AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Knowledge: ವಿಶ್ವದಲ್ಲೇ ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ?

ಇತ್ತೀಚಿಗಷ್ಟೇ ವಿಶ್ವದಲ್ಲೇ ಅತಿ ಹೆಚ್ಚು ಪುಸ್ತಕಗಳನ್ನು ಪ್ರಕಟಿಸುವ ಟಾಪ್ 10 ದೇಶಗಳ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ವಾರ್ಷಿಕವಾಗಿ ಅತೀ ಹೆಚ್ಚು ಅಂದರೆ 275,000 ಕ್ಕೂ ಪುಸ್ತಕವನ್ನು ಪ್ರಕಟಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಮೊದಲ ಸ್ಥಾನವನ್ನು ಪಡೆದಿದೆ. ನಂತರ ಚೀನಾ ಮತ್ತು ಯುನೈಟೆಡ್ ಕಿಂಗ್‌ಡಮ್. ಭಾರತ 10ನೇ ಸ್ಥಾನದಲ್ಲಿದ್ದು, ಇಲ್ಲಿ 24ಕ್ಕೂ ಹೆಚ್ಚು ಭಾಷೆಗಳಲ್ಲಿ ಪ್ರತೀ ವರ್ಷ 90ಸಾವಿರಕ್ಕೂ ಅಧಿಕ ಪುಸ್ತಕಗಳು ಪ್ರಕಟವಾಗುತ್ತಿದೆ ಎಂದು ತಿಳಿದುಬಂದಿದೆ.

Knowledge: ವಿಶ್ವದಲ್ಲೇ ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆ ಎಷ್ಟನೇ ಸ್ಥಾನ?
ಅತೀ ಹೆಚ್ಚು ಪುಸ್ತಕ ಪ್ರಕಟಿಸುವ ಟಾಪ್​​ 10 ದೇಶ
ಅಕ್ಷತಾ ವರ್ಕಾಡಿ
|

Updated on: Jul 26, 2025 | 2:05 PM

Share

ಪುಸ್ತಕಗಳು ಮನುಷ್ಯನ ಶ್ರೇಷ್ಠ ಸ್ನೇಹಿತ ಇದ್ದಂತೆ, ಅವು ಜ್ಞಾನ, ಮಾಹಿತಿ ಮತ್ತು ಸ್ಫೂರ್ತಿಯ ಮೂಲವಾಗಿವೆ. ಜಾಗತೀಕರಣದ ಹಾವಳಿಯಲ್ಲಿಯೂ ಜನರಲ್ಲಿ ಪುಸ್ತಕ ಪ್ರೀತಿ ಕಡಿಮೆಯಾಗಿಲ್ಲ. ಇದೀಗ ವರದಿಯೊಂದು ಬಿಡುಗಡೆಯಾಗಿದ್ದು, ಪುಸ್ತಕಗಳನ್ನು ಮುದ್ರಿಸುವ ಟಾಪ್​ ಹತ್ತು ದೇಶಗಳ ಬಗ್ಗೆ ಇದು ಬಹಿರಂಗಪಡಿಸಿದೆ. ಇದರಲ್ಲಿ ಭಾರತವು 10ನೇ ಸ್ಥಾನದಲ್ಲಿದ್ದು, ಪ್ರತಿ ವರ್ಷ ಭಾರತದಲ್ಲಿ 24 ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 90,000 ಪುಸ್ತಕಗಳು ಪ್ರಕಟವಾಗುತ್ತವೆ ಎಂದು ತಿಳಿದುಬಂದಿದೆ.

ಭಾರತವು ಡಿಜಿಟಲ್ ಜಗತ್ತಿನಲ್ಲಿ ಮಾತ್ರವಲ್ಲದೆ ಮುದ್ರಿತ ಪದಗಳ ಜಗತ್ತಿನಲ್ಲಿಯೂ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ತೋರಿಸುತ್ತದೆ. ಈ ಪಟ್ಟಿಯಲ್ಲಿ ವಾರ್ಷಿಕವಾಗಿ ಅತೀ ಹೆಚ್ಚು ಅಂದರೆ 275,000 ಕ್ಕೂ ಪುಸ್ತಕವನ್ನು ಪ್ರಕಟಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಮೊದಲ ಸ್ಥಾನವನ್ನು ಪಡೆದಿದೆ.

ಟಾಪ್ 10 ರಲ್ಲಿ ಯಾವ ದೇಶಗಳಿವೆ?

  1. ಅಮೆರಿಕ
  2. ಚೀನಾ
  3. ಯುನೈಟೆಡ್ ಕಿಂಗ್‌ಡಮ್
  4. ರಷ್ಯಾ
  5. ಜರ್ಮನಿ
  6. ಇಟಲಿ
  7. ಫ್ರಾನ್ಸ್
  8. ಜಪಾನ್
  9. ಇರಾನ್
  10. ಭಾರತ

ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?

ವಿಶ್ವದ ಗರಿಷ್ಠ ಸಂಖ್ಯೆಯ ಪುಸ್ತಕಗಳನ್ನು ಮುದ್ರಿಸುವ ದೇಶಗಳಲ್ಲಿ ಭಾರತವೂ ಸೇರಿರುವುದು ಹೆಮ್ಮೆಯ ವಿಷಯ. ಭಾರತದ ಅತ್ಯಂತ ವಿಶೇಷವೆಂದರೆ ಪುಸ್ತಕಗಳನ್ನು ಇಂಗ್ಲಿಷ್‌ನಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು, ಬಂಗಾಳಿ, ಉರ್ದು, ಗುಜರಾತಿ, ತೆಲುಗು ಮುಂತಾದ 24 ಕ್ಕೂ ಹೆಚ್ಚು ಭಾಷೆಗಳಲ್ಲಿ ಮುದ್ರಿಸಲಾಗುತ್ತದೆ. ಭಾರತೀಯ ಓದುಗರ ಒಲವು ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎಂಬುದನ್ನು ಇಲ್ಲಿ ತಿಳಿಯಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ