AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Prelims Exam 2024 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಕೇಂದ್ರ ಲೋಕಸೇವಾ ಆಯೋಗವು ಸಿಎಸ್‌ಇ ಹಾಗೂ ಇಂಡಿಯನ್ ಫಾರೆಸ್ಟ್‌ ಸರ್ವೀಸ್‌ ಪೂರ್ವಭಾವಿ ಪರೀಕ್ಷೆಯನ್ನು ಮೇ 26, 2024 ರಂದು ನಡೆಸಲು ದಿನಾಂಕವು ನಿಗದಿಯಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಾಗರಿಕ ಸೇವಾ ಪ್ರಾಥಮಿಕ ಪರೀಕ್ಷೆಯನ್ನು ಜೂನ್ 16 ಕ್ಕೆ ಮುಂದೂಡಲಾಗಿದೆ.

UPSC Prelims Exam 2024 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 20, 2024 | 2:06 PM

Share

ಯುಪಿಎಸ್​​ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ (ಪ್ರಿಲಿಮಿನರಿ) 2024 ಕ್ಕೆ ತಯಾರಿ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಹೊರ ಬಿದ್ದಿದೆ. ಲೋಕಸಭಾ ಚುನಾವಣೆಯ ದಿನಾಂಕಗಳು ಪ್ರಕಟವಾದ ಹಿನ್ನಲೆಯಲ್ಲಿ ಇದೀಗ ಪೂರ್ವಭಾವಿ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ವು ಮುಂದೂಡಿದೆ.

ಪರೀಕ್ಷಾ ದಿನಾಂಕ ಮುಂದೂಡಿಕೆಯ ಬಗ್ಗೆ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ. ಯುಪಿಎಸ್​​ಸಿ ನೀಡಿದ ಮಾಹಿತಿಯ ಪ್ರಕಾರ, ಸಿಎಸ್‌ಇ ಹಾಗೂ ಇಂಡಿಯನ್ ಫಾರೆಸ್ಟ್‌ ಸರ್ವೀಸ್‌ ಪೂರ್ವಭಾವಿ ಪರೀಕ್ಷೆಯನ್ನು 26 ಮೇ 2024 ರ ಬದಲಿಗೆ 16 ಜೂನ್ 2024 ರಂದು ನಡೆಸಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ: ಸರ್ಕಾರದ ಮೇಲ್ಮನವಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಹಲವಾರು ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಲೋಕಸೇವಾ ಆಯೋಗವು ಈ ನೇಮಕಾತಿಯ ಪ್ರಕ್ರಿಯೆಯ ಮೂಲಕ 1206 ಒಟ್ಟು ಖಾಲಿ ಹುದ್ದೆಗಳನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಭರ್ತಿ ಮಾಡಿಕೊಳ್ಳಲಿದೆ. ಇವುಗಳಲ್ಲಿ 1056 ಹುದ್ದೆಗಳನ್ನು ಭಾರತೀಯ ಆಡಳಿತ ಸೇವೆ/ಐಎಎಸ್ (ನಾಗರಿಕ ಸೇವೆಗಳು) ಗಾಗಿ ಮೀಸಲಿಡಲಾಗಿದೆ. ಅದಲ್ಲದೇ 150 ಹುದ್ದೆಗಳನ್ನು ಭಾರತೀಯ ಅರಣ್ಯ ಸೇವೆಗೆ (ಐಎಫ್‌ಎಸ್) ಮೀಸಲಿಡಲಾಗಿದೆ. ಯುಪಿಎಸ್​​ಸಿ ಸಿಎಸ್ ಇ ಪ್ರಿಲಿಮಿನರಿ ಪರೀಕ್ಷೆ 2024 ಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ