈ ರೀತಿಯಾಗಿ ಅಭ್ಯಾಸ ಮಾಡಿದರೆ ಓದಿದ್ದೆಲ್ಲವು ನೆನಪಿನಲ್ಲಿ ಉಳಿಯುವುದು ಕಷ್ಟ. ಹೀಗಾಗಿ ಓದುವ ಸಮಯದಲ್ಲಿ ವಿಷಯವನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿತರೆ ಒಳ್ಳೆಯದು.

* ಓದುವ ವೇಳೆ ಮೊಬೈಲ್ ಬಳಕೆ : ಇಂದಿನ ಮಕ್ಕಳಿಗೆ ಓದುವ ಸಮಯದಲ್ಲಿಯು ಮೊಬೈಲ್ ಹತ್ತಿರ ಇರಲೇಬೇಕು. ಓದುತ್ತ ಮೊಬೈಲ್ ನೋಡುವುದು, ಹೀಗೆ ಮೊಬೈಲ್ ಬಳಕೆ ಮಾಡುವುದರಿಂದ ಓದಿನ ಕಡೆಗೆ ಗಮನ ಕೊಡಲು ಸಾಧ್ಯವಾಗುವುದಿಲ್ಲ. ಹೀಗಾದಾಗ ಓದಿದ ಯಾವ ವಿಷಯವು ನೆನಪಿರದೆ ಮರೆತು ಬಿಡುತ್ತಾರೆ.

ಇದನ್ನೂ ಓದಿ: ದೇಶದ ಅಬಕಾರಿ ಇಲಾಖೆಯ ನೌಕರರ ಕೆಲಸವನ್ನು ಶ್ಲಾಘಿಸುವ ದಿನ

* ಮುಖ್ಯ ವಿಷಯಗಳನ್ನು ನೋಟ್ ಮಾಡಿಕೊಳ್ಳದೇ ಇರುವುದು : ಪರೀಕ್ಷಾ ಪೂರ್ವ ತಯಾರಿಯ ಸಮಯದಲ್ಲಿ ಬಹಳ ಮುಖ್ಯವಾದ ವಿಷಯಗಳನ್ನು ಬರೆದಿಟ್ಟುಕೊಳ್ಳಬೇಕು. ಓದಿದ್ದೆಲ್ಲವು ಮರೆತುಹೋದಾಗ ಟಿಪ್ಪಣಿ ಮಾಡಿಕೊಂಡ ಅಂಶಗಳನ್ನು ಗಮನಿಸಿದಾಗ ಆ ವಿಷಯಗಳನ್ನು ಮತ್ತೆ ನೆನಪಿಸಿಕೊಳ್ಳಬಹುದು.

ಇದನ್ನೂ ಓದಿ:

* ವಾತಾವರಣವು ಪ್ರಶಾಂತವಾಗಿಲ್ಲದಿರುವುದು : ಮಕ್ಕಳು ಓದುವ ಸ್ಥಳವು ಕೂಡ ಓದಿದ್ದೆಲ್ಲವು ನೆನಪಿನಲ್ಲಿ ಉಳಿಯಲು ಕಾರಣವಾಗುತ್ತದೆ. ಗಲಾಟೆ, ಗದ್ದಲಗಳಿಂದ ಕೂಡಿದ ವಾತಾವರಣದಲ್ಲಿ ಓದಿದರೆ ಯಾವ ವಿಷಯವು ತಲೆಗೆ ಹತ್ತುವುದೇ ಇಲ್ಲ. ಹೀಗಾಗಿ ಸುತ್ತಲಿನ ವಾತಾವರಣವು ಪ್ರಶಾಂತವಾಗಿರುವುದು ಮುಖ್ಯವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು