AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?

ಜನವರಿ 15ಕ್ಕೆ ನಿಗದಿಯಾಗಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿಗಳ ಅವರ ವಿನಂತಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಜ. 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಹರೀಶ್ ಜಿ.ಆರ್​.
| Edited By: |

Updated on:Jan 13, 2025 | 9:56 PM

Share

ನವ ದೆಹಲಿ, ಜನವರಿ 13: ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಪೊಂಗಲ್, ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಘೋಷಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆಯನ್ನು ಮುಂದೂವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಸ್ಪಂದಿಸಿರುವ ಅವರು ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 16 ರಂದು ನಿಗದಿಪಡಿಸಲಾದ ಪರೀಕ್ಷೆಯನ್ನು ಹಿಂದಿನ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪಿಎಚ್‌ಡಿ ಪ್ರವೇಶಾತಿ, ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಪರೀಕ್ಷೆಯನ್ನು ಜನವರಿ 3 ರಿಂದ ಜನವರಿ 16 ರವರೆಗೆ 85 ವಿಷಯಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲಾಗುತ್ತಿದೆ.

ಇದನ್ನೂ ಓದಿ: SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಜನವರಿ 15 ರಂದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಸಂಸ್ಕೃತ, ನೇಪಾಳಿ, ಕಾನೂನು, ಜಪಾನೀಸ್, ಮಹಿಳಾ ಅಧ್ಯಯನ, ಮಲಯಾಳಂ, ಉರ್ದು, ಕೊಂಕಣಿ, ಅಪರಾಧ ಶಾಸ್ತ್ರ, ಜಾನಪದ ಸಾಹಿತ್ಯ, ಎಲೆಕ್ಟ್ರಾನಿಕ್ ವಿಜ್ಞಾನ, ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳಿಗೆ ಪರೀಕ್ಷೆ ನಿಗದಿಯಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:42 pm, Mon, 13 January 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ