AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ನದಿ ಆಂಧ್ರದಲ್ಲಿದ್ಯಾ? ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು, ವಿವಾದದ ಸುಳಿಯಲ್ಲಿ CBSE ಪಠ್ಯ..!

ಸಿಲೆಬಸ್ ನಲ್ಲಿನಲ್ಲಿ ಕರ್ನಾಟಕದ ಇತಿಹಾಸವನ್ನ ಮರೆಮಾಚುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ,

ತುಂಗಭದ್ರಾ ನದಿ ಆಂಧ್ರದಲ್ಲಿದ್ಯಾ? ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು, ವಿವಾದದ ಸುಳಿಯಲ್ಲಿ CBSE ಪಠ್ಯ..!
ತುಂಗಭದ್ರಾ ನದಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 16, 2022 | 8:16 PM

Share

ಬೆಂಗಳೂರು: ಟಿಪ್ಪು ಪಠ್ಯ ಪರಿಷ್ಕರಣೆ ವಿವಾದ ತಣ್ಣಗಾಯ್ತು. ಆದ್ರೆ, ಇದೀಗ ಕೇಂದ್ರೀಯ ಸಿಲೆಬಸ್ ನಲ್ಲಿನ ಅಂಶಗಳು ಮತ್ತೊಂದು ಪ್ರಮಾದಕ್ಕೆ ಕಾರಣವಾಗಿದೆ. ಶಾಲಾ ಕಾಲೇಜುಗಳ ಪಠ್ಯದಲ್ಲಿ ಟಿಪ್ಪು ಸುಲ್ತಾನ್, ವೈದ್ಯಕೀಯ ಸಮಾಜಶಾಸ್ತ್ರ ವಿವಾದ ತಣ್ಣಗಾಗುವ ಹೊತ್ತಲ್ಲೇ ಮತ್ತೊಂದು ಯಡವಟ್ಟು ಆಗಿದೆ. ಈ ಮೂಲಕ ಕರ್ನಾಟಕದ ಇತಿಹಾಸವನ್ನ ಮರೆಮಾಚುವ ಹುನ್ನಾರ ನಡೆದಿದೆ ಎಂದು ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ

ಅದು ನದಿಗಳ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡುವ ಕೆಲಸವಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸುತ್ತಿದೆ. ಇದೀಗ ಪುಸ್ತಕದಲ್ಲಿ ತುಂಗಭದ್ರಾಯರ ಹೆಸರಲ್ಲಿ ಹೊಸ ಪಾಲಿಟಿಕ್ಸ್ ಶುರುವಾಗಿದೆ. ಅದೇನೆಂದರೆ, ತುಂಗಾಭದ್ರಾ ಜಲಾಶಯ ನಮ್ಮದೇ ಅಂತ ಆಂಧ್ರ ಸರ್ಕಾರ ಹೇಳುತ್ತಿದ್ದರೆ, ಇದಕ್ಕೆ ಪುಷ್ಟಿ ಕೊಡುವಂತೆ 4ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕ ಸಾಕ್ಷಿಯಾಗಿದೆ.

ತುಂಗಭದ್ರಾ ಆಂಧ್ರದಲ್ಲಿದೆ ಎಂದು ಉಲ್ಲೇಖ

2020ರ ಹೊಸ ಶಿಕ್ಷಣ ನೀತಿಯ ಅನ್ವಯ ಸಿಬಿಎಸ್ಇ ಸಿಲೆಬಸ್ ರಚನೆಯಾಗಿದೆ. ಈ ಪೈಕಿ 4ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಪುಸ್ತಕದಲ್ಲಿ ದೊಡ್ಡ ಯಡವಟ್ಟು ನಡೆದಿದೆ. 10ನೇ ಪಾಠ ವಾಟರ್ ರಿಸೋಸರ್ಸ್ ಎಂಬ ಅಧ್ಯಾಯನದಲ್ಲಿ ನದಿ, ಅಣೆಕಟ್ಟುಗಳ ಪರಿಚಯ ಅಂಶ ಇರುತ್ತೆ. ಇದರಲ್ಲಿ ತುಂಗಾಭದ್ರ ಜಲಾಶಯ ಆಂಧ್ರ ಪ್ರದೇಶದಲ್ಲಿ ಇದೆ ಎಂದು ಉಲ್ಲೇಖ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲೂ ಸಾವಿರಾರು ಶಾಲೆಗಳು ಸಿಬಿಎಸ್ಇ ಪಠ್ಯ ಆಧಾರಿತ ಶಾಲೆಗಳಿವೆ. ಇದೀಗ ಪುಸ್ತಕ ಸಮಿತಿ ಮಾಡಿರುವ ಯಡವಟ್ಟಿಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಹಬ್ಬ-ಹರಿದಿನ, ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಯೋಜನೆ

ಅತಿದೊಡ್ಡ ಅಣೆಕಟ್ಟೆಗಳಲ್ಲಿ ಒಂದಾದ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರಪ್ರದೇಶದಲ್ಲಿಲ್ಲ. ಕರ್ನಾಟಕದ ಹೊಸಪೇಟೆ ಭಾಗದಲ್ಲಿ ಟಿಬಿ ಡ್ಯಾಮ್ ಇದೆ. ಆದರೆ, ಸಿಬಿಎಸ್‌ಇ ನಾಲ್ಕನೇ ತರಗತಿ ಪಠ್ಯಪುಸ್ತಕದಲ್ಲಿ ದೇಶದ ಪ್ರಮುಖ ವಿವಿಧೋದ್ದೇಶ ನದಿ ಯೋಜನೆಗಳ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರ ಪ್ರದೇಶದಲ್ಲಿದೆ ಎಂದು ತಪ್ಪು ಮಾಹಿತಿ ನೀಡಲಾಗಿದೆ. ಹೊಸಪೇಟೆಯಲ್ಲಿರುವ, ಬರೋಬ್ಬರಿ 135 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಅಣೆಕಟ್ಟು ಅಥವಾ ಪಂಪ ಸಾಗರವನ್ನು ಆಂಧ್ರ ಪ್ರದೇಶದಲ್ಲಿರುವ ಯೋಜನೆ ಎಂದು ಮಕ್ಕಳಿಗೆ ಕಲಿಸುವುದು ಎಷ್ಟು ಸರಿ?ಎಂದು ಮೋಹನ್‌ ದಾಸರಿ ಪ್ರಶ್ನೆ ಮಾಡಿದ್ದಾರೆ.

ಇಂದೆಂತಹ ನಾಚಿಕೆಯ ವಿಷಯ ಸಿಎಂ ಬಸವರಾಜ ಬೊಮ್ಮಾಯಿಯವರೇ ಎಂದು ದಾಸರಿ ಟ್ವೀಟ್ ಮಾಡಿ ಕಾಲೆಳೆದಿದ್ದು, ನಿಮ್ಮ ಶಿಗ್ಗಾವಿ ಕ್ಷೇತ್ರದಲ್ಲೂ ಹರಿಯುವ ತುಂಗಭದ್ರಾ ನದಿಗೆ ಸಂಬಂಧಿಸಿದ ಯೋಜನೆ ಬಗ್ಗೆಯೇ ತಪ್ಪು ಮಾಹಿತಿ ನೀಡಲಾಗಿದೆ ಅಂತ ಟ್ವೀಟ್ ಮಾಡಿ ಮುಖ್ಯಮಂತ್ರಿಗೆ ಕುಟುಕಿದ್ದಾರೆ. ಅಲ್ಲದೆ, ಕೂಡಲೇ ಒಂದರಿಂದ ಹನ್ನೆರಡನೇ ತರಗತಿಯ ಎಲ್ಲ ಸಿಬಿಎಸ್ಇ ಪಠ್ಯಕ್ರಮವನ್ನ ಪರಿಶೀಲನೆ ನಡೆಸುವಂತೆ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಸಿಬಿಎಸ್ ಇ ಪಠ್ಯದಲ್ಲಿ ಕರ್ನಾಟಕದ ಇತಿಹಾಸ ತಿರುಚಲಾಗಿದ್ಯಾ..?

1 ರಿಂದ 12ನೇ ತರಗತಿಯ ಸಿಬಿಎಸ್ಇ ಸಿಲೆಬಸ್ ನಲ್ಲಿ ಕರ್ನಾಟಕ ಇತಿಹಾಸವನ್ನ ಮರೆಮಾಚಲಾಗಿದೆ ಎಂದು ಆರೋಪ ಬಲವಾಗಿ ಕೇಳಿ ಬರ್ತಿದೆ. ಕರ್ನಾಟಕದಲ್ಲಿ ಪ್ರಸಿದ್ದ ಪಡೆದ ಜಿಲ್ಲೆಗಳನ್ನ ಇತಿಹಾಸವನ್ನ ಸಿಬಿಎಸ್ಇ ಪಠ್ಯ ಕ್ರಮದಲ್ಲಿ ತಿರುಚಲಾಗಿದೆಯಂತೆ. ರಾಜ್ಯದ ಪ್ರಸಿದ್ದ ಕಾರ್ಖಾನೆ, ಕಂಪನಿ, ನದಿ, ಸಮುದ್ರ, ಹಬ್ಬಗಳು ಸೇರಿದಂತೆ ಹೆಸರುವಾಸಿ ಪಡೆದ ಜಿಲ್ಲೆಗಳನ್ನ ಕೈಬಿಡಲಾಗಿದೆಂತೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಳಿಕ ಸಿದ್ದವಾದ ಪಠ್ಯದಲ್ಲಿ ಮಹಾ ಯಡವಟ್ಟು ನಡೆದಿದೆ. ಕೂಡಲೇ ಪರಿಶೀಲನೆ ನಡೆಸಿ, ರಾಜ್ಯದಲ್ಲಿನ ಸಿಬಿಎಸ್ಇ ಪಠ್ಯವನ್ನ ಬದಲಿಸುವಂತೆ ಶಿಕ್ಷಣ ತಜ್ಞರು, ಪೋಷಕರು ಹಾಗೂ ಆಮ್ ಆದ್ಮಿ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಒಟ್ಟಾರೆ, ರಾಜ್ಯಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಸಿಬಿಎಸ್ಇ ಶಾಲೆಗಳು ಇದೇ ಪಠ್ಯವನ್ನ ಒಳಗೊಂಡಿದೆ. ಇದೀಗ ತಪ್ಪು ಮಾಹಿತಿ ನೀಡಿರುವುದು ಪ್ರಮಾದಕ್ಕೆ ಕಾರಣವಾಗಿದ್ದು, ಕರ್ನಾಟಕದ ಇತಿಹಾಸ ತಿರುಚಿ, ಮರೆಮಾಚುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ಬಾಕಿ ವಿಷಯಗಳ ಪುಸ್ತಕಗಳನ್ನು ಪರಿಶೀಲನೆ ನಡೆಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ, ಶಿಕ್ಷಣ ಇಲಾಖೆ ಈ ವಿಚಾರವನ್ನ ಎಷ್ಟು ಗಂಭೀರವಾಗಿ ಪರಿಗಣಿಸುತ್ತೆ ಎಂದು ಕಾದು ನೋಡಬೇಕಿದೆ.

ವರದಿ: ಅನಿಲ್ ಕಲ್ಕೆರೆ, ಟಿವಿ9, ಬೆಂಗಳೂರು.

Published On - 8:14 pm, Fri, 16 December 22

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ