AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?

ಜನವರಿ 15ಕ್ಕೆ ನಿಗದಿಯಾಗಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿಗಳ ಅವರ ವಿನಂತಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಜ. 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಹರೀಶ್ ಜಿ.ಆರ್​.
| Edited By: |

Updated on:Jan 13, 2025 | 9:56 PM

Share

ನವ ದೆಹಲಿ, ಜನವರಿ 13: ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಪೊಂಗಲ್, ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಘೋಷಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆಯನ್ನು ಮುಂದೂವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಸ್ಪಂದಿಸಿರುವ ಅವರು ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 16 ರಂದು ನಿಗದಿಪಡಿಸಲಾದ ಪರೀಕ್ಷೆಯನ್ನು ಹಿಂದಿನ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪಿಎಚ್‌ಡಿ ಪ್ರವೇಶಾತಿ, ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಪರೀಕ್ಷೆಯನ್ನು ಜನವರಿ 3 ರಿಂದ ಜನವರಿ 16 ರವರೆಗೆ 85 ವಿಷಯಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲಾಗುತ್ತಿದೆ.

ಇದನ್ನೂ ಓದಿ: SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಜನವರಿ 15 ರಂದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಸಂಸ್ಕೃತ, ನೇಪಾಳಿ, ಕಾನೂನು, ಜಪಾನೀಸ್, ಮಹಿಳಾ ಅಧ್ಯಯನ, ಮಲಯಾಳಂ, ಉರ್ದು, ಕೊಂಕಣಿ, ಅಪರಾಧ ಶಾಸ್ತ್ರ, ಜಾನಪದ ಸಾಹಿತ್ಯ, ಎಲೆಕ್ಟ್ರಾನಿಕ್ ವಿಜ್ಞಾನ, ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳಿಗೆ ಪರೀಕ್ಷೆ ನಿಗದಿಯಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:42 pm, Mon, 13 January 25

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್