AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC 2023 Topper: ಉಡುಪಿ ಮೂಲದ ಭೂಮಿಕ ಪೈ ರಾಜ್ಯಕ್ಕೆ ಟಾಪರ್

ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಉಡುಪಿ ಮೂಲದ ಭೂಮಿಕ ಪೈ ಟಿವಿ9 ಜೊತೆ ಮಾತನಾಡಿದ್ದಾರೆ.

ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:May 08, 2023 | 1:36 PM

Share

ಎಸ್​ಎಸ್​ಎಲ್​ಸಿ (2022-23ನೇ ಸಾಲಿನ) ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಉಡುಪಿ ಮೂಲದ ಭೂಮಿಕ ಪೈ ಟಿವಿ9 ಜೊತೆ ಮಾತನಾಡಿದ್ದಾರೆ.

ಉಡುಪಿ ಮೂಲದ ಭೂಮಿಕ ಪೈ ಬೆಂಗಳೂರಿನ ನ್ಯೂ ಮೆಕಾಲೆ ಇಂಗ್ಲಿಷ್ ಹೈ ಸ್ಕೂಲ್ ವಿದ್ಯಾರ್ಥಿನಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದರೆ. ಭೂಮಿಕಾ ತಂದೆ ತಾಯಿ ಮೂಲತಃ ಉಡುಪಿಯವರು. ಭೂಮಿಕ ಅಜ್ಜಿ ಮನೆಯಲ್ಲಿ ಸಂಭ್ರಮ, ಸಿಹಿ ಹಂಚಿ ಸಡಗರ ಮನೆ ಮಾಡಿದೆ. “625 ಅಂಕ ನಾನು ನಿರೀಕ್ಷಿಸಿರಲಿಲ್ಲ. 95% ಗಿಂತ ಹೆಚ್ಚು ಬರುತ್ತೆ ಎಂದು ಖಾತ್ರಿ ಇತ್ತು. ಔಟ್ ಆಫ್ ಔಟ್ ಅಂಕ ಬಂದಿರೋದು ಬಹಳ ಖುಷಿಯಾಗಿದೆ. ಮನೆಯವರ ಬೆಂಬಲ ಹಾಗೂ ಶಾಲೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಕರೋನ ಕಾಲಘಟ್ಟದಲ್ಲಿ ಆನ್ಲೈನ್ ತರಗತಿ ಮಾಡಿ ಸಹಕರಿಸಿದ್ದರು.” ಎಂದು ಭೂಮಿಕಾ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಪರೀಕ್ಷಾ ತಯಾರಿ ಬಗ್ಗೆ ಮಾತನಾಡಿದ ಭೂಮಿಕಾ, “ಆಯಾ ದಿನದ ಪಾಠವನ್ನು ಆಯಾ ದಿನವೇ ಓದಿದ್ದೇನೆ. ಯಾವುದೇ ಒತ್ತಡವಿರದೆ ಓದಿದ ಕಾರಣ ಪೂರ್ಣ ಅಂಕಗಳಿದ್ದೇನೆ. ಮೊಬೈಲ್ ಮತ್ತು ಟಿವಿ ಬಳಸಿದ್ದೇನೆ ಆದರೆ ಅದು ನನ್ನ ಓದಿಗೆ ಅಡ್ಡಿ ಬಂದಿಲ್ಲ. ಕಷ್ಟಪಟ್ಟು ಅಲ್ಲ ಇಷ್ಟಪಟ್ಟು ಓದಿದ್ದೇನೆ” ಎಂದು ಅಜ್ಜಿಮನೆಯಲ್ಲಿ ಸಂಭ್ರಮಿಸುತ್ತಿರುವುದಕ್ಕೆ ಟಾಪರ್ ಭೂಮಿಕ ಪೈ ಹೇಳಿದರು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12. ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ, ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

Published On - 1:27 pm, Mon, 8 May 23

Follow Us
ನಯನಾ ಎಸ್​ಪಿ
ನಯನಾ ಎಸ್​ಪಿ

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!