AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ 100ಕ್ಕೆ 151 ಅಂಕ; ರಿಸಲ್ಟ್​ ನೋಡಿ ವಿದ್ಯಾರ್ಥಿಯೇ ಶಾಕ್

Bihar News: ಎರಡೂ ಮಾರ್ಕ್‌ಶೀಟ್‌ಗಳು ಟೈಪಿಂಗ್ ದೋಷಗಳನ್ನು ಹೊಂದಿವೆ. ಮುದ್ರಣ ದೋಷಗಳನ್ನು ಸರಿಪಡಿಸಿದ ನಂತರ, ಇಬ್ಬರು ವಿದ್ಯಾರ್ಥಿಗಳಿಗೂ ಹೊಸ ಅಂಕಪಟ್ಟಿಗಳನ್ನು ನೀಡಲಾಗುವುದು ಎಂದು ವಿವಿ ರಿಜಿಸ್ಟ್ರಾರ್ ಮುಷ್ತಾಕ್ ಅಹ್ಮದ್ ತಿಳಿಸಿದ್ದಾರೆ.

Viral News: ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ 100ಕ್ಕೆ 151 ಅಂಕ; ರಿಸಲ್ಟ್​ ನೋಡಿ ವಿದ್ಯಾರ್ಥಿಯೇ ಶಾಕ್
ಸಂಗ್ರಹ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 01, 2022 | 12:01 PM

Share

ಪಾಟ್ನಾ: ಪರೀಕ್ಷೆಗಳನ್ನು ಆಯೋಜಿಸುವಾಗ ಅಥವಾ ಫಲಿತಾಂಶ (Exam Results) ಪ್ರಕಟಿಸುವಾಗ ಕೆಲವು ಪ್ರಮಾದಗಳು ಆಗುವುದು ಸಾಮಾನ್ಯ. ಇದರಿಂದ ಶಿಕ್ಷಣ ಇಲಾಖೆ (Education Department) ತೀವ್ರ ಮುಜುಗರಕ್ಕೀಡಾಗಿ ತಲೆ ತಗ್ಗಿಸಿರುವ ಅನೇಕ ಉದಾಹರಣೆಗಳೂ ಇವೆ. ಇದೀಗ ಬಿಹಾರದ (Bihar) ದರ್ಬಂಗಾ ಜಿಲ್ಲೆಯ ಸರ್ಕಾರಿ ಸ್ವಾಮ್ಯದ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯದ (ಎಲ್‌ಎನ್‌ಎಂಯು) ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ಪೊಲಿಟಿಕಲ್ ಸೈನ್ಸ್​ ವಿಭಾಗದಲ್ಲಿ 100ಕ್ಕೆ 151 ಅಂಕ ಬಂದಿದೆ. ತನ್ನ ರಿಸಲ್ಟ್ ನೋಡಿ ಆ ವಿದ್ಯಾರ್ಥಿಯೇ ಶಾಕ್​ನಿಂದ ಇನ್ನೂ ಹೊರಗೆ ಬಂದಿಲ್ಲ.

ವಾರ್ಸಿಟಿಯ ಕಲಾ ವಿಭಾಗದ ವಿದ್ಯಾರ್ಥಿಯು ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ 100ಕ್ಕೆ 151 ಅಂಕಗಳನ್ನು ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. “ನನ್ನ ಫಲಿತಾಂಶವನ್ನು ನೋಡಿ ನನಗೆ ನಿಜವಾಗಿಯೂ ಆಶ್ಚರ್ಯವಾಯಿತು. ಇದು ತಾತ್ಕಾಲಿಕ ಅಂಕಪಟ್ಟಿಯಾಗಿದ್ದರೂ, ಫಲಿತಾಂಶವನ್ನು ಬಿಡುಗಡೆ ಮಾಡುವ ಮೊದಲು ಅಧಿಕಾರಿಗಳು ಅದನ್ನು ಪರಿಶೀಲಿಸಬೇಕಾಗಿತ್ತು” ಎಂದು ಆ ವಿದ್ಯಾರ್ಥಿ ಹೇಳಿದ್ದಾನೆ.

ಇದನ್ನೂ ಓದಿ: ಅಮ್ಮನ ಮರಣದ ನಂತರ ಮಗಳನ್ನು ಬಿಟ್ಟು ಹೋದ ಅಪ್ಪ; ಅಜ್ಜಿ ಮಡಿಲಲ್ಲಿ ಬೆಳೆದ ಬಾಲೆಗೆ 10ನೇ ತರಗತಿಯಲ್ಲಿ ಶೇ 99.4 ಅಂಕ

ಮತ್ತೊಬ್ಬ ವಿದ್ಯಾರ್ಥಿ ತನ್ನ ಬಿಕಾಂ ಪರೀಕ್ಷೆಯಲ್ಲಿ ಅಕೌಂಟಿಂಗ್ ಮತ್ತು ಫೈನಾನ್ಸ್​ ಪ್ರಶ್ನೆಪತ್ರಿಕೆಯಲ್ಲಿ ಸೊನ್ನೆ ಅಂಕವನ್ನು ಪಡೆದಿದ್ದಾನೆ. ಆದರೂ ಆತನ ಪತ್ರಿಕೆಯಲ್ಲಿ ಪಾಸ್ ಎಂದು ನಮೂದಿಸಲಾಗಿದ್ದು, ಮುಂದಿನ ತರಗತಿಗೆ ಆತ ತೇರ್ಗಡೆ ಹೊಂದಿದ್ದಾನೆ.

“ಇದು ಟೈಪಿಂಗ್ ದೋಷ ಎಂದು ವಿಶ್ವವಿದ್ಯಾನಿಲಯ ಒಪ್ಪಿಕೊಂಡಿದೆ. ಬಳಿಕ ಅವರು ನನಗೆ ಪರಿಷ್ಕೃತ ಅಂಕ ಪಟ್ಟಿಯನ್ನು ನೀಡಿದ್ದಾರೆ” ಎಂದು ಆ ವಿದ್ಯಾರ್ಥಿ ಹೇಳಿದ್ದಾನೆ.

ಇದನ್ನೂ ಓದಿ: KCET Results 2022: ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿ ವಿದ್ಯಾರ್ಥಿನಿಯರದ್ದೇ ಮೇಲುಗೈ

ಎರಡೂ ಮಾರ್ಕ್‌ಶೀಟ್‌ಗಳು ಟೈಪಿಂಗ್ ದೋಷಗಳನ್ನು ಹೊಂದಿವೆ ಎಂದು ರಿಜಿಸ್ಟ್ರಾರ್ ಮುಷ್ತಾಕ್ ಅಹ್ಮದ್ ಪಿಟಿಐಗೆ ತಿಳಿಸಿದ್ದಾರೆ. ಮುದ್ರಣ ದೋಷಗಳನ್ನು ಸರಿಪಡಿಸಿದ ನಂತರ, ಇಬ್ಬರು ವಿದ್ಯಾರ್ಥಿಗಳಿಗೂ ಹೊಸ ಅಂಕಪಟ್ಟಿಗಳನ್ನು ನೀಡಲಾಗುವುದು. ಅದು ಕೇವಲ ಮುದ್ರಣ ದೋಷವಾಗಿದ್ದು, ಮೌಲ್ಯಮಾಪನದಲ್ಲಿ ಬೇರೇನೂ ಸಮಸ್ಯೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

Published On - 11:59 am, Mon, 1 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!