AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Degree College Reopen: ಪದವಿ ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ; ಸೆಪ್ಟೆಂಬರ್ 30ರ ಒಳಗೆ ದಾಖಲಾತಿ, ಅಕ್ಟೋಬರ್ 1ರಿಂದ ತರಗತಿ

ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನ ಒಳಗೆ 2021-22ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಸಿ, ಅಕ್ಟೋಬರ್​ 1ರಿಂದ ಕಾಲೇಜು ಆರಂಭಿಸಿ ಎಂದು ಯುಜಿಸಿ ಸೂಚನೆ ನೀಡಿದೆ.

Degree College Reopen: ಪದವಿ ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ; ಸೆಪ್ಟೆಂಬರ್ 30ರ ಒಳಗೆ ದಾಖಲಾತಿ, ಅಕ್ಟೋಬರ್ 1ರಿಂದ ತರಗತಿ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on:Jul 17, 2021 | 8:39 AM

Share

ದೆಹಲಿ: ಪದವಿ ಕಾಲೇಜುಗಳ ಆರಂಭದ ಬಗ್ಗೆ ಇದ್ದ ಗೊಂದಲಕ್ಕೆ ಯುಜಿಸಿ (UGC) ತೆರೆ ಎಳೆದಿದ್ದು, ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳನ್ನು (Degree College) ತೆರೆಯಲು ಸೂಚನೆ ನೀಡಿದೆ. ಈ ಬಗ್ಗೆ ಮಾರ್ಗಸೂಚಿ (UGC Guidelines) ಹೊರಡಿಸಿರುವ ಯುಜಿಸಿ, ಎಲ್ಲ ವಿಶ್ವವಿದ್ಯಾಲಯಗಳಿಗೆ, ಕಾಲೇಜುಗಳಿಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನ ಒಳಗೆ 2021-22ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಸಿ, ಅಕ್ಟೋಬರ್​ 1ರಿಂದ ಕಾಲೇಜು ಆರಂಭಿಸಿ (Degree College Reopen) ಎಂದು ಸೂಚನೆ ನೀಡಿದೆ.

ಈ ಬಗ್ಗೆ ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಮಾತನಾಡಿದ್ದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ, ಅಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್ 1 ರಿಂದ ಪ್ರಥಮ ವರ್ಷದ ಪದವಿ‌ ವಿದ್ಯಾರ್ಥಿಗಳಿಗೆ ತರಗತಿ (Degree College Classes) ಆರಂಭವಾಗಲಿದೆ ಎಂದು ತಿಳಿಸಿದ್ದರು. ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳು ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿದ್ದು, ಪರೀಕ್ಷೆ ನಡೆಸದ ಬೆಂಗಳೂರು ವಿವಿ, ಗುಲ್ಬರ್ಗ ವಿವಿ, ಕರ್ನಾಟಕ ವಿವಿಗಳಿಗೆ ಅಗಸ್ಟ್ 15 ರೊಳಗೆ ಬಾಕಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಪದವಿಯ ಸಮ ಸೆಮಿಸ್ಟರ್ ಪರೀಕ್ಷೆಗಳು ಅಕ್ಟೋಬರ್ 15 ರೊಳಗೆ ನಡೆಸಲು ಸೂಚನೆ ನೀಡಲಾಗಿದೆ. ಸದ್ಯ ವರ್ಚುವಲ್ ತರಗತಿಗಳನ್ನು ನಡೆಸಲಾಗುತ್ತಿದ್ದು, ಸಮ ಸೆಮಿಸ್ಟರ್ ತರಗತಿ ಮೇ ತಿಂಗಳಿಂದಲೇ ಆರಂಭವಾಗಿದೆ ಎಂದು ಅವರು ಹೇಳಿದ್ದರು.

ಜುಲೈ 26 ರಿಂದ 28ರವರೆಗೆ ಡಿಪ್ಲೊಮಾ ಪ್ರಾಕ್ಟಿಕಲ್ ಪರೀಕ್ಷೆ ನಡೆಯಲಿದ್ದು, ಅಗಸ್ಟ್ 2 ರಿಂದ ಅಗಸ್ಟ್ 21ರವರೆಗೆ ಥಿಯರಿ ಡಿಪ್ಲೊಮಾ ಪರೀಕ್ಷೆ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ಡಾ.ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದರು. ಇದೀಗ ಯುಜಿಸಿ ಅಧಿಕೃತವಾಗಿ ಸೂಚನೆ ನೀಡಿದ್ದು, ಅಕ್ಟೋಬರ್ 1 ರಿಂದ ಪದವಿ ಕಾಲೇಜಿನ ತರಗತಿಗಳು ಆರಂಭವಾಗಲಿವೆ. ಕರ್ನಾಟಕದಲ್ಲಿ ಜುಲೈ 20ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಲಿದ್ದು, ಮುಂದಿನ ವಿದ್ಯಾಭ್ಯಾಸಕ್ಕಾಗಿ ಪದವಿ ತರಗತಿಗಳಿಗೆ ಸೇರಲು ಅನುಕೂಲವಾಗಲಿದೆ.

ಇದನ್ನೂ ಓದಿ: Degree College Classes: ಅಕ್ಟೋಬರ್1 ರಿಂದ ಪ್ರಥಮ ವರ್ಷದ ಪದವಿ‌ ವಿದ್ಯಾರ್ಥಿಗಳಿಗೆ ತರಗತಿ ಆರಂಭ: ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ಮಾಹಿತಿ

Published On - 8:39 am, Sat, 17 July 21

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ