AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UGC NET 2021: ಯುಜಿಸಿ ನೆಟ್ ಪರೀಕ್ಷೆಯ 2ನೇ ಹಂತದ ವೇಳಾಪಟ್ಟಿ ಬಿಡುಗಡೆ; ಪರೀಕ್ಷೆ, ದಿನಾಂಕದ ಮಾಹಿತಿ ಇಲ್ಲಿದೆ

UGC NET 2021 Phase II: ಯುಜಿಸಿ ನೆಟ್ ಪರೀಕ್ಷೆಯ ಎರಡನೇ ಹಂತದ ಕೆಲವು ಪರೀಕ್ಷೆಗಳ ದಿನಾಂಕಗಳನ್ನು ಘೋಷಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

UGC NET 2021: ಯುಜಿಸಿ ನೆಟ್ ಪರೀಕ್ಷೆಯ 2ನೇ ಹಂತದ ವೇಳಾಪಟ್ಟಿ ಬಿಡುಗಡೆ; ಪರೀಕ್ಷೆ, ದಿನಾಂಕದ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 18, 2021 | 2:14 PM

Share

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ- ಎನ್​ಟಿಎ (NTA) ಯುಜಿಸಿ ನೆಟ್ 2021 ಪರೀಕ್ಷೆಯ ಎರಡನೇ ಹಂತದ ಕೆಲವು ವಿಷಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 2020 ಮತ್ತು ಜೂನ್ 2021 ರ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ನೆಟ್) ಹಂತ ಎರಡರ ಪರೀಕ್ಷೆಗಳು 2021ರ  ಡಿಸೆಂಬರ್ 24 ರಿಂದ ಡಿಸೆಂಬರ್ 27 ರವರೆಗೆ ನಡೆಯಲಿವೆ ಎಂದು ಅದು ಘೋಷಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ ಆದ ugcnet.nta.nic.in ನಲ್ಲಿ ಯುಜಿಸಿ ನೆಟ್​ನ (UGC NET 2021) ಸಂಪೂರ್ಣ ವೇಳಾಪಟ್ಟಿಯನ್ನು ಪರಿಶೀಲಿಸಬಹುದು.

ಅಧಿಕೃತ ಸೂಚನೆಯ ಪ್ರಕಾರ, ಹಂತ ಎರಡರ ಐದು ವಿಷಯಗಳಾದ ಕನ್ನಡ, ಬಂಗಾಳಿ, ಗೃಹ ವಿಜ್ಞಾನ, ಹಿಂದಿ ಮತ್ತು ಸಂಸ್ಕೃತಗಳಿಗೆ ದಿನಾಂಕವಾರು ಮತ್ತು ಶಿಫ್ಟ್​ವಾರು ಡಿಸೆಂಬರ್ 24, 26 ಮತ್ತು 27, 2021 ರಂದು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸಲಾಗುತ್ತಿದ್ದು, ಮೊದಲನೆಯ ಶಿಫ್ಟ್​ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಎರಡನೆಯ ಶಿಫ್ಟ್​ನಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಅವಧಿಯು 180 ನಿಮಿಷಗಳವರೆಗೆ ಇರಲಿದ್ದು, ಪೇಪರ್ 1 ಮತ್ತು ಪೇಪರ್ 2ರ ನಡುವೆ ಯಾವುದೇ ವಿರಾಮಗಳಿರುವುದಿಲ್ಲ.

ಇದಲ್ಲದೆ, ಯುಜಿಸಿ ನೆಟ್​ನ ಇನ್ನೂ ಹಲವು ವಿಷಯಗಳಿಗೆ ಪರೀಕ್ಷೆಗಳು ನಡೆಯಬೇಕಿದೆ. ಅವುಗಳ ದಿನಾಂಕವನ್ನು ಸದ್ಯದಲ್ಲೇ ತಿಳಿಸುವುದಾಗಿ ಎನ್​ಟಿಎ ತಿಳಿಸಿದೆ. ಹಂತ ಎರಡರ ಉಳಿದ 2 ವಿಷಯಗಳಾದ ಭೂಗೋಳಶಾಸ್ತ್ರ ಮತ್ತು ಸಮಾಜಶಾಸ್ತ್ರ ಮತ್ತು ಹಂತ 1 ರ ನಾಲ್ಕು ವಿಷಯಗಳಾದ ಸಾಮಾಜಿಕ ಕೆಲಸ, ಒಡಿಯಾ, ತೆಲುಗು ಮತ್ತು ಕಾರ್ಮಿಕ ಕಲ್ಯಾಣ ಹಾಗೂ ಜವಾದ್ ಚಂಡಮಾರುತದಿಂದ ಮುಂದೂಡಲ್ಪಟ್ಟ ವಿಷಯಗಳ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಘೋಷಿಸಲಾಗಿದೆ.

ಯುಜಿಸಿ ನೆಟ್ ಪರೀಕ್ಷೆಯ ಅಡ್ಮಿಟ್ ಕಾರ್ಡ್​​ ಅನ್ನು ಪರೀಕ್ಷಾ ಮಂಡಳಿಯು ಸಮಯಕ್ಕೆ ತಕ್ಕಂತೆ ಬಹಿರಂಗಪಡಿಸಲಿದೆ. ಯುಜಿಸಿ ನೆಟ್​ನ ಅಧಿಕೃತ ವೆಬ್​ಸೈಟ್ ಮೂಲಕ ಅಭ್ಯರ್ಥಿಗಳು ಹಾಲ್​ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನೂ ಓದಿ:

ಐಎಎಸ್ ಅಧಿಕಾರಿಗಳನ್ನು ಹುಟ್ಟುಹಾಕುವಲ್ಲಿ ಯಾವ ರಾಜ್ಯಗಳಿಗೆ ಎಷ್ಟನೇ ಸ್ಥಾನ? ಕುತೂಹಲಕಾರಿ ಅಂಕಿಅಂಶ ಇಲ್ಲಿದೆ

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ಎಡವಟ್ಟು – ಪರಿಶಿಷ್ಟ ಜಾತಿಗೆ ಮೀಸಲಿದ್ದ ಸೀಟು ಬೇರೆಯವರ ಪಾಲು

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ