AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VTU Exam: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

VTU Exam: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರImage Credit source: istock
ಗಣಪತಿ ಶರ್ಮಾ
|

Updated on: Apr 18, 2023 | 7:12 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (Visvesvaraya Technological University) ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ವಿಚಾರವಾಗಿ ಮಂಗಳವಾರ ಸಂಜೆ ವಿಟಿಯು ಮಾಹಿತಿ ನೀಡಿದೆ. ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಏಪ್ರಿಲ್‌ 20 ರಿಂದ ನಿಗದಿಯಾಗಿದ್ದವು. ವಿಟಿಯು ವ್ಯಾಪ್ತಿಯ ಕಾಲೇಜುಗಳ ಉಪನ್ಯಾಸಕರನ್ನು ಚುನಾವಣೆಯ ಕೆಲಸಕ್ಕೆ ಬಳಸಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಟಿಯು ತಿಳಿಸಿದೆ.

ಚುನಾವಣೆಯ ಕೆಲಸಕ್ಕೆ ಎಲ್ಲ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ. ಜತೆಗೆ ಕೆಲವು ತಾಂತ್ರಿಕ ಸಮಸ್ಯೆಗಳೂ ಎದುರಾಗಿವೆ. ಹೀಗಾಗಿ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ವಿಟಿಯು ತಿಳಿಸಿದೆ. ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ಏಪ್ರಿಲ್ 27ರಿಂದ ನಡೆಸಲು ವಿಟಿಯು ತೀರ್ಮಾನಿಸಿದೆ.

ಇದನ್ನೂ ಓದಿ: CUET PG 2023: ಸಿಯುಇಟಿ ಪಿಜಿ ನೋಂದಣಿಗಳು ನಾಳೆ ಮುಚ್ಚಲಿವೆ; ನೋಂದಣಿ ಪ್ರಕ್ರಿಯೆ ಹೀಗಿದೆ

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 20ರ ವರೆಗೆ ನಡೆಯಲಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಹೀಗಾಗಿ ಸದ್ಯ ಶಿಕ್ಷಕರು, ಉಪನ್ಯಾಸಕರು ಚುನಾವಣೆ ಕರ್ತವ್ಯದಲ್ಲಿ ವ್ಯಸ್ತರಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?